AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI- Help: ಭೀಮ್ ಆ್ಯಪ್ ಮೂಲಕ ಸಲೀಸಾಗಲಿದೆ ಸಮಸ್ಯೆಗೆ ಪರಿಹಾರ

ಡಿಜಿಟಲ್ ಪಾವತಿಯಲ್ಲಿ ಆಗುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಯುಪಿಐ- ಹೆಲ್ಪ್ ಸಹಾಯ ಪಡೆದುಕೊಳ್ಳಬಹುದು. ಈ ಅಪ್ಲಿಕೇಷನ್ ನಿಮಗೆ ಹೇಗೆ ಸಹಾಯ ಆಗಲಿದೆ ಎಂದು ತಿಳಿಯುವುದಕ್ಕೆ ಇಲ್ಲಿದೆ ಲೇಖನ.

UPI- Help: ಭೀಮ್ ಆ್ಯಪ್ ಮೂಲಕ ಸಲೀಸಾಗಲಿದೆ ಸಮಸ್ಯೆಗೆ ಪರಿಹಾರ
ಪ್ರಾತಿನಿಧಿಕ ಚಿತ್ರ
Srinivas Mata
|

Updated on:Mar 16, 2021 | 7:37 PM

Share

ಮುಂಬೈ: ಭೀಮ್ ಆ್ಯಪ್ ಬಳಸಿಕೊಂಡು ಬಳಕೆದಾರರು ಈಗ ಏಕೀಕೃತ ಪಾವತಿ ಇಂಟರ್​ಫೇಸ್ (ಯುಪಿಐ) ಪ್ಲಾಟ್‌ಫಾರ್ಮ್ ವಹಿವಾಟಿನ ಬಗ್ಗೆ ವ್ಯಾಜ್ಯಗಳನ್ನು ಸಲ್ಲಿಸಬಹುದು ಎಂದು ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಹೇಳಿದೆ. ಮೊದಲಿಗೆ, ಎಸ್‌ಬಿಐ, ಆಕ್ಸಿಸ್ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಗ್ರಾಹಕರಿಗೆ ಎನ್‌ಪಿಸಿಐ ಭೀಮ್ ಅಪ್ಲಿಕೇಶನ್‌ನ ಈ ಸೌಲಭ್ಯ ದೊರೆಯಲಿದೆ. ಪೇಟಿಎಂ ಪಾವತಿ ಬ್ಯಾಂಕ್ ಹಾಗೂ ಟಿಜೆಎಸ್​ಬಿ ಸಹಕಾರಿ ಬ್ಯಾಂಕ್​ಗಳು ಸಹ ಶೀಘ್ರದಲ್ಲೇ ಯುಪಿಐ- ಹೆಲ್ಪ್​ನ ಸಹಾಯವನ್ನು ಶೀಘ್ರದಲ್ಲೇ ಪಡೆಯಲಿವೆ.

ಮುಂಬರುವ ತಿಂಗಳುಗಳಲ್ಲಿ ಇತರ ಬ್ಯಾಂಕ್​ಗಳಿಗೆ ಈ ಸೇವೆ ದೊರೆಯಲಿದೆ. ಅಲ್ಲದೆ, ಬ್ಯಾಂಕ್​ಗಳು ಮತ್ತು ಫಿನ್‌ಟೆಕ್‌ಗಳು ತಮ್ಮ ಒಡೆತನದ ಅಪ್ಲಿಕೇಶನ್‌ಗಳಲ್ಲಿ ಹೆಲ್ಪ್ ವೈಶಿಷ್ಟ್ಯವನ್ನು ಒದಗಿಸುತ್ತವೆ. ಡಿಜಿಟಲ್ ಪಾವತಿಯಲ್ಲಿ ವಿಶ್ವಾಸ ಹೆಚ್ಚಾಗಬೇಕು ಎಂಬ ಕಾರಣಕ್ಕೆ ಕುಂದು-ಕೊರತೆ ನಿವಾರಣೆಗೆ ಇನ್-ಆಪ್ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಕಡ್ಡಾಯ ಮಾಡಲಾಗಿದೆ. ಡಿಜಿ- ಸಹಾಯ ಅಭಿಯಾನದ ಭಾಗವಾಗಿ ಎನ್​ಪಿಸಿಐನಿಂದ ಯುಪಿಐ- ಹೆಲ್ಪ್ ಆರಂಭಿಸಲಾಗಿದೆ.

ಈ ಹೊಸ ಫೀಚರ್​ನಿಂದಾಗಿ ಬಳಕೆದಾರರು ತಮ್ಮ ಬಾಕಿ ಇರುವ ವಹಿವಾಟಿನ ಸ್ಥಿತಿಗತಿಯನ್ನು ಪರೀಕ್ಷಿಸಬಹುದು. ಪ್ರಕ್ರಿಯೆ ಪೂರ್ಣಗೊಳ್ಳದ ವಹಿವಾಟಿನ ಬಗ್ಗೆ ಅಥವಾ ಯಾರ ಖಾತೆಗೆ ಹಣ ಕಳುಹಿಸಲಾಗಿದೆಯೋ ಅವರಿಗೆ ಹಣ ತಲುಪದಿದ್ದಲ್ಲಿ ದೂರು ಸಲ್ಲಿಸಬಹುದು. ವರ್ತಕರ ಜತೆಗಿನ ವಹಿವಾಟುಗಳಿಗೆ ಸಂಬಂಧಿಸಿದಂತೆಯೂ ದೂರು ನೀಡಬಹುದು. ಒಂದು ವೇಳೆ ಬಾಕಿ ಇರುವ ವಹಿವಾಟುಗಳ ಬಗ್ಗೆ ಬಳಕೆದಾರ ಯಾವುದೇ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಯುಪಿಐ- ಹೆಲ್ಪ್ ತಾನಾಗಿಯೇ ಅಪ್​ಡೇಟ್ ನೀಡುತ್ತದೆ ಹಾಗೂ ಅಂತಿಮವಾಗಿ ಆ ವಹಿವಾಟಿನ ಅಂತಿಮ ಸ್ಥಿತಿಯನ್ನು ತಿಳಿಸುತ್ತದೆ.

ಇದನ್ನೂ ಓದಿ: ಭಾರತದ ಯುಪಿಐ ವ್ಯವಸ್ಥೆಯನ್ನು ಹಾಡಿ ಹೊಗಳಿದ ಬಿಲ್ ಗೇಟ್ಸ್

Published On - 7:34 pm, Tue, 16 March 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?