AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ವೈರಸ್​ ದಾಳಿಗೆ ಅಲ್ಲೋಲ-ಕಲ್ಲೋಲವಾದ ಬಿಗ್​ ಬಾಸ್​ ಮನೆ!

ಕೊರೊನಾ ವೈರಸ್​ಗೆ ಇಡೀ ದೇಶವೇ ತತ್ತರಿಸಿ ಹೋಗಿತ್ತು. ಇದರ ಮಧ್ಯೆಯೂ ಈಗ ಕನ್ನಡ ಬಿಗ್​ ಬಾಸ್​ ಆರಂಭವಾಗಿದೆ. ಇದೇ ಕಾನ್ಸೆಪ್ಟ್​ ಮೇಲೆ ಈ ಬಾರಿಯ ಬಿಗ್​ ಬಾಸ್​ ಟಾಸ್ಕ್​ಗಳು ನಡೆಯುತ್ತಿವೆ.

BBK8: ವೈರಸ್​ ದಾಳಿಗೆ ಅಲ್ಲೋಲ-ಕಲ್ಲೋಲವಾದ ಬಿಗ್​ ಬಾಸ್​ ಮನೆ!
ಬಿಗ್ ಬಾಸ್ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on: Mar 10, 2021 | 6:38 AM

Share

ಕನ್ನಡ ಬಿಗ್​ ಬಾಸ್​ ಮನೆಗೆ ದಾಳಿ ಇಟ್ಟ ವೈರಸ್​ಗೆ ಮನೆ ಸದಸ್ಯರು ಅಕ್ಷರಶಃ ಕಂಗಾಲಾಗಿದ್ದಾರೆ. ಕೆಲವರು ಅಸ್ವಸ್ಥಗೊಂಡರೆ ಇನ್ನೂ ಕೆಲವರು ನಮ್ಮ ಬಳಿ ಇದು ಸಾಧ್ಯವಾಗುತ್ತಿಲ್ಲ ಎಂದು ಬಿಗ್​ ಬಾಸ್​ ಬಳಿ ಮೊರೆ ಇಟ್ಟಿದ್ದಾರೆ. ಅಷ್ಟಕ್ಕೂ ಏನಿದು ವೈರಸ್​? ಏನಿದು ವಿಚಾರ? ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಕೊರೊನಾ ವೈರಸ್​ಗೆ ಇಡೀ ದೇಶವೇ ತತ್ತರಿಸಿ ಹೋಗಿತ್ತು. ಇದರ ಮಧ್ಯೆಯೂ ಈಗ ಕನ್ನಡ ಬಿಗ್​ ಬಾಸ್​ ಆರಂಭವಾಗಿದೆ. ಇದೇ ಕಾನ್ಸೆಪ್ಟ್​ ಮೇಲೆ ಈ ಬಾರಿಯ ಬಿಗ್​ ಬಾಸ್​ ಟಾಸ್ಕ್​ಗಳು ನಡೆಯುತ್ತಿವೆ.

ಬಿಗ್​ ಬಾಸ್ 9ನೇ ದಿನ ವೈರಸ್​ ಹಾಗೂ ಮನುಷ್ಯರು ಎನ್ನುವ ಆಧಾರದ ಮೇಲೆ ಟಾಸ್ಕ್​ ನೀಡಲಾಗಿತ್ತು. ಮನೆಯ ಒಂದಷ್ಟು ಸದಸ್ಯರು ವೈರಸ್​ ಆದರೆ, ಮತ್ತೊಂದಷ್ಟು ಸದಸ್ಯರು ಮನುಷ್ಯರು. ವೈರಸ್​ ತಂಡಕ್ಕೆ ಪ್ರಶಾಂತ್​ ಸಂಬರಗಿ ಕ್ಯಾಪ್ಟನ್​. ಮನುಷ್ಯರ ತಂಡಕ್ಕೆ ಲ್ಯಾಗ್​ ಮಂಜು ನಾಯಕರಾಗಿದ್ದರು.

ಈ ಟಾಸ್ಕ್​​ನ ನಿಯಮದಂತೆ ವೈರಸ್​ ದಾಳಿಗೆ ತುತ್ತಾಗದಂತೆ ಮನುಷ್ಯರು ಎಚ್ಚರವಿರಬೇಕು. ವೈರಸ್​ ತಂಡ ಮಾಡುವ ದಾಳಿಯಿಂದ ತಪ್ಪಿಸಿಕೊಳ್ಳಬೇಕು. ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಇದ್ದರೆ ಮನುಷ್ಯ ತಂಡದ ಒಬ್ಬ ಸದಸ್ಯ ಕ್ವಾರಂಟೈನ್​ ಆಗಬೇಕು.

ಕ್ವಾರಂಟೈನ್​ ಅವಧಿ ಅರ್ಧ ಗಂಟೆ. ಈ ವೇಳೆ ಮನುಷ್ಯ ತಂಡದವರು ಹಗ್ಗ ಹಿಡಿದು ನಿಲ್ಲಬೇಕು. ಆಗ ವೈರಸ್​ ತಂಡದವರು ತೊಂದರೆ ನೀಡಬೇಕು. ಆದರೆ, ಬಾಡಿ ಟಚ್​ ಮಾಡುವಂತಿಲ್ಲ. ಒಂದೊಮ್ಮೆ, ಕ್ವಾರಂಟೈನ್​ನಲ್ಲಿರುವವರು ಹಗ್ಗವನ್ನು ಕೈಬಿಟ್ಟರೆ ಅವರು ಸೋತಂತೆ. ಅವರು ಈ ಆಟದಿಂದ ಹೊರಗಿರಬೇಕು. ಕೊನೆಯಲ್ಲಿ ಯಾವ ತಂಡದಲ್ಲಿ ಹೆಚ್ಚು ಜನರು ಉಳಿಯುತ್ತಾರೋ ಅವರೇ ಗೆದ್ದಂತೆ.

ಈ ಆಟ ನಡೆಯುವಾಗ ವೈರಸ್ ತಂಡದವರು ಬೇಕಾ ಬಿಟ್ಟಿ ನಡೆದುಕೊಳ್ಳುತ್ತಿದ್ದಾರೆ, ಕತ್ತು ಹಿಸುಕುತ್ತಿದ್ದಾರೆ ಎನ್ನುವ ಆರೋಪವನ್ನು ಮಾಡಿದರು ಮನುಷ್ಯ ತಂಡದವರು. ಪ್ರಶಾಂತ್​ ಸಂಬರಗಿ ಹಾಗೂ ಬ್ರೋ ಗೌಡ ನಡುವೆ ನಡೆದ ಜಗಳ ತಾರಕಕ್ಕೇರಿತ್ತು. ಒಟ್ಟಿನಲ್ಲಿ ಬಿಗ್​ ಬಾಸ್​ ಮನೆ ವೈರಸ್​ ದಾಳಿಗೆ ಅಲ್ಲೋಲ ಕಲ್ಲೋಲವಾಗಿದೆ. ಒಬ್ಬರಬ್ಬೊರ ನಡುವೆ ದ್ವೇಷ ಬೆಳೆಯುವಂತಾಗಿದೆ. ಸದ್ಯ ಇದು ಎಲ್ಲಿ ಹೋಗಿ ನಿಲ್ಲುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: BBK8: ಮಂಜ ಯಾವತ್ತಿದ್ರೂ ನನ್ನವನು : ದಿವ್ಯಾ ಉರುಡುಗಗೆ ಎಚ್ಚರಿಕೆ ನಿಡದ ದಿವ್ಯಾ ಸುರೇಶ್​!

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ