AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್​ ಬಂದ್ ಇದುವರೆಗೆ ಯಾವತ್ತೂ ಯಶಸ್ವಿಯಾಗಿಲ್ಲ.. ತಲೆಕೆಡಿಸಿಕೊಳ್ಳಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಜನರು ತಲೆಕೆಡಿಸಿಕೊಳ್ಳಬೇಡಿ.. ಭಾರತ್​ ಬಂದ್​ ಇದುವರೆಗೆ ಎಲ್ಲಿಯೂ ಯಶಸ್ವಿಯಾಗಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಇಂದು ವಿಧಾನಸೌಧದಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಎಂದಿಗೂ ರೈತರ ವಿರುದ್ಧ ಹೋಗೋದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ನಮ್ಮ ರಾಜ್ಯ ಸರ್ಕಾರ ಸದಾ ರೈತ ಪರ ಸರ್ಕಾರಗಳು. ಇದೀಗ ರಾಜಕೀಯಕ್ಕಾಗಿ ಸರ್ಕಾರಗಳ ವಿರುದ್ಧ ಬಂದ್ ಮಾಡುತ್ತಿರುವುದು ಸರಿಯಲ್ಲ. ಕಾಂಗ್ರೆಸ್​ ಮುಳುಗುತ್ತಿರುವ ಹಡಗು ಎಂದು ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿಯಿಂದ ಜನಜಾಗೃತಿ ಇನ್ನು ಟ್ವೀಟ್ […]

ಭಾರತ್​ ಬಂದ್ ಇದುವರೆಗೆ ಯಾವತ್ತೂ ಯಶಸ್ವಿಯಾಗಿಲ್ಲ.. ತಲೆಕೆಡಿಸಿಕೊಳ್ಳಬೇಡಿ: ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ
Lakshmi Hegde
|

Updated on:Dec 08, 2020 | 11:34 AM

Share

ಬೆಂಗಳೂರು: ರಾಜ್ಯದ ಜನರು ತಲೆಕೆಡಿಸಿಕೊಳ್ಳಬೇಡಿ.. ಭಾರತ್​ ಬಂದ್​ ಇದುವರೆಗೆ ಎಲ್ಲಿಯೂ ಯಶಸ್ವಿಯಾಗಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಇಂದು ವಿಧಾನಸೌಧದಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಎಂದಿಗೂ ರೈತರ ವಿರುದ್ಧ ಹೋಗೋದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ನಮ್ಮ ರಾಜ್ಯ ಸರ್ಕಾರ ಸದಾ ರೈತ ಪರ ಸರ್ಕಾರಗಳು. ಇದೀಗ ರಾಜಕೀಯಕ್ಕಾಗಿ ಸರ್ಕಾರಗಳ ವಿರುದ್ಧ ಬಂದ್ ಮಾಡುತ್ತಿರುವುದು ಸರಿಯಲ್ಲ. ಕಾಂಗ್ರೆಸ್​ ಮುಳುಗುತ್ತಿರುವ ಹಡಗು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿಯಿಂದ ಜನಜಾಗೃತಿ ಇನ್ನು ಟ್ವೀಟ್ ಮೂಲಕವೂ ಸಹ ಸಿಎಂ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡು, ಬಂದ್​ ವಿರೋಧಿಸಿದ್ದಾರೆ. ಇದೀಗ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳು, ಹಿಂದೆ ಅದರ ಪರವಾಗಿದ್ದವು. ಮಸೂದೆಯ ಕುರಿತು ರೈತರ ದಾರಿ ತಪ್ಪಿಸುತ್ತಿವೆ.. ಈ ಮೂಲಕ ರೈತರಿಗೆ ಕೃಷಿ ಕಾಯ್ದೆಗಳಿಂದ ಆಗುವ ಅನುಕೂಲತೆಗಳನ್ನು ತಪ್ಪಿಸುತ್ತಿವೆ. ಇದನ್ನು ಒಪ್ಪಲು ಸಾಧ್ಯವಿಲ್ಲ.. ಬಿಜೆಪಿಯಿಂದ ಜನಜಾಗೃತಿ ಮೂಡಿಸುತ್ತೇವೆ ಎಂದಿದ್ದಾರೆ.

ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಾಗಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯುತ್ತದೆ. ಹಾಗೇ, ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ, ಆದಾಯ ಹೆಚ್ಚಿಸಲು ಈ ಕಾಯ್ದೆ ನೆರವಾಗುತ್ತದೆ ಎಂದು ಹೇಳಿದ್ದಾರೆ.

Published On - 11:24 am, Tue, 8 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್