ನಾನು ಆತ್ಮಹತ್ಯೆ ಮಾಡಿಕೊಂಡರೆ ತಪ್ಪಿತಸ್ಥರನ್ನು ಜೈಲಿಗೆ ಹಾಕಿ: ಮೋದಿಗೆ ಮನವಿ ಮಾಡಿದ ಬಿಗ್​ ಬಾಸ್ ಮಾಜಿ​ ಸ್ಪರ್ಧಿ

ನನ್ನ ಕೆಲಸ, ಸ್ವಜನಪಕ್ಷಪಾತ ನನ್ನನ್ನು ಕೊಲ್ಲುತ್ತಿದೆ. ನಾನು ಈ ನೋವನ್ನು ತಿಂದು ಸಾಕಾಗಿದೆ. ಹೀಗಾಗಿ ಸಾಯಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಮೀರಾ.

ನಾನು ಆತ್ಮಹತ್ಯೆ ಮಾಡಿಕೊಂಡರೆ ತಪ್ಪಿತಸ್ಥರನ್ನು ಜೈಲಿಗೆ ಹಾಕಿ: ಮೋದಿಗೆ ಮನವಿ ಮಾಡಿದ ಬಿಗ್​ ಬಾಸ್ ಮಾಜಿ​ ಸ್ಪರ್ಧಿ
ಆತ್ಮಹತ್ಯೆ ಬಗ್ಗೆ ವಿಡಿಯೋ ಮಾಡಿಕೊಂಡ ಮೀರಾ ಮಿಥುನ್

Updated on: Feb 13, 2021 | 7:01 PM

ಕನ್ನಡ ಬಿಗ್​ ಬಾಸ್​ ಮನೆಗೆ ತೆರಳಿದ್ದ ಜಯಶ್ರೀ ರಾಮಯ್ಯ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಮತ್ತೋರ್ವ ನಟಿ ಹಾಗೂ ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಆತ್ಮಹತ್ಯೆಗೆ ಶರಣಾಗುವ ಬಗ್ಗೆ ವಿಡಿಯೋ ಮಾಡಿ ಹಾಕಿದ್ದಾರೆ. ಈ ವಿಡಿಯೋ ನೋಡಿದ ನಂತರ ಅನೇಕರು ಇವರಿಗೆ ಸಾಂತ್ವನ ಹೇಳಿದ್ದಾರೆ. ತಮಿಳಿನ ವಿವಾದಿತ ನಟಿ ಮೀರಾ ಮಿಥುನ್​  ತಾವು ಸತ್ತರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮೋದಿಗೆ ಟ್ವಿಟ್ಟರ್​ನಲ್ಲೇ ಆಗ್ರಹಿಸಿದ್ದಾರೆ.

ನಾನು ಕಳೆದ 3 ವರ್ಷಗಳಿಂದ ಕಿರುಕುಳ ಅನುಭವಿಸುತ್ತಿದ್ದೇನೆ. ಇದೇ ಕಾರಣಕ್ಕೆ ಸಾಮಾಜಿಕ ಜಾಲತಾಣದಿಂದ ದೂರ ಇರಲು ಇಷ್ಟಪಡುತ್ತೇನೆ. ಆದರೆ, ನನ್ನ ಅಭಿಮಾನಿಗಳ ಜತೆ ಸಂಪರ್ಕದಲ್ಲಿರಲು ಇದೊಂದೇ ಮಾರ್ಗ. ನನ್ನ ಕೆಲಸ, ಸ್ವಜನಪಕ್ಷಪಾತ ನನ್ನನ್ನು ಕೊಲ್ಲುತ್ತಿದೆ. ನಾನು ಈ ನೋವನ್ನು ತಿಂದು ಸಾಕಾಗಿದೆ. ಹೀಗಾಗಿ ಸಾಯಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಮೀರಾ.

ನಾನು ಈ ಜಗತ್ತಿನಲ್ಲಿ ಬದುಕಬಾರದು ಎಂದು ಅನೇಕರು ಹೇಳುತ್ತಿದ್ದಾರೆ. ನಾನು ಒಳ್ಳೆಯ ಕೆಲಸ ಮಾಡಿದ್ದೇನೆ. ನನಗೆ ಕುಟುಂಬ ಮತ್ತು ಸ್ನೇಹಿತರಿದ್ದಾರೆ. ಆದರೆ, ನನ್ನ ದ್ವೇಷಿಗಳು ನಾನು ಸಾಯಬೇಕೆಂದು ಬಯಸುತ್ತಾರೆ. ಶತ್ರುಗಳು ನನಗೆ ನೋವು ನೀಡುತ್ತಿದ್ದಾರೆ ಮತ್ತು ನಾನು ನೋವನ್ನು ಕೊನೆಗೊಳಿಸಲು ಬಯಸುತ್ತೇನೆ ಎಂದು ಹೇಳುವ ಮೂಲಕ ಆತ್ಮಹತ್ಯೆಯ ಸೂಚನೆ ನೀಡಿದ್ದಾರೆ.

ಒಂದೊಮ್ಮೆ ನಾನು ಸತ್ತರೆ, ನನ್ನ ಸಾವಿಗೆ ಕಾರಣರಾದವರನ್ನು ಜೈಲಿಗೆ ಕಳುಹಿಸಬೇಕು ಎಂದು ನರೇಂದ್ರ ಮೋದಿ ಬಳಿ ಅವರು ಮನವಿ ಮಾಡಿದ್ದಾರೆ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us