AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIEC ಕೋವಿಡ್‌ ಆಸ್ಪತ್ರೆ ಸಿದ್ಧತೆ ಜೋರಾಗಿದೆ: ಸಚಿವ ಸುರೇಶ್‌ಕುಮಾರ್‌

ಬೆಂಗಳೂರು: ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿಯಲ್ಲಿ ಅಂತಾ ಕೊರೊನಾ ಸೋಂಕು ತನ್ನ ರುದ್ರತಾಂಡವ ಮುಂದುವರಿಸಿಯೇ ಇದೆ. ರಾಜ್ಯ ಸರ್ಕಾರ ಹೆಮ್ಮಾರಿಯನ್ನ ನಿಯಂತ್ರಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಈಗ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಸ್ಥಳದಲ್ಲಿ ಬೃಹತ್‌ ಕೋವಿಡ್‌ ಕೇರ್‌ ಕೇಂದ್ರವನ್ನ ಆರಂಭಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಹಿರಿಯ ಸಚಿವ ಸುರೇಶ್‌ಕುಮಾರ್‌ BIEC ಗೆ ಇವತ್ತು ಭೇಟಿ ನೀಡಿ ಕೋವಿಡ್‌ ಕೇರ್‌ ಸೆಂಟರ್‌ನ ತಯಾರಿ ಕುರಿತು ಪರಿಶೀಲನೆ ನಡೆಸಿದರು. ಕೋವಿಡ್‌ ಕೇರ್‌ […]

BIEC ಕೋವಿಡ್‌ ಆಸ್ಪತ್ರೆ ಸಿದ್ಧತೆ ಜೋರಾಗಿದೆ: ಸಚಿವ ಸುರೇಶ್‌ಕುಮಾರ್‌
Guru
| Updated By: |

Updated on:Jul 06, 2020 | 3:43 PM

Share

ಬೆಂಗಳೂರು: ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿಯಲ್ಲಿ ಅಂತಾ ಕೊರೊನಾ ಸೋಂಕು ತನ್ನ ರುದ್ರತಾಂಡವ ಮುಂದುವರಿಸಿಯೇ ಇದೆ. ರಾಜ್ಯ ಸರ್ಕಾರ ಹೆಮ್ಮಾರಿಯನ್ನ ನಿಯಂತ್ರಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಈಗ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಸ್ಥಳದಲ್ಲಿ ಬೃಹತ್‌ ಕೋವಿಡ್‌ ಕೇರ್‌ ಕೇಂದ್ರವನ್ನ ಆರಂಭಿಸಲು ಸಿದ್ಧತೆ ನಡೆಸಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಹಿರಿಯ ಸಚಿವ ಸುರೇಶ್‌ಕುಮಾರ್‌ BIEC ಗೆ ಇವತ್ತು ಭೇಟಿ ನೀಡಿ ಕೋವಿಡ್‌ ಕೇರ್‌ ಸೆಂಟರ್‌ನ ತಯಾರಿ ಕುರಿತು ಪರಿಶೀಲನೆ ನಡೆಸಿದರು. ಕೋವಿಡ್‌ ಕೇರ್‌ ಸೆಂಟರ್‌ನ ತಯಾರಿಯ ಪರಿಶೀಲನೆ ನಂತರ ತಮ್ಮ ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಸ್ವತಃ ಸುರೇಶ್‌ಕುಮಾರ್‌ ಹೇಳಿಕೊಂಡಿದ್ದಾರೆ.

ಇವತ್ತು ನಾನು ತುಮಕೂರು ರಸ್ತೆಯಲ್ಲಿರುವ ಬಿಆಯ್‌ಇಸಿನಲ್ಲಿ ರೆಡಿಯಾಗುತ್ತಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಹೋಗಿದ್ದೆ. ಅಲ್ಲಿ ರೋಗ ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು10,100 ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲಿ ಈ ಕಾರ್ಯದ ಜವಾಬ್ದಾರಿ ಹೊತ್ತಿರುವ ಕಾರ್ಯಪಡೆಯ ಅಧಿಕಾರಿಗಳಾದ ರಾಜೇಂದ್ರ ಕಟಾರಿಯ, ಸರ್ಫ್ರಾಜ್ ಖಾನ್ ಮತ್ತಿತರರನ್ನು ಭೇಟಿಯಾದೆ. ಕೆಲಸ ಬಹಳ ರಭಸದಿಂದ ಸಾಗಿದೆ. ಇದು ದೇಶದಲ್ಲಿಯೇ ಅತಿ ದೊಡ್ಡ ಕೋವಿಡ್‌ ಕೇರ್‌ ಆಸ್ಪತ್ರೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ.

Published On - 3:24 pm, Mon, 6 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!