AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ವೈರಸ್​ ದಾಳಿಗೆ ಅಲ್ಲೋಲ-ಕಲ್ಲೋಲವಾದ ಬಿಗ್​ ಬಾಸ್​ ಮನೆ!

ಕೊರೊನಾ ವೈರಸ್​ಗೆ ಇಡೀ ದೇಶವೇ ತತ್ತರಿಸಿ ಹೋಗಿತ್ತು. ಇದರ ಮಧ್ಯೆಯೂ ಈಗ ಕನ್ನಡ ಬಿಗ್​ ಬಾಸ್​ ಆರಂಭವಾಗಿದೆ. ಇದೇ ಕಾನ್ಸೆಪ್ಟ್​ ಮೇಲೆ ಈ ಬಾರಿಯ ಬಿಗ್​ ಬಾಸ್​ ಟಾಸ್ಕ್​ಗಳು ನಡೆಯುತ್ತಿವೆ.

BBK8: ವೈರಸ್​ ದಾಳಿಗೆ ಅಲ್ಲೋಲ-ಕಲ್ಲೋಲವಾದ ಬಿಗ್​ ಬಾಸ್​ ಮನೆ!
ಬಿಗ್ ಬಾಸ್ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on: Mar 10, 2021 | 6:38 AM

Share

ಕನ್ನಡ ಬಿಗ್​ ಬಾಸ್​ ಮನೆಗೆ ದಾಳಿ ಇಟ್ಟ ವೈರಸ್​ಗೆ ಮನೆ ಸದಸ್ಯರು ಅಕ್ಷರಶಃ ಕಂಗಾಲಾಗಿದ್ದಾರೆ. ಕೆಲವರು ಅಸ್ವಸ್ಥಗೊಂಡರೆ ಇನ್ನೂ ಕೆಲವರು ನಮ್ಮ ಬಳಿ ಇದು ಸಾಧ್ಯವಾಗುತ್ತಿಲ್ಲ ಎಂದು ಬಿಗ್​ ಬಾಸ್​ ಬಳಿ ಮೊರೆ ಇಟ್ಟಿದ್ದಾರೆ. ಅಷ್ಟಕ್ಕೂ ಏನಿದು ವೈರಸ್​? ಏನಿದು ವಿಚಾರ? ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಕೊರೊನಾ ವೈರಸ್​ಗೆ ಇಡೀ ದೇಶವೇ ತತ್ತರಿಸಿ ಹೋಗಿತ್ತು. ಇದರ ಮಧ್ಯೆಯೂ ಈಗ ಕನ್ನಡ ಬಿಗ್​ ಬಾಸ್​ ಆರಂಭವಾಗಿದೆ. ಇದೇ ಕಾನ್ಸೆಪ್ಟ್​ ಮೇಲೆ ಈ ಬಾರಿಯ ಬಿಗ್​ ಬಾಸ್​ ಟಾಸ್ಕ್​ಗಳು ನಡೆಯುತ್ತಿವೆ.

ಬಿಗ್​ ಬಾಸ್ 9ನೇ ದಿನ ವೈರಸ್​ ಹಾಗೂ ಮನುಷ್ಯರು ಎನ್ನುವ ಆಧಾರದ ಮೇಲೆ ಟಾಸ್ಕ್​ ನೀಡಲಾಗಿತ್ತು. ಮನೆಯ ಒಂದಷ್ಟು ಸದಸ್ಯರು ವೈರಸ್​ ಆದರೆ, ಮತ್ತೊಂದಷ್ಟು ಸದಸ್ಯರು ಮನುಷ್ಯರು. ವೈರಸ್​ ತಂಡಕ್ಕೆ ಪ್ರಶಾಂತ್​ ಸಂಬರಗಿ ಕ್ಯಾಪ್ಟನ್​. ಮನುಷ್ಯರ ತಂಡಕ್ಕೆ ಲ್ಯಾಗ್​ ಮಂಜು ನಾಯಕರಾಗಿದ್ದರು.

ಈ ಟಾಸ್ಕ್​​ನ ನಿಯಮದಂತೆ ವೈರಸ್​ ದಾಳಿಗೆ ತುತ್ತಾಗದಂತೆ ಮನುಷ್ಯರು ಎಚ್ಚರವಿರಬೇಕು. ವೈರಸ್​ ತಂಡ ಮಾಡುವ ದಾಳಿಯಿಂದ ತಪ್ಪಿಸಿಕೊಳ್ಳಬೇಕು. ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಇದ್ದರೆ ಮನುಷ್ಯ ತಂಡದ ಒಬ್ಬ ಸದಸ್ಯ ಕ್ವಾರಂಟೈನ್​ ಆಗಬೇಕು.

ಕ್ವಾರಂಟೈನ್​ ಅವಧಿ ಅರ್ಧ ಗಂಟೆ. ಈ ವೇಳೆ ಮನುಷ್ಯ ತಂಡದವರು ಹಗ್ಗ ಹಿಡಿದು ನಿಲ್ಲಬೇಕು. ಆಗ ವೈರಸ್​ ತಂಡದವರು ತೊಂದರೆ ನೀಡಬೇಕು. ಆದರೆ, ಬಾಡಿ ಟಚ್​ ಮಾಡುವಂತಿಲ್ಲ. ಒಂದೊಮ್ಮೆ, ಕ್ವಾರಂಟೈನ್​ನಲ್ಲಿರುವವರು ಹಗ್ಗವನ್ನು ಕೈಬಿಟ್ಟರೆ ಅವರು ಸೋತಂತೆ. ಅವರು ಈ ಆಟದಿಂದ ಹೊರಗಿರಬೇಕು. ಕೊನೆಯಲ್ಲಿ ಯಾವ ತಂಡದಲ್ಲಿ ಹೆಚ್ಚು ಜನರು ಉಳಿಯುತ್ತಾರೋ ಅವರೇ ಗೆದ್ದಂತೆ.

ಈ ಆಟ ನಡೆಯುವಾಗ ವೈರಸ್ ತಂಡದವರು ಬೇಕಾ ಬಿಟ್ಟಿ ನಡೆದುಕೊಳ್ಳುತ್ತಿದ್ದಾರೆ, ಕತ್ತು ಹಿಸುಕುತ್ತಿದ್ದಾರೆ ಎನ್ನುವ ಆರೋಪವನ್ನು ಮಾಡಿದರು ಮನುಷ್ಯ ತಂಡದವರು. ಪ್ರಶಾಂತ್​ ಸಂಬರಗಿ ಹಾಗೂ ಬ್ರೋ ಗೌಡ ನಡುವೆ ನಡೆದ ಜಗಳ ತಾರಕಕ್ಕೇರಿತ್ತು. ಒಟ್ಟಿನಲ್ಲಿ ಬಿಗ್​ ಬಾಸ್​ ಮನೆ ವೈರಸ್​ ದಾಳಿಗೆ ಅಲ್ಲೋಲ ಕಲ್ಲೋಲವಾಗಿದೆ. ಒಬ್ಬರಬ್ಬೊರ ನಡುವೆ ದ್ವೇಷ ಬೆಳೆಯುವಂತಾಗಿದೆ. ಸದ್ಯ ಇದು ಎಲ್ಲಿ ಹೋಗಿ ನಿಲ್ಲುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: BBK8: ಮಂಜ ಯಾವತ್ತಿದ್ರೂ ನನ್ನವನು : ದಿವ್ಯಾ ಉರುಡುಗಗೆ ಎಚ್ಚರಿಕೆ ನಿಡದ ದಿವ್ಯಾ ಸುರೇಶ್​!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್