ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಜ.8 ಭಾರತ್ ಬಂದ್​, BMTCಗೆ ರಜೆ ಇಲ್ಲ

ಬೆಂಗಳೂರು: ಕೇಂದ್ರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಜ.8ರಂದು ವಿವಿಧ ಸಂಘಟನೆಗಳಿಂದ ಭಾರತ್ ಬಂದ್​ಗೆ ಕರೆ ನೀಡಿವೆ. ಸಂಘಟಿತ, ಅಸಂಘಟಿತ ವಲಯದ ಸುಮಾರು 40 ಕೋಟಿ ಕಾರ್ಮಿಕರು ಭಾರತ್ ಬಂದ್​ಗೆ ಕರೆ ನೀಡಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಜ.8ರಂದು BMTC, KSRTC ಬಸ್​ ಸಂಚಾರ ಅನುಮಾನವಿದೆ. ಈಗಾಗಲೇ KSRTC, BMTC, ಐಟಿ-ಬಿಟಿ ವಲಯದ ನೌಕರರು, ಆಟೋ ಚಾಲಕರು, ಬ್ಯಾಂಕ್​ ನೌಕರರು ಸೇರಿದಂತೆ ಎಲ್ಲ ಕಾರ್ಮಿಕರು ಭಾರತ್​ ಬಂದ್​ಗೆ ಬೆಂಬಲ ಸೂಚಿಸಿದ್ದಾರೆ. ಬಂದ್ ದಿನ BMTC ನೌಕರರಿಗೆ ರಜೆ […]

ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಜ.8 ಭಾರತ್ ಬಂದ್​, BMTCಗೆ ರಜೆ ಇಲ್ಲ
ಸಾಧು ಶ್ರೀನಾಥ್​

Updated on: Jan 06, 2020 | 4:52 PM

ಬೆಂಗಳೂರು: ಕೇಂದ್ರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಜ.8ರಂದು ವಿವಿಧ ಸಂಘಟನೆಗಳಿಂದ ಭಾರತ್ ಬಂದ್​ಗೆ ಕರೆ ನೀಡಿವೆ. ಸಂಘಟಿತ, ಅಸಂಘಟಿತ ವಲಯದ ಸುಮಾರು 40 ಕೋಟಿ ಕಾರ್ಮಿಕರು ಭಾರತ್ ಬಂದ್​ಗೆ ಕರೆ ನೀಡಿದ್ದಾರೆ.

ಭಾರತ್ ಬಂದ್ ಹಿನ್ನೆಲೆಯಲ್ಲಿ ಜ.8ರಂದು BMTC, KSRTC ಬಸ್​ ಸಂಚಾರ ಅನುಮಾನವಿದೆ. ಈಗಾಗಲೇ KSRTC, BMTC, ಐಟಿ-ಬಿಟಿ ವಲಯದ ನೌಕರರು, ಆಟೋ ಚಾಲಕರು, ಬ್ಯಾಂಕ್​ ನೌಕರರು ಸೇರಿದಂತೆ ಎಲ್ಲ ಕಾರ್ಮಿಕರು ಭಾರತ್​ ಬಂದ್​ಗೆ ಬೆಂಬಲ ಸೂಚಿಸಿದ್ದಾರೆ.

ಬಂದ್ ದಿನ BMTC ನೌಕರರಿಗೆ ರಜೆ ಇಲ್ಲ:
ಜನವರಿ 8ರಂದು ಭಾರತ್​ ಬಂದ್​ಗೆ ಕರೆ ನೀಡಿರುವ ಸಂಬಂಧ ನಮ್ಮ ಯೂನಿಯನ್‌ನಿಂದ ನಮಗೆ ಮಾಹಿತಿ ಬಂದಿಲ್ಲ. ಅಂದು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಇರುತ್ತೆ. ಭದ್ರತಾ ಮತ್ತು ಜಾಗೃತ ಇಲಾಖೆ ಈ ಬಗ್ಗೆ ಆದೇಶ ಹೊರಡಿಸಿದೆ ಎಂದು BMTC ಎಂಡಿ ಶಿಖಾ ಸ್ಪಷ್ಟಪಡಿಸಿದ್ದಾರೆ. ಭಾರತ್​ ಬಂದ್ ದಿನ ಬಿಎಂಟಿಸಿ ನೌಕರರಿಗೆ ರಜೆ ನೀಡುವುದಿಲ್ಲ. ಅಂದು ರಜೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಬಂದ್‌ನಲ್ಲಿ ಭಾಗಿಯಾದ್ರೆ ಕಾನೂನು ಕ್ರಮ ‌ಕೈಗೊಳ್ಳುತ್ತೇವೆ ಎಂದು ಶಿಖಾ ಎಚ್ಚರಿಕೆ ನೀಡಿದ್ದಾರೆ.

Published On - 4:15 pm, Mon, 6 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us