BBK8: ವೈರಸ್​ ದಾಳಿಗೆ ಅಲ್ಲೋಲ-ಕಲ್ಲೋಲವಾದ ಬಿಗ್​ ಬಾಸ್​ ಮನೆ!

ಕೊರೊನಾ ವೈರಸ್​ಗೆ ಇಡೀ ದೇಶವೇ ತತ್ತರಿಸಿ ಹೋಗಿತ್ತು. ಇದರ ಮಧ್ಯೆಯೂ ಈಗ ಕನ್ನಡ ಬಿಗ್​ ಬಾಸ್​ ಆರಂಭವಾಗಿದೆ. ಇದೇ ಕಾನ್ಸೆಪ್ಟ್​ ಮೇಲೆ ಈ ಬಾರಿಯ ಬಿಗ್​ ಬಾಸ್​ ಟಾಸ್ಕ್​ಗಳು ನಡೆಯುತ್ತಿವೆ.

BBK8: ವೈರಸ್​ ದಾಳಿಗೆ ಅಲ್ಲೋಲ-ಕಲ್ಲೋಲವಾದ ಬಿಗ್​ ಬಾಸ್​ ಮನೆ!
ಬಿಗ್ ಬಾಸ್ ಕನ್ನಡ
Edited By: ಆಯೇಷಾ ಬಾನು

Updated on: Mar 10, 2021 | 6:38 AM

ಕನ್ನಡ ಬಿಗ್​ ಬಾಸ್​ ಮನೆಗೆ ದಾಳಿ ಇಟ್ಟ ವೈರಸ್​ಗೆ ಮನೆ ಸದಸ್ಯರು ಅಕ್ಷರಶಃ ಕಂಗಾಲಾಗಿದ್ದಾರೆ. ಕೆಲವರು ಅಸ್ವಸ್ಥಗೊಂಡರೆ ಇನ್ನೂ ಕೆಲವರು ನಮ್ಮ ಬಳಿ ಇದು ಸಾಧ್ಯವಾಗುತ್ತಿಲ್ಲ ಎಂದು ಬಿಗ್​ ಬಾಸ್​ ಬಳಿ ಮೊರೆ ಇಟ್ಟಿದ್ದಾರೆ. ಅಷ್ಟಕ್ಕೂ ಏನಿದು ವೈರಸ್​? ಏನಿದು ವಿಚಾರ? ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಕೊರೊನಾ ವೈರಸ್​ಗೆ ಇಡೀ ದೇಶವೇ ತತ್ತರಿಸಿ ಹೋಗಿತ್ತು. ಇದರ ಮಧ್ಯೆಯೂ ಈಗ ಕನ್ನಡ ಬಿಗ್​ ಬಾಸ್​ ಆರಂಭವಾಗಿದೆ. ಇದೇ ಕಾನ್ಸೆಪ್ಟ್​ ಮೇಲೆ ಈ ಬಾರಿಯ ಬಿಗ್​ ಬಾಸ್​ ಟಾಸ್ಕ್​ಗಳು ನಡೆಯುತ್ತಿವೆ.

ಬಿಗ್​ ಬಾಸ್ 9ನೇ ದಿನ ವೈರಸ್​ ಹಾಗೂ ಮನುಷ್ಯರು ಎನ್ನುವ ಆಧಾರದ ಮೇಲೆ ಟಾಸ್ಕ್​ ನೀಡಲಾಗಿತ್ತು. ಮನೆಯ ಒಂದಷ್ಟು ಸದಸ್ಯರು ವೈರಸ್​ ಆದರೆ, ಮತ್ತೊಂದಷ್ಟು ಸದಸ್ಯರು ಮನುಷ್ಯರು. ವೈರಸ್​ ತಂಡಕ್ಕೆ ಪ್ರಶಾಂತ್​ ಸಂಬರಗಿ ಕ್ಯಾಪ್ಟನ್​. ಮನುಷ್ಯರ ತಂಡಕ್ಕೆ ಲ್ಯಾಗ್​ ಮಂಜು ನಾಯಕರಾಗಿದ್ದರು.

ಈ ಟಾಸ್ಕ್​​ನ ನಿಯಮದಂತೆ ವೈರಸ್​ ದಾಳಿಗೆ ತುತ್ತಾಗದಂತೆ ಮನುಷ್ಯರು ಎಚ್ಚರವಿರಬೇಕು. ವೈರಸ್​ ತಂಡ ಮಾಡುವ ದಾಳಿಯಿಂದ ತಪ್ಪಿಸಿಕೊಳ್ಳಬೇಕು. ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಇದ್ದರೆ ಮನುಷ್ಯ ತಂಡದ ಒಬ್ಬ ಸದಸ್ಯ ಕ್ವಾರಂಟೈನ್​ ಆಗಬೇಕು.

ಕ್ವಾರಂಟೈನ್​ ಅವಧಿ ಅರ್ಧ ಗಂಟೆ. ಈ ವೇಳೆ ಮನುಷ್ಯ ತಂಡದವರು ಹಗ್ಗ ಹಿಡಿದು ನಿಲ್ಲಬೇಕು. ಆಗ ವೈರಸ್​ ತಂಡದವರು ತೊಂದರೆ ನೀಡಬೇಕು. ಆದರೆ, ಬಾಡಿ ಟಚ್​ ಮಾಡುವಂತಿಲ್ಲ. ಒಂದೊಮ್ಮೆ, ಕ್ವಾರಂಟೈನ್​ನಲ್ಲಿರುವವರು ಹಗ್ಗವನ್ನು ಕೈಬಿಟ್ಟರೆ ಅವರು ಸೋತಂತೆ. ಅವರು ಈ ಆಟದಿಂದ ಹೊರಗಿರಬೇಕು. ಕೊನೆಯಲ್ಲಿ ಯಾವ ತಂಡದಲ್ಲಿ ಹೆಚ್ಚು ಜನರು ಉಳಿಯುತ್ತಾರೋ ಅವರೇ ಗೆದ್ದಂತೆ.

ಈ ಆಟ ನಡೆಯುವಾಗ ವೈರಸ್ ತಂಡದವರು ಬೇಕಾ ಬಿಟ್ಟಿ ನಡೆದುಕೊಳ್ಳುತ್ತಿದ್ದಾರೆ, ಕತ್ತು ಹಿಸುಕುತ್ತಿದ್ದಾರೆ ಎನ್ನುವ ಆರೋಪವನ್ನು ಮಾಡಿದರು ಮನುಷ್ಯ ತಂಡದವರು. ಪ್ರಶಾಂತ್​ ಸಂಬರಗಿ ಹಾಗೂ ಬ್ರೋ ಗೌಡ ನಡುವೆ ನಡೆದ ಜಗಳ ತಾರಕಕ್ಕೇರಿತ್ತು. ಒಟ್ಟಿನಲ್ಲಿ ಬಿಗ್​ ಬಾಸ್​ ಮನೆ ವೈರಸ್​ ದಾಳಿಗೆ ಅಲ್ಲೋಲ ಕಲ್ಲೋಲವಾಗಿದೆ. ಒಬ್ಬರಬ್ಬೊರ ನಡುವೆ ದ್ವೇಷ ಬೆಳೆಯುವಂತಾಗಿದೆ. ಸದ್ಯ ಇದು ಎಲ್ಲಿ ಹೋಗಿ ನಿಲ್ಲುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: BBK8: ಮಂಜ ಯಾವತ್ತಿದ್ರೂ ನನ್ನವನು : ದಿವ್ಯಾ ಉರುಡುಗಗೆ ಎಚ್ಚರಿಕೆ ನಿಡದ ದಿವ್ಯಾ ಸುರೇಶ್​!

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us