AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI- Help: ಭೀಮ್ ಆ್ಯಪ್ ಮೂಲಕ ಸಲೀಸಾಗಲಿದೆ ಸಮಸ್ಯೆಗೆ ಪರಿಹಾರ

ಡಿಜಿಟಲ್ ಪಾವತಿಯಲ್ಲಿ ಆಗುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಯುಪಿಐ- ಹೆಲ್ಪ್ ಸಹಾಯ ಪಡೆದುಕೊಳ್ಳಬಹುದು. ಈ ಅಪ್ಲಿಕೇಷನ್ ನಿಮಗೆ ಹೇಗೆ ಸಹಾಯ ಆಗಲಿದೆ ಎಂದು ತಿಳಿಯುವುದಕ್ಕೆ ಇಲ್ಲಿದೆ ಲೇಖನ.

UPI- Help: ಭೀಮ್ ಆ್ಯಪ್ ಮೂಲಕ ಸಲೀಸಾಗಲಿದೆ ಸಮಸ್ಯೆಗೆ ಪರಿಹಾರ
ಪ್ರಾತಿನಿಧಿಕ ಚಿತ್ರ
Srinivas Mata
|

Updated on:Mar 16, 2021 | 7:37 PM

Share

ಮುಂಬೈ: ಭೀಮ್ ಆ್ಯಪ್ ಬಳಸಿಕೊಂಡು ಬಳಕೆದಾರರು ಈಗ ಏಕೀಕೃತ ಪಾವತಿ ಇಂಟರ್​ಫೇಸ್ (ಯುಪಿಐ) ಪ್ಲಾಟ್‌ಫಾರ್ಮ್ ವಹಿವಾಟಿನ ಬಗ್ಗೆ ವ್ಯಾಜ್ಯಗಳನ್ನು ಸಲ್ಲಿಸಬಹುದು ಎಂದು ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಹೇಳಿದೆ. ಮೊದಲಿಗೆ, ಎಸ್‌ಬಿಐ, ಆಕ್ಸಿಸ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಗ್ರಾಹಕರಿಗೆ ಎನ್‌ಪಿಸಿಐ ಭೀಮ್ ಅಪ್ಲಿಕೇಶನ್‌ನ ಈ ಸೌಲಭ್ಯ ದೊರೆಯಲಿದೆ. ಪೇಟಿಎಂ ಪಾವತಿ ಬ್ಯಾಂಕ್ ಹಾಗೂ ಟಿಜೆಎಸ್​ಬಿ ಸಹಕಾರಿ ಬ್ಯಾಂಕ್​ಗಳು ಸಹ ಶೀಘ್ರದಲ್ಲೇ ಯುಪಿಐ- ಹೆಲ್ಪ್​ನ ಸಹಾಯವನ್ನು ಶೀಘ್ರದಲ್ಲೇ ಪಡೆಯಲಿವೆ.

ಮುಂಬರುವ ತಿಂಗಳುಗಳಲ್ಲಿ ಇತರ ಬ್ಯಾಂಕ್​ಗಳಿಗೆ ಈ ಸೇವೆ ದೊರೆಯಲಿದೆ. ಅಲ್ಲದೆ, ಬ್ಯಾಂಕ್​ಗಳು ಮತ್ತು ಫಿನ್‌ಟೆಕ್‌ಗಳು ತಮ್ಮ ಒಡೆತನದ ಅಪ್ಲಿಕೇಶನ್‌ಗಳಲ್ಲಿ ಹೆಲ್ಪ್ ವೈಶಿಷ್ಟ್ಯವನ್ನು ಒದಗಿಸುತ್ತವೆ. ಡಿಜಿಟಲ್ ಪಾವತಿಯಲ್ಲಿ ವಿಶ್ವಾಸ ಹೆಚ್ಚಾಗಬೇಕು ಎಂಬ ಕಾರಣಕ್ಕೆ ಕುಂದು-ಕೊರತೆ ನಿವಾರಣೆಗೆ ಇನ್-ಆಪ್ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಕಡ್ಡಾಯ ಮಾಡಲಾಗಿದೆ. ಡಿಜಿ- ಸಹಾಯ ಅಭಿಯಾನದ ಭಾಗವಾಗಿ ಎನ್​ಪಿಸಿಐನಿಂದ ಯುಪಿಐ- ಹೆಲ್ಪ್ ಆರಂಭಿಸಲಾಗಿದೆ.

ಈ ಹೊಸ ಫೀಚರ್​ನಿಂದಾಗಿ ಬಳಕೆದಾರರು ತಮ್ಮ ಬಾಕಿ ಇರುವ ವಹಿವಾಟಿನ ಸ್ಥಿತಿಗತಿಯನ್ನು ಪರೀಕ್ಷಿಸಬಹುದು. ಪ್ರಕ್ರಿಯೆ ಪೂರ್ಣಗೊಳ್ಳದ ವಹಿವಾಟಿನ ಬಗ್ಗೆ ಅಥವಾ ಯಾರ ಖಾತೆಗೆ ಹಣ ಕಳುಹಿಸಲಾಗಿದೆಯೋ ಅವರಿಗೆ ಹಣ ತಲುಪದಿದ್ದಲ್ಲಿ ದೂರು ಸಲ್ಲಿಸಬಹುದು. ವರ್ತಕರ ಜತೆಗಿನ ವಹಿವಾಟುಗಳಿಗೆ ಸಂಬಂಧಿಸಿದಂತೆಯೂ ದೂರು ನೀಡಬಹುದು. ಒಂದು ವೇಳೆ ಬಾಕಿ ಇರುವ ವಹಿವಾಟುಗಳ ಬಗ್ಗೆ ಬಳಕೆದಾರ ಯಾವುದೇ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಯುಪಿಐ- ಹೆಲ್ಪ್ ತಾನಾಗಿಯೇ ಅಪ್​ಡೇಟ್ ನೀಡುತ್ತದೆ ಹಾಗೂ ಅಂತಿಮವಾಗಿ ಆ ವಹಿವಾಟಿನ ಅಂತಿಮ ಸ್ಥಿತಿಯನ್ನು ತಿಳಿಸುತ್ತದೆ.

ಇದನ್ನೂ ಓದಿ: ಭಾರತದ ಯುಪಿಐ ವ್ಯವಸ್ಥೆಯನ್ನು ಹಾಡಿ ಹೊಗಳಿದ ಬಿಲ್ ಗೇಟ್ಸ್

Published On - 7:34 pm, Tue, 16 March 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ