AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ

ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಕಾಣುತ್ತಿಲ್ಲ.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 08, 2020 | 7:44 AM

Share

ಬೆಂಗಳೂರು: ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಅಷ್ಟಾಗಿ ಕಾಣುತ್ತಿಲ್ಲ.

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌ಗೆ ಆಗ್ರಹಿಸಿ ಭಾರತ್ ಬಂದ್ ಮಾಡಲಾಗುತ್ತಿದೆ. ಆದರೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಸ್‌ಗಳ ಸಂಚಾರ ಯಥಾಸ್ಥಿತಿ ಇದೆ. ಎಂದಿನಂತೆ KSRTC, BMTC ಬಸ್‌ಗಳು ಸಂಚರಿಸುತ್ತಿವೆ. ಆಟೋ, ಓಲಾ, ಉಬರ್ ಸೇವೆಯೂ ಎಂದಿನಂತೆ ಲಭ್ಯವಿದೆ.

ಭಾರತ್‌ ಬಂದ್‌ಗೆ ಕೆ.ಆರ್.ಮಾರ್ಕೆಟ್ ಸಂಘಟನೆ ಬೆಂಬಲ ಸೂಚಿಸಿತ್ತು. ಆದ್ರೆ ಎಂದಿನಂತೆ ಕೆ.ಆರ್.ಮಾರುಕಟ್ಟೆ ಓಪನ್ ಆಗಿದೆ. ಬೆಳಂ‌ ಬೆಳಗ್ಗೆಯೇ ಹೂವು, ಹಣ್ಣು, ತರಕಾರಿ ಖರೀದಿಯಲ್ಲಿ ಜನ ತೊಡಗಿದ್ದಾರೆ.

9 ಗಂಟೆ ಬಳಿಕ ಕೆ.ಆರ್. ಮಾರ್ಕೆಟ್ ಬಂದ್: ಇನ್ನು ರೈತರ ಹೋರಾಟಕ್ಕೆ ವ್ಯಾಪಾರಸ್ಥರ ಬೆಂಬಲವಿದೆ. ರೈತ ದೇಶದ ಬೆನ್ನೆಲುಬು. ರೈತ ಇದ್ರೆ ದೇಶ. ಸದ್ಯ ನಾವು ತಂದಿರೊ ಹೂವು, ಹಣ್ಣು, ತರಕಾರಿ ವ್ಯಾಪಾರ ಮಾಡ್ತಾ ಇದ್ದೀವಿ. 9 ಗಂಟೆ ಬಳಿಕ ಎಲ್ಲವನ್ನೂ ಬಂದ್ ಮಾಡ್ತೀವಿ. ಮದುವೆ ಸಮಾರಂಭ ಇರೊದಕ್ಕೆ ವ್ಯಾಪಾರ ಮಾಡ್ತಾ ಇದ್ದೀವಿ. ಬಳಿಕ ರೈತರ ಹೋರಾಟಕ್ಕೆ ಸಾಥ್ ನೀಡೊದಾಗಿ ವ್ಯಾಪಾರಸ್ಥರು ತಿಳಿಸಿದ್ದಾರೆ.

9 ಗಂಟೆಗೆ ವಿವಿಧ ಸಂಘಟನೆಗಳಿಂದ ಱಲಿ ನಡೆಯಲಿದೆ. ಟೌನ್ ಹಾಲ್, ಫ್ರೀಡಂ ಪಾರ್ಕ್, ಮೌರ್ಯ ಸರ್ಕಲ್, ಮೈಸೂರು ಬ್ಯಾಂಕ್​ನಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.

ಬ್ಯಾಂಕ್ ಒಕ್ಕೂಟಗಳು ನಾಳಿನ ಭಾರತ್ ಬಂದ್​ನಲ್ಲಿ ಭಾಗಿಯಾಗುತ್ತಿಲ್ಲ

Published On - 7:03 am, Tue, 8 December 20

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ