AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ಬಿಗ್​ ಬಾಸ್​ ಕನ್ನಡ ಎರಡನೇ ವಾರದ ಎಲಿಮಿನೇಷನ್​ಗೆ 8 ಸದಸ್ಯರು ನಾಮಿನೇಟ್​

Bigg Boss Kannada 2nd Week Elimination: ಕಳೆದ ಬಾರಿ ನೇರವಾಗಿ ನಾಮಿನೇಟ್​ ಆಗಿದ್ದ ನಿರ್ಮಲಾ ಈ ಬಾರಿಯೂ ಅತಿ ಹೆಚ್ಚು ಮತ ಪಡೆದು ನಾಮಿನೇಟ್​ ಆಗಿದ್ದಾರೆ.

BBK8: ಬಿಗ್​ ಬಾಸ್​ ಕನ್ನಡ ಎರಡನೇ ವಾರದ ಎಲಿಮಿನೇಷನ್​ಗೆ 8 ಸದಸ್ಯರು ನಾಮಿನೇಟ್​
ಬಿಗ್​​ಬಾಸ್​​ ಕನ್ನಡ 8
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 8:28 AM

Share

ಕನ್ನಡ ಬಿಗ್​ ಬಾಸ್​ ಎಂಟನೇ ಸೀಸನ್​ನ ಮೊದಲೇ ವಾರದಲ್ಲಿ ಧನುಶ್ರೀ ನಾಮಿನೇಟ್​ ಆಗಿ ಮನೆಯಿಂದ ಹೊರಹೋಗಿದ್ದರು. ಈಗ ಎರಡನೇ ವಾರದ ಎಲಿಮಿನೇಷನ್​​ ಪ್ರಕ್ರಿಯೆ ಆರಂಭವಾಗಿದೆ. ಈ ವಾರ ಎಂಟು ಜನರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದಾರೆ. ಅವರ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ. ಕಳೆದ ಬಾರಿ ನೇರವಾಗಿ ನಾಮಿನೇಟ್​ ಆಗಿದ್ದ ನಿರ್ಮಲಾ ಈ ಬಾರಿಯೂ ಅತಿ ಹೆಚ್ಚು ಮತ ಪಡೆದು ನಾಮಿನೇಟ್​ ಆಗಿದ್ದಾರೆ. ಭಿನ್ನಾಭಿಪ್ರಾಯ, ಎಲ್ಲರ ಜತೆ ಹೊಂದುಕೊಳ್ಳುತ್ತಿಲ್ಲ, ಅವರು ತೆಗೆದುಕೊಳ್ಳುವ ನಿರ್ಧಾರ ಸರಿ ಇರುವುದಿಲ್ಲ, ಅವರಿಂದ ಮನೆಯ ವಾತಾವರಣ ಬದಲಾಗಿದೆ ಎಂದು ಮನೆಯ ಸದಸ್ಯರು ಕಾರಣ ನೀಡಿದರು.

ಪ್ರಶಾಂತ್​ ಸಂಬರಗಿ ಕೂಡ ಈ ಬಾರಿ ನಾಮಿನೇಟ್​ ಆದರು. ಪ್ರಶಾಂತ್​ ಡಾಮಿನೇಟ್​ ಮಾಡುತ್ತಾರೆ. ಎಲ್ಲರನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಮಾತನಾಡುತ್ತಾರೆ ಎನ್ನುವ ಕಾರಣ ನೀಡಿ ಅವರನ್ನು ಮನೆಯ ಸದಸ್ಯರು ನಾಮಿನೇಟ್​ ಮಾಡಿದರು. ಎಲ್ಲರ ಜತೆ ಸರಿಯಾಗಿ ಬೆರೆಯುತ್ತಿಲ್ಲ, ಒಂಟಿಯಾಗಿ ಇರುತ್ತಾರೆ ಎನ್ನುವ ಕಾರಣ ನೀಡಿ ದಿವ್ಯಾ ಸುರೇಶ್​ ನಾಮಿನೇಟ್​ ಆದರು.

ಇವರ ಜತೆಗೆ ಗೀತಾ, ನಿಧಿ ಸುಬ್ಬಯ್ಯ, ವಿಶ್ವನಾಥ್​ ಮತ್ತು ಚಂದ್ರಕಲಾ ಅವರ ಮೇಲೂ ಈ ಬಾರಿಯ ನಾಮಿನೇಟ್​ ಕತ್ತಿ ತೂಗಾಡುತ್ತಿದೆ. ಇನ್ನು, ಮನೆಯ ಕ್ಯಾಪ್ಟನ್​ ಬ್ರೋ ಗೌಡಗೆ ಒಬ್ಬರನ್ನು ನೇರವಾಗಿ ನಾಮಿನೇಟ್​ ಮಾಡುವ ಅವಕಾಶ ನೀಡಲಾಯಿತು. ಅವರು ಶುಭಾ ಪೂಂಜಾ ಅವರನ್ನು ನಾಮಿನೇಟ್​ ಮಾಡಿದರು.

ಇದನ್ನೂ ಓದಿ: BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

Published On - 10:35 pm, Mon, 8 March 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ