AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ […]

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ಆಯೇಷಾ ಬಾನು
|

Updated on:Jun 28, 2020 | 7:50 AM

Share

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೊಸ ವಿದ್ಯಾರ್ಥಿಗಳಿಗೆ ಪುನರಾವರ್ತಿತ ಅಭ್ಯರ್ಥಿಗಳ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೀಗಾಗಿ 8 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಪರೀಕ್ಷೆ ಆರಂಭವಾದ ಆರ್ಧಗಂಟೆ ಬಳಿಕ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಗೊಂದಲದ ಬಗ್ಗೆ ಕೇಳಿದ್ರು. ಪ್ರಶ್ನೆಪತ್ರಿಕೆ ಬದಲಾಗಿರುವ ಬಗ್ಗೆ ಮೇಲ್ವಿಚಾರಕರಿಗೆ ಪ್ರಶ್ನಿಸಿದ್ದರು. ಆದರೆ ಕೊಟ್ಟ ಪ್ರಶ್ನೆಪತ್ರಿಕೆಗೆ ಉತ್ತರ ಬರೆಯುವಂತೆ ಒತ್ತಡ ಹೇರಿ ಮೇಲ್ವಿಚಾರಕರು ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ 8 ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಮೇಲ್ವಿಚಾರಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಮರು ಪರೀಕ್ಷೆ ನಡೆಸಲು ಒತ್ತಾಯಿಸಿದ್ದಾರೆ.

Published On - 7:48 am, Sun, 28 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್