AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ವ್ಯಾಪಾರಿಗೆ ಬೆದರಿಕೆ: ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ ಬಂಧನ

ವಿಜಯಪುರ: 5 ಕೋಟಿ ನಗದು, 5 ಕೆಜಿ ಚಿನ್ನ ನೀಡುವಂತೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನನನ್ನು ಕಲಬುರಗಿ ಜಿಲ್ಲೆ ಜೇವರ್ಗಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊವಿಡ್ ಟೆಸ್ಟ್ ಬಳಿಕ ಬಾಗಪ್ಪ ಹರಿಜನನನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತೆ. ಸದ್ಯ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಬಾಗಪ್ಪ ಹರಿಜನನನ್ನು ಇರಿಸಲಾಗಿದೆ. ಇಂಡಿಯ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆಗೆ 5 ಕೋಟಿ ಹಣ, 5 ಕೆಜಿ ಚಿನ್ನ ನೀಡುವಂತೆ ಬೆದರಿಕೆ ಹಾಕಿದ್ದರು. ಹೀಗಾಗಿ ಜುಲೈ 22ರಂದು ಡಾಂಗೆ ಚಡಚಣ ಠಾಣೆಗೆ […]

ಚಿನ್ನದ ವ್ಯಾಪಾರಿಗೆ ಬೆದರಿಕೆ: ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ ಬಂಧನ
ಆಯೇಷಾ ಬಾನು
|

Updated on:Aug 27, 2020 | 9:08 AM

Share

ವಿಜಯಪುರ: 5 ಕೋಟಿ ನಗದು, 5 ಕೆಜಿ ಚಿನ್ನ ನೀಡುವಂತೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನನನ್ನು ಕಲಬುರಗಿ ಜಿಲ್ಲೆ ಜೇವರ್ಗಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೊವಿಡ್ ಟೆಸ್ಟ್ ಬಳಿಕ ಬಾಗಪ್ಪ ಹರಿಜನನನ್ನು ಕೋರ್ಟ್‌ಗೆ ಹಾಜರುಪಡಿಸಲಾಗುತ್ತೆ. ಸದ್ಯ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಬಾಗಪ್ಪ ಹರಿಜನನನ್ನು ಇರಿಸಲಾಗಿದೆ. ಇಂಡಿಯ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆಗೆ 5 ಕೋಟಿ ಹಣ, 5 ಕೆಜಿ ಚಿನ್ನ ನೀಡುವಂತೆ ಬೆದರಿಕೆ ಹಾಕಿದ್ದರು. ಹೀಗಾಗಿ ಜುಲೈ 22ರಂದು ಡಾಂಗೆ ಚಡಚಣ ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ಎ1 ಆರೋಪಿ ಲಕ್ಷ್ಮೀಕಾಂತಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. A3 ಮಹಾದೇವ ಭೈರಗೊಂಡನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಸದ್ಯ ಆತ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಈಗ ಎ2 ಆರೋಪಿ ಬಾಗಪ್ಪ ಹರಿಜನನನ್ನು ಬಂಧಿಸಿದ್ದು, A1ಆರೋಪಿ ಲಕ್ಷ್ಮೀಕಾಂತ ಪಾಟೀಲ್ ತಲೆ ಮರೆಸಿಕೊಂಡಿದ್ದಾನೆ.

ಸಂಬಂಧಿಕರಿಂದ ದೂರ ಸರಿದಿದ್ದ ಬಾಗಪ್ಪ: ಬಾಗಪ್ಪ ಹರಿಜನ ಭೀಮಾತೀರದ ನಟೋರಿಯಸ್, ಪೊಲೀಸ್ ಎನ್​ಕೌಂಟರ್​ಗೆ ಬಲಿಯಾದ ದಿವಂಗತ ಚಂದಪ್ಪ ಹರಿಜನ ಬಲಗೈ ಬಂಟನಾಗಿದ್ದ. ಆಸ್ತಿ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಕಾರಣದಿಂದ ಬಾಗಪ್ಪ, ಚಂದಪ್ಪ ಸಹೋದರರಿಂದ ಹಾಗೂ ಸಂಬಂಧಿಕರಿಂದ ದೂರ ಸರಿದಿದ್ದ.

ಬಾಗಪ್ಪ ಪ್ರತ್ಯೇಕ ಬೆಟಾಲಿಯನ್ ಕಟ್ಟಿಕೊಂಡಿದ್ದ. ಕೆರೂರಿನ ಪುತ್ರಪ್ಪ ಭೈರಗೊಂಡ ಮೇಲೆ ಗುಂಡು ಹಾರಿಸಿದ್ದ ಆರೋಪ ಈತನ ಮೇಲಿತ್ತು. ಇದರಂತೆ ಕೊಲೆ ಸುಲಿಗೆ ಪ್ರಕರಣಗಳ ಆರೋಪಿಯಾಗಿದ್ದರೂ ಎಲ್ಲ ಆರೋಪಗಳಿಂದ ಮುಕ್ತನಾಗಿದ್ದ. 2018 ಆಗಸ್ಟ್ 8 ರಂದು ವಿಜಯಪುರ ‌ನ್ಯಾಯಾಲಯದ ಆವರಣದಲ್ಲಿ ಬಾಗಪ್ಪನ ಮೇಲೆ ಗುಂಡಿನ ದಾಳಿ ನಡೆದಿತ್ತು. ಮೂರು ಗುಂಡುಗಳು ಹೊಕ್ಕಿದರೂ ಬಾಗಪ್ಪ ಗುಣಮುಖನಾಗಿದ್ದ.

ದಿ. ಚಂದಪ್ಪ‌ ಹರಿಜನ ಸಹೋದರನ ಮಕ್ಕಳು ಹಾಗೂ ಸಂಬಂಧಿಕರು ಸುಫಾರಿ ನೀಡಿ ಬಾಗಪ್ಪ ಹತ್ಯೆಗೆ ಪ್ಲ್ಯಾನ್ ಮಾಡಿದ್ದರು. ಬಾಗಪ್ಪನಿಗೆ‌ ಗುಂಡು ಹಾರಿಸಿ ಪೀರಪ್ಪ ಹಡಪದ ಅಂದರ್ ಆಗಿದ್ದ. ಜಾಮೀನಿನ‌ ಮೇಲೆ ಹೊರಗಿರುವ ಪೀರಪ್ಪ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ. ಸದ್ಯ ನಾಮದೇವ ಡಾಂಗೆ ಮಾಡಿರುವ ಬೆದರಿಕೆ ಪ್ರಕರಣ ಆರೋಪ ಬಿಟ್ಟು ಬೇರೆ ಯಾವುದೇ ಪ್ರಕರಣ ಬಾಗಪ್ಪ ಮೇಲಿಲ್ಲಾ.

Published On - 7:35 am, Thu, 27 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!