AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಆತ್ಮಹತ್ಯೆ ಮಾಡಿಕೊಂಡರೆ ತಪ್ಪಿತಸ್ಥರನ್ನು ಜೈಲಿಗೆ ಹಾಕಿ: ಮೋದಿಗೆ ಮನವಿ ಮಾಡಿದ ಬಿಗ್​ ಬಾಸ್ ಮಾಜಿ​ ಸ್ಪರ್ಧಿ

ನನ್ನ ಕೆಲಸ, ಸ್ವಜನಪಕ್ಷಪಾತ ನನ್ನನ್ನು ಕೊಲ್ಲುತ್ತಿದೆ. ನಾನು ಈ ನೋವನ್ನು ತಿಂದು ಸಾಕಾಗಿದೆ. ಹೀಗಾಗಿ ಸಾಯಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಮೀರಾ.

ನಾನು ಆತ್ಮಹತ್ಯೆ ಮಾಡಿಕೊಂಡರೆ ತಪ್ಪಿತಸ್ಥರನ್ನು ಜೈಲಿಗೆ ಹಾಕಿ: ಮೋದಿಗೆ ಮನವಿ ಮಾಡಿದ ಬಿಗ್​ ಬಾಸ್ ಮಾಜಿ​ ಸ್ಪರ್ಧಿ
ಆತ್ಮಹತ್ಯೆ ಬಗ್ಗೆ ವಿಡಿಯೋ ಮಾಡಿಕೊಂಡ ಮೀರಾ ಮಿಥುನ್
ರಾಜೇಶ್ ದುಗ್ಗುಮನೆ
|

Updated on: Feb 13, 2021 | 7:01 PM

Share

ಕನ್ನಡ ಬಿಗ್​ ಬಾಸ್​ ಮನೆಗೆ ತೆರಳಿದ್ದ ಜಯಶ್ರೀ ರಾಮಯ್ಯ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಮತ್ತೋರ್ವ ನಟಿ ಹಾಗೂ ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಆತ್ಮಹತ್ಯೆಗೆ ಶರಣಾಗುವ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಈ ವಿಡಿಯೋ ನೋಡಿದ ನಂತರ ಅನೇಕರು ಇವರಿಗೆ ಸಾಂತ್ವನ ಹೇಳಿದ್ದಾರೆ. ತಮಿಳಿನ ವಿವಾದಿತ ನಟಿ ಮೀರಾ ಮಿಥುನ್​  ತಾವು ಸತ್ತರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮೋದಿಗೆ ಟ್ವಿಟ್ಟರ್​ನಲ್ಲೇ ಆಗ್ರಹಿಸಿದ್ದಾರೆ.

ನಾನು ಕಳೆದ 3 ವರ್ಷಗಳಿಂದ ಕಿರುಕುಳ ಅನುಭವಿಸುತ್ತಿದ್ದೇನೆ. ಇದೇ ಕಾರಣಕ್ಕೆ ಸಾಮಾಜಿಕ ಜಾಲತಾಣದಿಂದ ದೂರ ಇರಲು ಇಷ್ಟಪಡುತ್ತೇನೆ. ಆದರೆ, ನನ್ನ ಅಭಿಮಾನಿಗಳ ಜತೆ ಸಂಪರ್ಕದಲ್ಲಿರಲು ಇದೊಂದೇ ಮಾರ್ಗ. ನನ್ನ ಕೆಲಸ, ಸ್ವಜನಪಕ್ಷಪಾತ ನನ್ನನ್ನು ಕೊಲ್ಲುತ್ತಿದೆ. ನಾನು ಈ ನೋವನ್ನು ತಿಂದು ಸಾಕಾಗಿದೆ. ಹೀಗಾಗಿ ಸಾಯಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಮೀರಾ.

ನಾನು ಈ ಜಗತ್ತಿನಲ್ಲಿ ಬದುಕಬಾರದು ಎಂದು ಅನೇಕರು ಹೇಳುತ್ತಿದ್ದಾರೆ. ನಾನು ಒಳ್ಳೆಯ ಕೆಲಸ ಮಾಡಿದ್ದೇನೆ. ನನಗೆ ಕುಟುಂಬ ಮತ್ತು ಸ್ನೇಹಿತರಿದ್ದಾರೆ. ಆದರೆ, ನನ್ನ ದ್ವೇಷಿಗಳು ನಾನು ಸಾಯಬೇಕೆಂದು ಬಯಸುತ್ತಾರೆ. ಶತ್ರುಗಳು ನನಗೆ ನೋವು ನೀಡುತ್ತಿದ್ದಾರೆ ಮತ್ತು ನಾನು ನೋವನ್ನು ಕೊನೆಗೊಳಿಸಲು ಬಯಸುತ್ತೇನೆ ಎಂದು ಹೇಳುವ ಮೂಲಕ ಆತ್ಮಹತ್ಯೆಯ ಸೂಚನೆ ನೀಡಿದ್ದಾರೆ.

ಒಂದೊಮ್ಮೆ ನಾನು ಸತ್ತರೆ, ನನ್ನ ಸಾವಿಗೆ ಕಾರಣರಾದವರನ್ನು ಜೈಲಿಗೆ ಕಳುಹಿಸಬೇಕು ಎಂದು ನರೇಂದ್ರ ಮೋದಿ ಬಳಿ ಅವರು ಮನವಿ ಮಾಡಿದ್ದಾರೆ.

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ