AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲದರಲ್ಲೂ 90, ಒಂದರಲ್ಲಿ ಫೇಲ್.. ವಿದ್ಯಾರ್ಥಿ ಭವಿಷ್ಯದ ಜತೆ ಇದೆಂಥಾ ಚೆಲ್ಲಾಟ?

ಗದಗ: ಕಷ್ಟಪಟ್ಟು ಶ್ರದ್ಧೆಯಿಂದ ಓದಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣನಾಗಿ ಒಂದೇ ಒಂದು ವಿಷಯದಲ್ಲಿ ಫೇಲ್ ಆದ ವಿದ್ಯಾರ್ಥಿಯ ಭವಿಷ್ಯ ಇಂದು ಅತಂತ್ರವಾಗಿದೆ. ವಿದ್ಯಾರ್ಥಿಯ ಭವಿಷ್ಯದ ಜೊತೆ ಪಿಯು ಪರೀಕ್ಷಾ ಮಂಡಳಿ ಚೆಲ್ಲಾಟವಾಡಿರುವುದೇ ಈ ದುರಂತಕ್ಕೆ ಕಾರಣವಾಗಿದೆ. ಇಡೀ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಫೇಲ್ ಆಗಿದ್ದಾನೆ. ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಆತನ ಭವಿಷ್ಯ ಮಣ್ಣು ಪಾಲಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಕೆಇಎಸ್ ಪಿಯು ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿರುವ ಶಬ್ಬೀರ್ ಖಾಜಿ […]

ಎಲ್ಲದರಲ್ಲೂ 90, ಒಂದರಲ್ಲಿ ಫೇಲ್.. ವಿದ್ಯಾರ್ಥಿ ಭವಿಷ್ಯದ ಜತೆ ಇದೆಂಥಾ ಚೆಲ್ಲಾಟ?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 02, 2020 | 10:15 AM

Share

ಗದಗ: ಕಷ್ಟಪಟ್ಟು ಶ್ರದ್ಧೆಯಿಂದ ಓದಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣನಾಗಿ ಒಂದೇ ಒಂದು ವಿಷಯದಲ್ಲಿ ಫೇಲ್ ಆದ ವಿದ್ಯಾರ್ಥಿಯ ಭವಿಷ್ಯ ಇಂದು ಅತಂತ್ರವಾಗಿದೆ. ವಿದ್ಯಾರ್ಥಿಯ ಭವಿಷ್ಯದ ಜೊತೆ ಪಿಯು ಪರೀಕ್ಷಾ ಮಂಡಳಿ ಚೆಲ್ಲಾಟವಾಡಿರುವುದೇ ಈ ದುರಂತಕ್ಕೆ ಕಾರಣವಾಗಿದೆ.

ಇಡೀ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಫೇಲ್ ಆಗಿದ್ದಾನೆ. ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಆತನ ಭವಿಷ್ಯ ಮಣ್ಣು ಪಾಲಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಕೆಇಎಸ್ ಪಿಯು ಕಾಲೇಜ್​ನಲ್ಲಿ ವ್ಯಾಸಂಗ ಮಾಡುತ್ತಿರುವ ಶಬ್ಬೀರ್ ಖಾಜಿ ಕನಸುಗಳು ಬಿರುಕು ಬಿಟ್ಟಿವೆ. ಎಲ್ಲ ವಿಷಯದಲ್ಲಿ 90 ರ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಾನೆ!

ಫೋಟೋ ಕಾಪಿ ತರಿಸಿ ನೋಡಿದ್ರೆ 56 ಅಂಕ ಬಂದಿದೆ. ಮರು ಮೌಲ್ಯ ಮಾಪನದಲ್ಲೂ ಈ ವಿದ್ಯಾರ್ಥಿ ಉತೀರ್ಣವಾಗಿರುವುದರ ಬಗ್ಗೆ ಮಾಹಿತಿ ಇಲ್ಲ. ಪಿಯು ಪರೀಕ್ಷಾ ಮಂಡಳಿ ಯಡವಟ್ಟಿಗೆ ಒಂದು ವರ್ಷ ವೇಸ್ಟ್ ಆಗಿದೆ.

ಸಾಲಸೋಲ ಮಾಡಿ ಫೋಟೋ ಕಾಪಿ ತರಿಸಿ ಗದಗ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೆ ಅವರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ದಯವಿಟ್ಟು ನನ್ನ ಭವಿಷ್ಯದ ಬಗ್ಗೆ ಶಿಕ್ಷಣ ಇಲಾಖೆ ಗಮನ ಹರಿಸಬೇಕು ಅಂತ ವಿದ್ಯಾರ್ಥಿ ಮನವಿ ಮಾಡಿಕೊಂಡಿದ್ದಾನೆ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..