AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ

ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಕಾಣುತ್ತಿಲ್ಲ.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ
ಆಯೇಷಾ ಬಾನು
ಆಯೇಷಾ ಬಾನು|

Updated on:Dec 08, 2020 | 7:44 AM

Share

ಬೆಂಗಳೂರು: ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಅಷ್ಟಾಗಿ ಕಾಣುತ್ತಿಲ್ಲ.

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌ಗೆ ಆಗ್ರಹಿಸಿ ಭಾರತ್ ಬಂದ್ ಮಾಡಲಾಗುತ್ತಿದೆ. ಆದರೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಸ್‌ಗಳ ಸಂಚಾರ ಯಥಾಸ್ಥಿತಿ ಇದೆ. ಎಂದಿನಂತೆ KSRTC, BMTC ಬಸ್‌ಗಳು ಸಂಚರಿಸುತ್ತಿವೆ. ಆಟೋ, ಓಲಾ, ಉಬರ್ ಸೇವೆಯೂ ಎಂದಿನಂತೆ ಲಭ್ಯವಿದೆ.

ಭಾರತ್‌ ಬಂದ್‌ಗೆ ಕೆ.ಆರ್.ಮಾರ್ಕೆಟ್ ಸಂಘಟನೆ ಬೆಂಬಲ ಸೂಚಿಸಿತ್ತು. ಆದ್ರೆ ಎಂದಿನಂತೆ ಕೆ.ಆರ್.ಮಾರುಕಟ್ಟೆ ಓಪನ್ ಆಗಿದೆ. ಬೆಳಂ‌ ಬೆಳಗ್ಗೆಯೇ ಹೂವು, ಹಣ್ಣು, ತರಕಾರಿ ಖರೀದಿಯಲ್ಲಿ ಜನ ತೊಡಗಿದ್ದಾರೆ.

9 ಗಂಟೆ ಬಳಿಕ ಕೆ.ಆರ್. ಮಾರ್ಕೆಟ್ ಬಂದ್: ಇನ್ನು ರೈತರ ಹೋರಾಟಕ್ಕೆ ವ್ಯಾಪಾರಸ್ಥರ ಬೆಂಬಲವಿದೆ. ರೈತ ದೇಶದ ಬೆನ್ನೆಲುಬು. ರೈತ ಇದ್ರೆ ದೇಶ. ಸದ್ಯ ನಾವು ತಂದಿರೊ ಹೂವು, ಹಣ್ಣು, ತರಕಾರಿ ವ್ಯಾಪಾರ ಮಾಡ್ತಾ ಇದ್ದೀವಿ. 9 ಗಂಟೆ ಬಳಿಕ ಎಲ್ಲವನ್ನೂ ಬಂದ್ ಮಾಡ್ತೀವಿ. ಮದುವೆ ಸಮಾರಂಭ ಇರೊದಕ್ಕೆ ವ್ಯಾಪಾರ ಮಾಡ್ತಾ ಇದ್ದೀವಿ. ಬಳಿಕ ರೈತರ ಹೋರಾಟಕ್ಕೆ ಸಾಥ್ ನೀಡೊದಾಗಿ ವ್ಯಾಪಾರಸ್ಥರು ತಿಳಿಸಿದ್ದಾರೆ.

9 ಗಂಟೆಗೆ ವಿವಿಧ ಸಂಘಟನೆಗಳಿಂದ ಱಲಿ ನಡೆಯಲಿದೆ. ಟೌನ್ ಹಾಲ್, ಫ್ರೀಡಂ ಪಾರ್ಕ್, ಮೌರ್ಯ ಸರ್ಕಲ್, ಮೈಸೂರು ಬ್ಯಾಂಕ್​ನಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.

ಬ್ಯಾಂಕ್ ಒಕ್ಕೂಟಗಳು ನಾಳಿನ ಭಾರತ್ ಬಂದ್​ನಲ್ಲಿ ಭಾಗಿಯಾಗುತ್ತಿಲ್ಲ

Published On - 7:03 am, Tue, 8 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ