AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಡೋ ಯಾತ್ರೆಗೆ ಬಂದಿದ್ದ ಖಾಸಗಿ ಬಸ್​ ಹರಿದು ಕೈ ಕಾರ್ಯಕರ್ತ ಸಾವು

ಭಾರತ್ ಜೋಡೋ ಯಾತ್ರೆಗೆ ಕಾರ್ಯಕರ್ತರನ್ನು ಕರೆ ತಂದಿದ್ದ ಖಾಸಗಿ ಬಸ್ ಡಿಕ್ಕಿಯಾಗಿ, ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ಹಿರಿಯೂರು ಪಟ್ಟಣದ ಟಿ.ಬಿ.ವೃತ್ತದ ಬಳಿ ನಡೆದಿದೆ.

ಜೋಡೋ ಯಾತ್ರೆಗೆ ಬಂದಿದ್ದ ಖಾಸಗಿ ಬಸ್​ ಹರಿದು ಕೈ ಕಾರ್ಯಕರ್ತ ಸಾವು
TV9 Web
| Edited By: |

Updated on:Oct 10, 2022 | 11:05 PM

Share

ಚಿತ್ರದುರ್ಗ: ಭಾರತ್ ಜೋಡೋ ಯಾತ್ರೆಗೆ ಕಾರ್ಯಕರ್ತರನ್ನು ಕರೆ ತಂದಿದ್ದ ಖಾಸಗಿ ಬಸ್ ಡಿಕ್ಕಿಯಾಗಿ, ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ಹಿರಿಯೂರು ಪಟ್ಟಣದ ಟಿ.ಬಿ.ವೃತ್ತದ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ರಮೇಶ(38) ಮೃತ ದುರ್ದೈವಿ. ಖಾಸಗಿ ಬಸ್​ ಭಾರತ ಜೋಡೋ ಯಾತ್ರೆಗೆ ಕಾರ್ಯಕರ್ತನನ್ನು ಕರೆದುಕೊಂಡು ಬಂದಿತ್ತು. ಸಾವನ್ನಪ್ಪಿದ ರಮೇಶ ಕೂಡ ಜೋಡೋ ಯಾತ್ರೆಯಲ್ಲಿ ಭಾಗವಿಸಲೆಂದು ಆಗಮಿಸಿದ್ದರು. ರಮೇಶ ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಹಿರಿಯೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿದ್ಯುತ್​ ತಂತಿ ತಗುಲಿ ಗೃಹಿಣಿ ಸಾವು

ತುಮಕೂರು:  ವಿದ್ಯುತ್​ ತಂತಿ ತಗುಲಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ಕೆಂಚಮ್ಮನಹಳ್ಳಿ  ಗ್ರಾಮದಲ್ಲಿ  ನಡೆದಿದೆ.  ಮಂಗಳ ಗೌರಮ್ಮ(26) ಮೃತ ಮಹಿಳೆ. ಕೆಲ ದಿನಗಳಿಂದ ಕಡಿತಗೊಂಡು ಹೊಲದಲ್ಲಿ ಕಡಿತಗೊಂಡು ವಿದ್ಯುತ್​ ತಂತಿ ನೇತಾಡುತ್ತಿತ್ತು.  ಬೆಸ್ಕಾಂಗೆ ದೂರು ನೀಡಿದ್ದರೂ ಕ್ರಮಗೊಂಡಿಲ್ಲ ಎಂದು ಗ್ರಾಮಸ್ಥರು  ಆರೋಪಿಸಿದ್ದಾರೆ. ಕುಟುಂಬಸ್ಥರು ಬೆಸ್ಕಾಂ ಕಚೇರಿ ಮುಂದೆ ಶವ ಇಟ್ಟು ಪ್ರತಿಭಟನೆ ಮಾಡಿದ್ದಾರೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.

ಲಾರಿ ಚಾಸಿ  ತಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಲಾರಿ ಚಾಸಿ ತಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿಯ ಉದ್ಯಾವರ ಸೇತುವೆ ಬಳಿ ನಡೆದಿದೆ.  ಕಟಪಾಡಿಯ ಮೂಡಬೆಟ್ಟು ನಿವಾಸಿ ಮಹಮ್ಮದ್ ರಫೀಕ್ ಬಾವಾ ಮೃತ ದುರ್ದೈವಿ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಸ್ಥಳ  ತಪಾಸಣೆ ನಡೆಸಿದ್ದಾರೆ.

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಬಳ್ಳಾರಿ: ವ್ಯಕ್ತಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ  ಬಳ್ಳಾರಿಯ ರೈಲ್ವೆ ನಿಲ್ದಾಣದ ಬಳಿಯ ರಸ್ತೆಯಲ್ಲಿ ನಡೆದಿದೆ. ವ್ಯಕ್ತಿ ಜನನಿ ಬಿಡ ಪ್ರದೇಶದಲ್ಲೇ ಪೆಟ್ರೋಲ್ ಸುರಿದುಕೊಂಡು ಆಹತ್ಮಹತ್ಯಗೆ ಯತ್ನಿಸಿದ್ದಾನೆ. ಇದರಿಂದ ವ್ಯಕ್ತಿ ಭಾಗಶಃ ಸುಟ್ಟು ಕರಕಲಾಗಿದ್ದಾನೆ. ಕೂಡಲೇ ಬೆಂಕಿ ನಂದಿಸಿದ ಸ್ಥಳೀಯರು, ವಿಮ್ಸ್ ಆಸ್ಪತ್ರೆಗೆ  ದಾಖಲಿಸಿದ್ದಾರೆ. ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರೂಸ್‌ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಹದಿನಾರು ಕುರಿಗಳ ಸಾವು 

ಹಾವೇರಿ: ವಿಷಪೂರಿತ ಆಹಾರ ಸೇವಿಸಿ ಹದಿನಾರು ಕುರಿಗಳು ಸಾವನ್ನಪ್ಪಿರುವ ಘಟನೆ ರಟ್ಟೀಹಳ್ಳಿ ತಾಲೂಕಿನ ದೊಡ್ಡಗುಬ್ಬಿ ಗ್ರಾಮದ ಬಳಿ ನಡೆದಿದೆ. ಮೃತ ಕುರಿಗಳು ಸಂಚಾರಿ ಕುರುಬರಾಗಿರೋ ಚಿಕ್ಕೋಡಿ ಮೂಲದ ಕುರಿಗಾಯಿ ಹುಲಿಯಪ್ಪ ಮದ್ನಳ್ಳಿ ಎಂಬುವರಿಗೆ ಸೇರಿವೆ. ಕುರಿಗಳು ದೊಡ್ಡಗುಬ್ಬಿ ಗ್ರಾಮದ ಬಳಿ ಮೇಯಲು ಹೋಗಿದ್ದ ವೇಳೆ ವಿಷಪೂರಿತ ಆಹಾರ ಸೇವಿಸಿ ಸಾವನ್ನಪ್ಪಿವೆ. ಎರಡೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಕುರಿಗಳು ಸಾವನ್ನಪ್ಪಿದ್ದರಿಂದ ಕುರಿಗಾಯಿ ಕಂಗಾಲಾಗಿದ್ದಾರೆ. ಅಸ್ವಸ್ಥಗೊಂಡಿದ್ದ ಹಲವು ಕುರಿಗಳು ಪ್ರಾಣಾಪಾಯದಿಂದ ಪಾರಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:57 pm, Mon, 10 October 22

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ