AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ […]

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 28, 2020 | 7:50 AM

Share

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೊಸ ವಿದ್ಯಾರ್ಥಿಗಳಿಗೆ ಪುನರಾವರ್ತಿತ ಅಭ್ಯರ್ಥಿಗಳ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೀಗಾಗಿ 8 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಪರೀಕ್ಷೆ ಆರಂಭವಾದ ಆರ್ಧಗಂಟೆ ಬಳಿಕ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಗೊಂದಲದ ಬಗ್ಗೆ ಕೇಳಿದ್ರು. ಪ್ರಶ್ನೆಪತ್ರಿಕೆ ಬದಲಾಗಿರುವ ಬಗ್ಗೆ ಮೇಲ್ವಿಚಾರಕರಿಗೆ ಪ್ರಶ್ನಿಸಿದ್ದರು. ಆದರೆ ಕೊಟ್ಟ ಪ್ರಶ್ನೆಪತ್ರಿಕೆಗೆ ಉತ್ತರ ಬರೆಯುವಂತೆ ಒತ್ತಡ ಹೇರಿ ಮೇಲ್ವಿಚಾರಕರು ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ 8 ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಮೇಲ್ವಿಚಾರಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಮರು ಪರೀಕ್ಷೆ ನಡೆಸಲು ಒತ್ತಾಯಿಸಿದ್ದಾರೆ.

Published On - 7:48 am, Sun, 28 June 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ