AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ: ಬಲೆಗೆ ಬಿದ್ದ ಅಪರೂಪದ ಬೃಹತ್ ವ್ಹೇಲ್ ಶಾರ್ಕ್ ಅನ್ನು ಮೀನುಗಾರರು ಏನು ಮಾಡಿದರು ಗೊತ್ತಾ?

ವಿಶ್ವದ ಅತಿದೊಡ್ಡ ಮೀನುಗಳ ಪೈಕಿ ಇದು ಕೂಡ ಒಂದಾಗಿದೆ. ಶಾಲಾ ಬಸ್‌ ಗಾತ್ರದವರೆಗೆ ಬೆಳೆಯುವ ಇವು ಸಣ್ಣ ಸಮುದ್ರ ಜೀವಿಗಳನ್ನು ಮತ್ತು ಮೀನಿನ ಮೊಟ್ಟೆಗಳನ್ನು ತಿಂದು ಬದುಕುತ್ತವೆ.

ಗೋಕರ್ಣ: ಬಲೆಗೆ ಬಿದ್ದ ಅಪರೂಪದ ಬೃಹತ್ ವ್ಹೇಲ್ ಶಾರ್ಕ್ ಅನ್ನು ಮೀನುಗಾರರು ಏನು ಮಾಡಿದರು ಗೊತ್ತಾ?
ಬಲೆಗೆ ಬಿದ್ದ ಬೃಹತ್​ ವ್ಹೇಲ್​ ಶಾರ್ಕ್​
Skanda
| Updated By: ಸಾಧು ಶ್ರೀನಾಥ್​|

Updated on: Jan 23, 2021 | 2:23 PM

Share

ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ತಡದಿ ಬಂದರಿನಲ್ಲಿ ಬೃಹತ್ ತಿಮಿಂಗಿಲ ಸೊರ (Whale Shark) ಮೀನುಗಾರರ ಬಲೆಗೆ ಬಿದ್ದಿದೆ. ಅತ್ಯಂತ ಅಪರೂಪವಾಗಿ ಕಂಡುಬರುವ ಈ ಪ್ರಭೇದದ ಮೀನು ಬೆಲೆಗೆ ಬಿದ್ದಿರುವುದು ಮೀನುಗಾರರಿಗೂ ಅಚ್ಚರಿ ಮೂಡಿಸಿದೆ. ಆದರೆ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಮೀನನ್ನು ಬೇಟೆಯಾಡುವುದು ಅಪರಾಧವಾಗಿರುವ ಕಾರಣ ಹಾಗೂ ಇದನ್ನು ಆಹಾರಕ್ಕಾಗಿ ಬಳಸುವುದೂ ಇಲ್ಲವಾದ್ದರಿಂದ ಅದನ್ನು ಬಲೆಯಿಂದ ಬಿಡಿಸಿದ ಮೀನುಗಾರರು ವಾಪಾಸು ಸಮುದ್ರಕ್ಕೆ ಬಿಟ್ಟಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ತದಡಿ ಭಾಗದ ಮೀನುಗಾರರಿಗೆ ಸಿಕ್ಕಿದ್ದ ತಿಮಿಂಗಿಲ ಸೊರ 300 ಕೆಜಿಗೂ ಹೆಚ್ಚು ತೂಕ ಹಾಗೂ 9 ಅಡಿಗೂ ಹೆಚ್ಚು ಉದ್ದವಿತ್ತು. ಸಾಧಾರಣವಾಗಿ ಗುಜರಾತ್​ ಭಾಗದಲ್ಲಿ ಹೆಚ್ಚಾಗಿ ಕಾಣಸಿಗುವ ಇವು ಅರಬ್ಬೀ ಸಮುದ್ರದುದ್ದಕ್ಕೂ ಅಲ್ಲಲ್ಲಿ ಸಿಗುತ್ತವೆ. ಆದರೆ, ಈ ಮೀನುಗಳು ಇತ್ತೀಚೆಗೆ ಬಹಳ ಅಪರೂಪವಾಗಿರುವ ಕಾರಣ ಇವುಗಳ ಸಂರಕ್ಷಣೆಗಾಗಿ ಸರ್ಕಾರ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ಕಡಲಜೀವ ವಿಜ್ಞಾನ ಕೇಂದ್ರದ ಡಾ. ಶಿವಕುಮಾರ್ ಹರಗಿ ತಿಳಿಸಿದ್ದಾರೆ.

ವಿಶ್ವದ ಅತಿದೊಡ್ಡ ಮೀನುಗಳ ಪೈಕಿ ಇದು ಕೂಡ ಒಂದಾಗಿದೆ. ಶಾಲಾ ಬಸ್‌ ಗಾತ್ರದವರೆಗೆ ಬೆಳೆಯುವ ಇವು ಸಣ್ಣ ಸಮುದ್ರ ಜೀವಿಗಳನ್ನು ಮತ್ತು ಮೀನಿನ ಮೊಟ್ಟೆಗಳನ್ನು ತಿಂದು ಬದುಕುತ್ತವೆ. ನೋಡಲು ದೈತ್ಯವೆನಿಸುವ ಇವು ನಿಧಾನವಾಗಿ ಈಜುತ್ತವೆ ಎಂದು ಶಿವಕುಮಾರ್​ ಮೀನಿನ ಕುರಿತಾಗಿ ಮಾಹಿತಿ ನೀಡಿದ್ದಾರೆ.

ಈ ಮೀನುಗಳನ್ನು ಬೇಟೆಯಾಡುವುದು ಹಾಗೂ ಆಹಾರಕ್ಕಾಗಿ ಬಳಸುವುದು ಅಪರಾಧವಾದ ಕಾರಣ ಮೀನುಗಾರರು ಫೋಟೋ ತೆಗೆಸಿಕೊಂಡ ಬಳಿಕ ವಾಪಾಸು ಕಡಲಿಗೆ ಬಿಟ್ಟಿದ್ದಾರೆ.

ಸಾಗರದಲ್ಲಿ ಸಲ್ಲದು ಸಾವಿನೊಂದಿಗೆ ಸರಸ; ಸತ್ತವರನ್ನು ನೋಡಿಯಾದರೂ ಬುದ್ಧಿ ಕಲೀತಾರಾ ಜನ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ