AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ಬಿಗ್​ ಬಾಸ್​ ಕನ್ನಡ ಎರಡನೇ ವಾರದ ಎಲಿಮಿನೇಷನ್​ಗೆ 8 ಸದಸ್ಯರು ನಾಮಿನೇಟ್​

Bigg Boss Kannada 2nd Week Elimination: ಕಳೆದ ಬಾರಿ ನೇರವಾಗಿ ನಾಮಿನೇಟ್​ ಆಗಿದ್ದ ನಿರ್ಮಲಾ ಈ ಬಾರಿಯೂ ಅತಿ ಹೆಚ್ಚು ಮತ ಪಡೆದು ನಾಮಿನೇಟ್​ ಆಗಿದ್ದಾರೆ.

BBK8: ಬಿಗ್​ ಬಾಸ್​ ಕನ್ನಡ ಎರಡನೇ ವಾರದ ಎಲಿಮಿನೇಷನ್​ಗೆ 8 ಸದಸ್ಯರು ನಾಮಿನೇಟ್​
ಬಿಗ್​​ಬಾಸ್​​ ಕನ್ನಡ 8
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 8:28 AM

Share

ಕನ್ನಡ ಬಿಗ್​ ಬಾಸ್​ ಎಂಟನೇ ಸೀಸನ್​ನ ಮೊದಲೇ ವಾರದಲ್ಲಿ ಧನುಶ್ರೀ ನಾಮಿನೇಟ್​ ಆಗಿ ಮನೆಯಿಂದ ಹೊರಹೋಗಿದ್ದರು. ಈಗ ಎರಡನೇ ವಾರದ ಎಲಿಮಿನೇಷನ್​​ ಪ್ರಕ್ರಿಯೆ ಆರಂಭವಾಗಿದೆ. ಈ ವಾರ ಎಂಟು ಜನರು ಬಿಗ್​ ಬಾಸ್​ ಮನೆಯಲ್ಲಿ ನಾಮಿನೇಟ್​ ಆಗಿದ್ದಾರೆ. ಅವರ ಹೆಸರುಗಳ ಬಗ್ಗೆ ಇಲ್ಲಿದೆ ಮಾಹಿತಿ. ಕಳೆದ ಬಾರಿ ನೇರವಾಗಿ ನಾಮಿನೇಟ್​ ಆಗಿದ್ದ ನಿರ್ಮಲಾ ಈ ಬಾರಿಯೂ ಅತಿ ಹೆಚ್ಚು ಮತ ಪಡೆದು ನಾಮಿನೇಟ್​ ಆಗಿದ್ದಾರೆ. ಭಿನ್ನಾಭಿಪ್ರಾಯ, ಎಲ್ಲರ ಜತೆ ಹೊಂದುಕೊಳ್ಳುತ್ತಿಲ್ಲ, ಅವರು ತೆಗೆದುಕೊಳ್ಳುವ ನಿರ್ಧಾರ ಸರಿ ಇರುವುದಿಲ್ಲ, ಅವರಿಂದ ಮನೆಯ ವಾತಾವರಣ ಬದಲಾಗಿದೆ ಎಂದು ಮನೆಯ ಸದಸ್ಯರು ಕಾರಣ ನೀಡಿದರು.

ಪ್ರಶಾಂತ್​ ಸಂಬರಗಿ ಕೂಡ ಈ ಬಾರಿ ನಾಮಿನೇಟ್​ ಆದರು. ಪ್ರಶಾಂತ್​ ಡಾಮಿನೇಟ್​ ಮಾಡುತ್ತಾರೆ. ಎಲ್ಲರನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಮಾತನಾಡುತ್ತಾರೆ ಎನ್ನುವ ಕಾರಣ ನೀಡಿ ಅವರನ್ನು ಮನೆಯ ಸದಸ್ಯರು ನಾಮಿನೇಟ್​ ಮಾಡಿದರು. ಎಲ್ಲರ ಜತೆ ಸರಿಯಾಗಿ ಬೆರೆಯುತ್ತಿಲ್ಲ, ಒಂಟಿಯಾಗಿ ಇರುತ್ತಾರೆ ಎನ್ನುವ ಕಾರಣ ನೀಡಿ ದಿವ್ಯಾ ಸುರೇಶ್​ ನಾಮಿನೇಟ್​ ಆದರು.

ಇವರ ಜತೆಗೆ ಗೀತಾ, ನಿಧಿ ಸುಬ್ಬಯ್ಯ, ವಿಶ್ವನಾಥ್​ ಮತ್ತು ಚಂದ್ರಕಲಾ ಅವರ ಮೇಲೂ ಈ ಬಾರಿಯ ನಾಮಿನೇಟ್​ ಕತ್ತಿ ತೂಗಾಡುತ್ತಿದೆ. ಇನ್ನು, ಮನೆಯ ಕ್ಯಾಪ್ಟನ್​ ಬ್ರೋ ಗೌಡಗೆ ಒಬ್ಬರನ್ನು ನೇರವಾಗಿ ನಾಮಿನೇಟ್​ ಮಾಡುವ ಅವಕಾಶ ನೀಡಲಾಯಿತು. ಅವರು ಶುಭಾ ಪೂಂಜಾ ಅವರನ್ನು ನಾಮಿನೇಟ್​ ಮಾಡಿದರು.

ಇದನ್ನೂ ಓದಿ: BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

Published On - 10:35 pm, Mon, 8 March 21

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ