AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ: ಬಲೆಗೆ ಬಿದ್ದ ಅಪರೂಪದ ಬೃಹತ್ ವ್ಹೇಲ್ ಶಾರ್ಕ್ ಅನ್ನು ಮೀನುಗಾರರು ಏನು ಮಾಡಿದರು ಗೊತ್ತಾ?

ವಿಶ್ವದ ಅತಿದೊಡ್ಡ ಮೀನುಗಳ ಪೈಕಿ ಇದು ಕೂಡ ಒಂದಾಗಿದೆ. ಶಾಲಾ ಬಸ್‌ ಗಾತ್ರದವರೆಗೆ ಬೆಳೆಯುವ ಇವು ಸಣ್ಣ ಸಮುದ್ರ ಜೀವಿಗಳನ್ನು ಮತ್ತು ಮೀನಿನ ಮೊಟ್ಟೆಗಳನ್ನು ತಿಂದು ಬದುಕುತ್ತವೆ.

ಗೋಕರ್ಣ: ಬಲೆಗೆ ಬಿದ್ದ ಅಪರೂಪದ ಬೃಹತ್ ವ್ಹೇಲ್ ಶಾರ್ಕ್ ಅನ್ನು ಮೀನುಗಾರರು ಏನು ಮಾಡಿದರು ಗೊತ್ತಾ?
ಬಲೆಗೆ ಬಿದ್ದ ಬೃಹತ್​ ವ್ಹೇಲ್​ ಶಾರ್ಕ್​
Skanda
| Edited By: |

Updated on: Jan 23, 2021 | 2:23 PM

Share

ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ತಡದಿ ಬಂದರಿನಲ್ಲಿ ಬೃಹತ್ ತಿಮಿಂಗಿಲ ಸೊರ (Whale Shark) ಮೀನುಗಾರರ ಬಲೆಗೆ ಬಿದ್ದಿದೆ. ಅತ್ಯಂತ ಅಪರೂಪವಾಗಿ ಕಂಡುಬರುವ ಈ ಪ್ರಭೇದದ ಮೀನು ಬೆಲೆಗೆ ಬಿದ್ದಿರುವುದು ಮೀನುಗಾರರಿಗೂ ಅಚ್ಚರಿ ಮೂಡಿಸಿದೆ. ಆದರೆ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಮೀನನ್ನು ಬೇಟೆಯಾಡುವುದು ಅಪರಾಧವಾಗಿರುವ ಕಾರಣ ಹಾಗೂ ಇದನ್ನು ಆಹಾರಕ್ಕಾಗಿ ಬಳಸುವುದೂ ಇಲ್ಲವಾದ್ದರಿಂದ ಅದನ್ನು ಬಲೆಯಿಂದ ಬಿಡಿಸಿದ ಮೀನುಗಾರರು ವಾಪಾಸು ಸಮುದ್ರಕ್ಕೆ ಬಿಟ್ಟಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ತದಡಿ ಭಾಗದ ಮೀನುಗಾರರಿಗೆ ಸಿಕ್ಕಿದ್ದ ತಿಮಿಂಗಿಲ ಸೊರ 300 ಕೆಜಿಗೂ ಹೆಚ್ಚು ತೂಕ ಹಾಗೂ 9 ಅಡಿಗೂ ಹೆಚ್ಚು ಉದ್ದವಿತ್ತು. ಸಾಧಾರಣವಾಗಿ ಗುಜರಾತ್​ ಭಾಗದಲ್ಲಿ ಹೆಚ್ಚಾಗಿ ಕಾಣಸಿಗುವ ಇವು ಅರಬ್ಬೀ ಸಮುದ್ರದುದ್ದಕ್ಕೂ ಅಲ್ಲಲ್ಲಿ ಸಿಗುತ್ತವೆ. ಆದರೆ, ಈ ಮೀನುಗಳು ಇತ್ತೀಚೆಗೆ ಬಹಳ ಅಪರೂಪವಾಗಿರುವ ಕಾರಣ ಇವುಗಳ ಸಂರಕ್ಷಣೆಗಾಗಿ ಸರ್ಕಾರ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ಕಡಲಜೀವ ವಿಜ್ಞಾನ ಕೇಂದ್ರದ ಡಾ. ಶಿವಕುಮಾರ್ ಹರಗಿ ತಿಳಿಸಿದ್ದಾರೆ.

ವಿಶ್ವದ ಅತಿದೊಡ್ಡ ಮೀನುಗಳ ಪೈಕಿ ಇದು ಕೂಡ ಒಂದಾಗಿದೆ. ಶಾಲಾ ಬಸ್‌ ಗಾತ್ರದವರೆಗೆ ಬೆಳೆಯುವ ಇವು ಸಣ್ಣ ಸಮುದ್ರ ಜೀವಿಗಳನ್ನು ಮತ್ತು ಮೀನಿನ ಮೊಟ್ಟೆಗಳನ್ನು ತಿಂದು ಬದುಕುತ್ತವೆ. ನೋಡಲು ದೈತ್ಯವೆನಿಸುವ ಇವು ನಿಧಾನವಾಗಿ ಈಜುತ್ತವೆ ಎಂದು ಶಿವಕುಮಾರ್​ ಮೀನಿನ ಕುರಿತಾಗಿ ಮಾಹಿತಿ ನೀಡಿದ್ದಾರೆ.

ಈ ಮೀನುಗಳನ್ನು ಬೇಟೆಯಾಡುವುದು ಹಾಗೂ ಆಹಾರಕ್ಕಾಗಿ ಬಳಸುವುದು ಅಪರಾಧವಾದ ಕಾರಣ ಮೀನುಗಾರರು ಫೋಟೋ ತೆಗೆಸಿಕೊಂಡ ಬಳಿಕ ವಾಪಾಸು ಕಡಲಿಗೆ ಬಿಟ್ಟಿದ್ದಾರೆ.

ಸಾಗರದಲ್ಲಿ ಸಲ್ಲದು ಸಾವಿನೊಂದಿಗೆ ಸರಸ; ಸತ್ತವರನ್ನು ನೋಡಿಯಾದರೂ ಬುದ್ಧಿ ಕಲೀತಾರಾ ಜನ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು