AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್​ ಬಿಗ್​ ಬಾಸ್​ ಮನೆಯ ಹೊಸ ಕ್ಯಾಪ್ಟನ್​; ಸದಸ್ಯರ ಎದುರೇ ಅವರು ಅಳೋಕೂ ಇದೆ ಕಾರಣ

ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ದಿವ್ಯಾ ಸುರೇಶ್​, ವಿಶ್ವ, ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಟಾಸ್ಕ್​ಗೆ ಆಯ್ಕೆ ಆಗಿದ್ದರು. ಈ ಟಾಸ್ಕ್​ನಲ್ಲಿ ಕೊನೆಯವರೆಗೆ ಇದ್ದಿದ್ದು ಅರವಿಂದ್ ಈ ಮೂಲಕ ಅವರು ಟಾಸ್ಕ್​ ಗೆದ್ದು ಕ್ಯಾಪ್ಟನ್​ ಆಗಿದ್ದಾರೆ.

ಅರವಿಂದ್​ ಬಿಗ್​ ಬಾಸ್​ ಮನೆಯ ಹೊಸ ಕ್ಯಾಪ್ಟನ್​; ಸದಸ್ಯರ ಎದುರೇ ಅವರು ಅಳೋಕೂ ಇದೆ ಕಾರಣ
ಅರವಿಂದ್​
ರಾಜೇಶ್ ದುಗ್ಗುಮನೆ
|

Updated on: Mar 18, 2021 | 10:35 PM

Share

ಮೂರನೇ ವಾರಕ್ಕೆ ಅರವಿಂದ್​ ಕೆಪಿ ಬಿಗ್​ ಬಾಸ್​ ಮನೆಯ ಕ್ಯಾಪ್ಟನ್​ ಆಗಿ ಹೊರ ಹೊಮ್ಮಿದ್ದಾರೆ. ಈ ಮೂಲಕ ಮೂರನೇ ವಾರ ಅವರು ಮನೆಯನ್ನು ಮುನ್ನಡೆಸಲಿದ್ದಾರೆ. ಅವರು ಕ್ಯಾಪ್ಟನ್​ ಆಗುತ್ತಿದ್ದಂತೆ ಗಳಗಳನೆ ಅತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಜೋಡಿ ಟಾಸ್ಕ್​ನಲ್ಲಿ ರಾಜೀವ್​ ಹಾಗೂ ದಿವ್ಯಾ ಉರುಡಗ ಅದ್ಭುತವಾಗಿ ಆಟವಾಡಿದ್ದರು. ಗೇಮ್​ ಗೆದ್ದಿದ್ದಕ್ಕೆ ಸಿಕ್ಕಿದ್ದ ವಿಶೇಷ ಚಾರ್ಜರ್​ ಅನ್ನು ಹಿಂದಿರುಗಿಸಿದರೆ ಬೆಡ್​ ರೂಂ ಬಿಟ್ಟುಕೊಡುವುದಾಗಿ ಬಿಗ್​ ಬಾಸ್​ ಹೇಳಿದ್ದರು. ಆದರೆ, ಇದಕ್ಕೆ ಅರವಿಂದ್​​ ನಿರಾಕರಿಸಿದ್ದರು. ಇದು ಪರೋಕ್ಷವಾಗಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಬರೋಕೆ ಅವರಿಗೆ ಸಹಾಯ ಮಾಡಿದೆ.

ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ದಿವ್ಯಾ ಸುರೇಶ್​, ವಿಶ್ವ, ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಟಾಸ್ಕ್​ಗೆ ಆಯ್ಕೆ ಆಗಿದ್ದರು. ಯು ಆಕಾರದ ಆಯಾಸ್ಕಾಂತವನ್ನು ಎರಡು ಕಬ್ಬಿಣದ ಹಿಡಿಕೆಯಲ್ಲಿ ಹಿಡಿದುಕೊಳ್ಳಬೇಕು. ಈ ಟಾಸ್ಕ್​ನಲ್ಲಿ ಕೊನೆಯವರೆಗೆ ಇದ್ದಿದ್ದು ಅರವಿಂದ್ ಈ ಮೂಲಕ ಅವರು ಟಾಸ್ಕ್​ ಗೆದ್ದು ಕ್ಯಾಪ್ಟನ್​ ಆಗಿದ್ದಾರೆ.

ಇನ್ನು, ಬಿಗ್​ ಬಾಸ್​ ಮನೆ ಸ್ಪರ್ಧಿಗಳಿಗೆ ಜೀವನದಲ್ಲಿ ತಿರುವು ನೀಡಿದವರ ಬಗ್ಗೆ ಹೇಳಿಕೊಳ್ಳೋಕೆ ಅವಕಾಶ ನೀಡಲಾಗಿತ್ತು. ಈ ವೇಳೆ ಮಾತನಾಡಿದ್ದ ಅರವಿಂದ್​, ಬೆಂಗಳೂರಿಗೆ ಬಂದಿದ್ದೆ. ಹಾಸ್ಟೇಲ್​ ​ ಪಕ್ಕದಲ್ಲಿ ಒಂದು ಆಟೋ ಮೊಬೈಲ್​ ಸ್ಪೇರ್​​ ಶಾಪ್​ ಇತ್ತು. ನನ್ನ ರೈಡ್​ಗೆ 2005-06 ಅವರೇ ಸ್ಪಾನ್ಸರ್​ ಮಾಡಿದ್ದರು. ಇದು ನನ್ನ ಜೀವನದ ದೊಡ್ಡ ತಿರುವು. ಅವರು ಇಲ್ಲ ಎಂದರೆ ನಾನು ಇಲ್ಲಿಗೆ ಬರುತ್ತಲೇ ಇರುತ್ತಿರಲಿಲ್ಲ ಎಂದು ಕಣ್ಣಲ್ಲಿ ನೀರು ಹಾಕಿದರು.

ದಿವ್ಯಾ-ಮಂಜು ರೊಮ್ಯಾನ್ಸ್​..

ದಿವ್ಯಾ ಹಾಗೂ ಮಂಜು ಬಿಗ್​ ಬಾಸ್​ ಮನೆಯಲ್ಲಿ ತುಂಬಾನೇ ಅನ್ಯೋನ್ಯವಾಗಿರುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಒಬ್ಬರಿಗೊಬ್ಬರು ಜಗಳ ಆಡಿದ ಉದಾಹರಣೆ ತುಂಬಾನೇ ಕಡಿಮೆ. ಬಿಗ್​ ಬಾಸ್​ ಮನೆಯಲ್ಲಿ ಇವರ ರೊಮ್ಯಾನ್ಸ್​ ಮೂರನೇ ವಾರವೂ ಮುಂದುವರಿದೆ. ಸಾಮಾನ್ಯವಾಗಿ ಪ್ರೀತಿ ಪಾತ್ರರಾದವರ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳಲಾಗುತ್ತದೆ. ಮನೆಯಲ್ಲೂ ಇಂದು ಅದೇ ಆಗಿದೆ. ಮಂಜು ಕೈ ಮೇಲೆ ದಿವ್ಯಾ ಸ್ಕೆಚ್​ಪೆನ್​ ತೆಗೆದುಕೊಂಡು ಬರೆಯೋಕೆ ಸ್ಟಾರ್ಟ್​ ಮಾಡಿದ್ದಾರೆ. ಈ ವೇಳೆ ಅವರು ಬರೆದಿದ್ದು ‘ಮಂಜು ಲವ್ಸ್​ ದಿವ್ಯಾ’ ಎಂದು. ಇದನ್ನು ನೋಡಿದ ಮಂಜು, ಅಬ್ಬಾ ಎಷ್ಟೊಂದು ಪ್ರೀತಿಯಿಂದ ಬರೆಯುತ್ತಿದ್ದಾರೆ ಎಂದಿದ್ದಾರೆ. ಹೀಗೆ ಬರೆದಿದ್ದನ್ನು ಮಂಜು, ವಿಶ್ವಾಗೆ ತೋರಿಸಿದ್ದಾರೆ. ಇದನ್ನು ನೋಡಿದ ವಿಶ್ವ ನಾಚಿ ನೀರಾಗಿದ್ದಾರೆ. ನಗುತ್ತಲೇ ಕಣ್ಣು ಮುಚ್ಚಿದ್ದಾರೆ. ಈ ವೇಳೆ ಅವರಿಗೆ ಏನು ಹೇಳಬೇಕು ಎನ್ನುವುದೇ ಗೊತ್ತಾಗಿಲ್ಲ. ಆಗ ನೋಡೋಕೆ ಎರಡು ಕಣ್ಣು ಸಾಲುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ-ಮಂಜು ರೊಮ್ಯಾನ್ಸ್​ ಕಂಡು ನಾಚಿ ನೀರಾದ ಪುಟಾಣಿ ವಿಶ್ವ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ