AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ […]

SSLC ಗಣಿತ ಪ್ರಶ್ನೆಪತ್ರಿಕೆ ನೀಡುವಾಗ ಮಹಾ ಎಡವಟ್ಟು, 8 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
Follow us
ಆಯೇಷಾ ಬಾನು
|

Updated on:Jun 28, 2020 | 7:50 AM

ರಾಯಚೂರು: ಕೊರೊನಾ ಆತಂಕದ ನಡುವೆಯೂ ತಮ್ಮ ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ಹಲವು ಅಡೆ ತಡೆಗಳನ್ನು ಮೀರಿ ಕೊರೊನಾ ವಿರುದ್ಧ ಹೋರಾಡಿದ್ದಾರೆ. ಆದರೆ SSLC ಪರೀಕ್ಷೆಯಲ್ಲಿ ಮಹಾ ಎಡವಟ್ಟು ನಡೆದಿದೆ. 8 ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಸಿಂಧನೂರಿನಲ್ಲಿರುವ ಶ್ರೀಕೃಷ್ಣದೇವರಾಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಮಹಾ ಯಡವಟ್ಟು ನಡೆದಿದೆ. ಗಣಿತ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವಲ್ಲಿ ಯಡವಟ್ಟು ಮಾಡಿದ್ದಾರೆ. SSLC ಹೊಸ ಪಠ್ಯಕ್ರಮದ ಪ್ರಶ್ನೆಪತ್ರಿಕೆ ನೀಡುವ ಬದಲಿಗೆ ಹಳೇ ಪಠ್ಯಕ್ರಮದ ಗಣಿತ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೊಸ ವಿದ್ಯಾರ್ಥಿಗಳಿಗೆ ಪುನರಾವರ್ತಿತ ಅಭ್ಯರ್ಥಿಗಳ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಹೀಗಾಗಿ 8 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.

ಪರೀಕ್ಷೆ ಆರಂಭವಾದ ಆರ್ಧಗಂಟೆ ಬಳಿಕ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಗೊಂದಲದ ಬಗ್ಗೆ ಕೇಳಿದ್ರು. ಪ್ರಶ್ನೆಪತ್ರಿಕೆ ಬದಲಾಗಿರುವ ಬಗ್ಗೆ ಮೇಲ್ವಿಚಾರಕರಿಗೆ ಪ್ರಶ್ನಿಸಿದ್ದರು. ಆದರೆ ಕೊಟ್ಟ ಪ್ರಶ್ನೆಪತ್ರಿಕೆಗೆ ಉತ್ತರ ಬರೆಯುವಂತೆ ಒತ್ತಡ ಹೇರಿ ಮೇಲ್ವಿಚಾರಕರು ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ 8 ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಮೇಲ್ವಿಚಾರಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಮರು ಪರೀಕ್ಷೆ ನಡೆಸಲು ಒತ್ತಾಯಿಸಿದ್ದಾರೆ.

Published On - 7:48 am, Sun, 28 June 20

ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ