AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Trial Blast ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್, ಐಸಿಸ್ ಒಳಸಂಚು ಪತ್ತೆ

ಶಿವಮೊಗ್ಗ ತುಂಗಾತೀರದ ಟ್ರಯಲ್ ಬಾಂಬ್ ಬ್ಲಾಸ್ಟ್ ಕೇಸ್‌ಗೆ ಬಿಗ್ ಟ್ವಿಸ್ಟ್‌ ಸಿಕ್ಕಿದ್ದು, NIA ತಂಡ ಮತ್ತೊಂದು ದೊಡ್ಡ ಬೇಟೆಯಾಡಿದೆ. ರಾಕ್ಷಸರ ಜತೆ ಲಿಂಕ್ ಹೊಂದಿದ್ದ ಮತ್ತಷ್ಟು ಕ್ರಿಮಿಗಳನ್ನ ಬಲೆಗೆ ಕೆಡವಲಾಗಿದೆ.

Shivamogga Trial Blast ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್, ಐಸಿಸ್ ಒಳಸಂಚು ಪತ್ತೆ
ಎನ್ಐಎ
TV9 Web
| Edited By: |

Updated on: Jan 05, 2023 | 8:47 PM

Share

ಶಿವಮೊಗ್ಗ: ಶಿವಮೊಗ್ಗ ತುಂಗಾತೀರದಲ್ಲಿ ಸಂಭವಿಸಿದ್ದ ಟ್ರಯಲ್ ಬಾಂಬ್ ಬ್ಲಾಸ್ಟ್ (Shivamogga Trial Blast) ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್‌ನಲ್ಲಿ ಐಸಿಸ್ ಒಳಸಂಚು ಪತ್ತೆಯಾಗಿದೆ. ಈ ಸಂಬಂಧ ಎನ್​ಐಎ (NIA) ಇಂದು(ಜನವರಿ 05) ಶಿವಮೊಗ್ಗ, ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ ಸೇರಿ 6 ಕಡೆ ದಾಳಿ ಮಾಡಿದ್ದು, ಇಬ್ಬರು ಐಸಿಸ್ (I ಸಕ್ರಿಯ ಸದಸ್ಯರನ್ನ ಬಂಧಿಸಿದೆ.

ಇದನ್ನೂ ಓದಿ: Shivamogga News: ಶಿವಮೊಗ್ಗದಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನ: ಎನ್​​ಐಎಯಿಂದ ವಿಚಾರಣೆ

ಶಿವಮೊಗ್ಗದ ಮಂಜುನಾಥ ಬಡಾವಣೆಯ ಉಜೇರ್​ ಫರ್ಹಾನ್​ ಬೇಗ್ ಮತ್ತು ಉಡುಪಿಯ ರೇಶಾನ್ ತಾಜೂದ್ದೀನ್ ಶೇಕ್‌ ಎನ್ನುವರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈ ಹಿಂದೆ ಬಂಧನವಾಗಿರುವ ಆರೋಪಿ ಮಾಜ್ ವಿಚಾರಣೆ ವೇಳೆ ಇಬ್ಬರ ಹೆಸರು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ವಿವಿಧ ಕಡೆ ದಾಳಿ ಮಾಡಿ ಆ ಇಬ್ಬರನ್ನು ಖೆಡ್ಡಕ್ಕೆ ಬೀಳುಸುವಲ್ಲಿ ಯಶಸ್ವಿಯಾಗಿದ್ದಾರೆ.

ತುಂಗಾ ತೀರದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಮಾಜ್ ಮುನೀರ್ ಜತೆ ನಂಟು ಆರೋಪದಡಿ, ಮೂವರು ಪಿಯುಸಿ ಕ್ಲಾಸ್​ಮೆಟ್​ಗಳನ್ನ ವಿಚಾರಣೆ ನಡೆಸಿದೆ. ಶಿವಮೊಗ್ಗದ ತಾಜುದ್ದೀನ್ ಹಾಗೂ ಫರಾನ್, ಹೊನ್ನಾಳಿಯ ನಾವೀದ್​ ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈ ಪೈಕಿ ನಾವೀದ್​ನನ್ನು ವಿಚಾರಣೆ ಮಾಡಿ ಬಿಟ್ಟು ಕಳಿಸಿದ್ದಾರೆ. ಆದ್ರೆ, ತಾಜುದ್ದೀನ್ ಹಾಗೂ ಫರಾನ್ ಎನ್​ಐಎ ಅಧಿಕಾರಿಗಳು ಬಂಧಿಸಿ ಮತ್ತಷ್ಟು ತನಿಖೆ ತೀವ್ರಗೊಳಿಸಿದ್ದಾರೆ. ಇವರ ಜತೆ ಮತ್ತಿನ್ಯಾರು ಸಂಪರ್ಕದಲ್ಲಿದ್ರು ಎನ್ನುವುದನ್ನು ಸದ್ದಿಲ್ಲದೆ ತಲಾಶ್ ಮಾಡ್ತಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್