AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ

ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಕಾಣುತ್ತಿಲ್ಲ.

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರ ರಣಕಹಳೆ, ಸಿಲಿಕಾನ್ ಸಿಟಿಗೆ ತಟ್ಟದ ಬಂದ್ ಬಿಸಿ
ಆಯೇಷಾ ಬಾನು
|

Updated on:Dec 08, 2020 | 7:44 AM

Share

ಬೆಂಗಳೂರು: ಸಿಲಿಕಾನ್ ಸಿಟಿಗೆ ಶನಿವಾರವಷ್ಟೇ ಬಂದ್​ ಬಿಸಿ ತಟ್ಟಿತ್ತು.. ಕನ್ನಡಪರ ಸಂಘಟನೆಗಳು ಗುಟುರು ಹಾಕಿದ್ವು. ಒಂದೆರಡು ಗಂಟೆ ಪ್ರತಿಭಟನೆ ನಡೆಸಿದ್ವು. ಇದರ ನಡುವೆ ಇಂದು ಮತ್ತೊಮ್ಮೆ ಬಂದ್ ಮಾಡಲಾಗಿದ್ದು ಇಂದು ಕೂಡ ನಗರದಲ್ಲಿ ಬಂದ್ ಬಿಸಿ ಅಷ್ಟಾಗಿ ಕಾಣುತ್ತಿಲ್ಲ.

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್‌ಗೆ ಆಗ್ರಹಿಸಿ ಭಾರತ್ ಬಂದ್ ಮಾಡಲಾಗುತ್ತಿದೆ. ಆದರೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಸ್‌ಗಳ ಸಂಚಾರ ಯಥಾಸ್ಥಿತಿ ಇದೆ. ಎಂದಿನಂತೆ KSRTC, BMTC ಬಸ್‌ಗಳು ಸಂಚರಿಸುತ್ತಿವೆ. ಆಟೋ, ಓಲಾ, ಉಬರ್ ಸೇವೆಯೂ ಎಂದಿನಂತೆ ಲಭ್ಯವಿದೆ.

ಭಾರತ್‌ ಬಂದ್‌ಗೆ ಕೆ.ಆರ್.ಮಾರ್ಕೆಟ್ ಸಂಘಟನೆ ಬೆಂಬಲ ಸೂಚಿಸಿತ್ತು. ಆದ್ರೆ ಎಂದಿನಂತೆ ಕೆ.ಆರ್.ಮಾರುಕಟ್ಟೆ ಓಪನ್ ಆಗಿದೆ. ಬೆಳಂ‌ ಬೆಳಗ್ಗೆಯೇ ಹೂವು, ಹಣ್ಣು, ತರಕಾರಿ ಖರೀದಿಯಲ್ಲಿ ಜನ ತೊಡಗಿದ್ದಾರೆ.

9 ಗಂಟೆ ಬಳಿಕ ಕೆ.ಆರ್. ಮಾರ್ಕೆಟ್ ಬಂದ್: ಇನ್ನು ರೈತರ ಹೋರಾಟಕ್ಕೆ ವ್ಯಾಪಾರಸ್ಥರ ಬೆಂಬಲವಿದೆ. ರೈತ ದೇಶದ ಬೆನ್ನೆಲುಬು. ರೈತ ಇದ್ರೆ ದೇಶ. ಸದ್ಯ ನಾವು ತಂದಿರೊ ಹೂವು, ಹಣ್ಣು, ತರಕಾರಿ ವ್ಯಾಪಾರ ಮಾಡ್ತಾ ಇದ್ದೀವಿ. 9 ಗಂಟೆ ಬಳಿಕ ಎಲ್ಲವನ್ನೂ ಬಂದ್ ಮಾಡ್ತೀವಿ. ಮದುವೆ ಸಮಾರಂಭ ಇರೊದಕ್ಕೆ ವ್ಯಾಪಾರ ಮಾಡ್ತಾ ಇದ್ದೀವಿ. ಬಳಿಕ ರೈತರ ಹೋರಾಟಕ್ಕೆ ಸಾಥ್ ನೀಡೊದಾಗಿ ವ್ಯಾಪಾರಸ್ಥರು ತಿಳಿಸಿದ್ದಾರೆ.

9 ಗಂಟೆಗೆ ವಿವಿಧ ಸಂಘಟನೆಗಳಿಂದ ಱಲಿ ನಡೆಯಲಿದೆ. ಟೌನ್ ಹಾಲ್, ಫ್ರೀಡಂ ಪಾರ್ಕ್, ಮೌರ್ಯ ಸರ್ಕಲ್, ಮೈಸೂರು ಬ್ಯಾಂಕ್​ನಲ್ಲಿ ರೈತರು ಪ್ರತಿಭಟನೆ ನಡೆಸಲಿದ್ದಾರೆ.

ಬ್ಯಾಂಕ್ ಒಕ್ಕೂಟಗಳು ನಾಳಿನ ಭಾರತ್ ಬಂದ್​ನಲ್ಲಿ ಭಾಗಿಯಾಗುತ್ತಿಲ್ಲ

Published On - 7:03 am, Tue, 8 December 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ