AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ: ಬಲೆಗೆ ಬಿದ್ದ ಅಪರೂಪದ ಬೃಹತ್ ವ್ಹೇಲ್ ಶಾರ್ಕ್ ಅನ್ನು ಮೀನುಗಾರರು ಏನು ಮಾಡಿದರು ಗೊತ್ತಾ?

ವಿಶ್ವದ ಅತಿದೊಡ್ಡ ಮೀನುಗಳ ಪೈಕಿ ಇದು ಕೂಡ ಒಂದಾಗಿದೆ. ಶಾಲಾ ಬಸ್‌ ಗಾತ್ರದವರೆಗೆ ಬೆಳೆಯುವ ಇವು ಸಣ್ಣ ಸಮುದ್ರ ಜೀವಿಗಳನ್ನು ಮತ್ತು ಮೀನಿನ ಮೊಟ್ಟೆಗಳನ್ನು ತಿಂದು ಬದುಕುತ್ತವೆ.

ಗೋಕರ್ಣ: ಬಲೆಗೆ ಬಿದ್ದ ಅಪರೂಪದ ಬೃಹತ್ ವ್ಹೇಲ್ ಶಾರ್ಕ್ ಅನ್ನು ಮೀನುಗಾರರು ಏನು ಮಾಡಿದರು ಗೊತ್ತಾ?
ಬಲೆಗೆ ಬಿದ್ದ ಬೃಹತ್​ ವ್ಹೇಲ್​ ಶಾರ್ಕ್​
Skanda
| Edited By: |

Updated on: Jan 23, 2021 | 2:23 PM

Share

ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ತಡದಿ ಬಂದರಿನಲ್ಲಿ ಬೃಹತ್ ತಿಮಿಂಗಿಲ ಸೊರ (Whale Shark) ಮೀನುಗಾರರ ಬಲೆಗೆ ಬಿದ್ದಿದೆ. ಅತ್ಯಂತ ಅಪರೂಪವಾಗಿ ಕಂಡುಬರುವ ಈ ಪ್ರಭೇದದ ಮೀನು ಬೆಲೆಗೆ ಬಿದ್ದಿರುವುದು ಮೀನುಗಾರರಿಗೂ ಅಚ್ಚರಿ ಮೂಡಿಸಿದೆ. ಆದರೆ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಮೀನನ್ನು ಬೇಟೆಯಾಡುವುದು ಅಪರಾಧವಾಗಿರುವ ಕಾರಣ ಹಾಗೂ ಇದನ್ನು ಆಹಾರಕ್ಕಾಗಿ ಬಳಸುವುದೂ ಇಲ್ಲವಾದ್ದರಿಂದ ಅದನ್ನು ಬಲೆಯಿಂದ ಬಿಡಿಸಿದ ಮೀನುಗಾರರು ವಾಪಾಸು ಸಮುದ್ರಕ್ಕೆ ಬಿಟ್ಟಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ತದಡಿ ಭಾಗದ ಮೀನುಗಾರರಿಗೆ ಸಿಕ್ಕಿದ್ದ ತಿಮಿಂಗಿಲ ಸೊರ 300 ಕೆಜಿಗೂ ಹೆಚ್ಚು ತೂಕ ಹಾಗೂ 9 ಅಡಿಗೂ ಹೆಚ್ಚು ಉದ್ದವಿತ್ತು. ಸಾಧಾರಣವಾಗಿ ಗುಜರಾತ್​ ಭಾಗದಲ್ಲಿ ಹೆಚ್ಚಾಗಿ ಕಾಣಸಿಗುವ ಇವು ಅರಬ್ಬೀ ಸಮುದ್ರದುದ್ದಕ್ಕೂ ಅಲ್ಲಲ್ಲಿ ಸಿಗುತ್ತವೆ. ಆದರೆ, ಈ ಮೀನುಗಳು ಇತ್ತೀಚೆಗೆ ಬಹಳ ಅಪರೂಪವಾಗಿರುವ ಕಾರಣ ಇವುಗಳ ಸಂರಕ್ಷಣೆಗಾಗಿ ಸರ್ಕಾರ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ಕಡಲಜೀವ ವಿಜ್ಞಾನ ಕೇಂದ್ರದ ಡಾ. ಶಿವಕುಮಾರ್ ಹರಗಿ ತಿಳಿಸಿದ್ದಾರೆ.

ವಿಶ್ವದ ಅತಿದೊಡ್ಡ ಮೀನುಗಳ ಪೈಕಿ ಇದು ಕೂಡ ಒಂದಾಗಿದೆ. ಶಾಲಾ ಬಸ್‌ ಗಾತ್ರದವರೆಗೆ ಬೆಳೆಯುವ ಇವು ಸಣ್ಣ ಸಮುದ್ರ ಜೀವಿಗಳನ್ನು ಮತ್ತು ಮೀನಿನ ಮೊಟ್ಟೆಗಳನ್ನು ತಿಂದು ಬದುಕುತ್ತವೆ. ನೋಡಲು ದೈತ್ಯವೆನಿಸುವ ಇವು ನಿಧಾನವಾಗಿ ಈಜುತ್ತವೆ ಎಂದು ಶಿವಕುಮಾರ್​ ಮೀನಿನ ಕುರಿತಾಗಿ ಮಾಹಿತಿ ನೀಡಿದ್ದಾರೆ.

ಈ ಮೀನುಗಳನ್ನು ಬೇಟೆಯಾಡುವುದು ಹಾಗೂ ಆಹಾರಕ್ಕಾಗಿ ಬಳಸುವುದು ಅಪರಾಧವಾದ ಕಾರಣ ಮೀನುಗಾರರು ಫೋಟೋ ತೆಗೆಸಿಕೊಂಡ ಬಳಿಕ ವಾಪಾಸು ಕಡಲಿಗೆ ಬಿಟ್ಟಿದ್ದಾರೆ.

ಸಾಗರದಲ್ಲಿ ಸಲ್ಲದು ಸಾವಿನೊಂದಿಗೆ ಸರಸ; ಸತ್ತವರನ್ನು ನೋಡಿಯಾದರೂ ಬುದ್ಧಿ ಕಲೀತಾರಾ ಜನ

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!