Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡ ಗ್ಯಾಪ್​ ನಂತರ ಮತ್ತೆ ಕಿರುತೆರೆಗೆ ಮರಳಲು ಸಜ್ಜಾದ ಅಮೃತ ವರ್ಷಿಣಿ ರಜಿನಿ!

ಅಮೃತ ವರ್ಷಿಣಿ ಧಾರಾವಾಹಿ ಪೂರ್ಣಗೊಂಡ ನಂತರ ಕಿರುತೆರೆಯಿಂದ ರಜಿನಿ ದೂರವೇ ಉಳಿದಿದ್ದರು. ಈಗ, ಅವರು ಮತ್ತೆ ಕಿರುತೆರೆಗೆ ಬರೋಕೆ ಸಜ್ಜಾಗಿದ್ದಾರೆ.

ದೊಡ್ಡ ಗ್ಯಾಪ್​ ನಂತರ ಮತ್ತೆ ಕಿರುತೆರೆಗೆ ಮರಳಲು ಸಜ್ಜಾದ ಅಮೃತ ವರ್ಷಿಣಿ ರಜಿನಿ!
ರಜಿನಿ
Follow us
ರಾಜೇಶ್ ದುಗ್ಗುಮನೆ
|

Updated on: Feb 27, 2021 | 5:21 PM

ಕೆಲ ವರ್ಷಗಳ ಹಿಂದೆ ಪ್ರಸಾರವಾಗಿದ್ದ ಅಮೃತ ವರ್ಷಿಣಿ ಧಾರಾವಾಹಿ ಕನ್ನಡ ಕಿರುತೆರೆಯಲ್ಲಿ ದೂಳಿಬ್ಬಿಸಿತ್ತು. ಕರ್ನಾಟಕದ ಪ್ರತಿ ಮನೆಯಲ್ಲೂ ಈ ಧಾರಾವಾಹಿ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬಂದಿದ್ದವು. ಧಾರಾವಾಹಿಯಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು ರಜಿನಿ. ಈ ಧಾರಾವಾಹಿ ಹಿಟ್​ ಆಗಲು ಅವರು ಕೂಡ ಕಾರಣರಾಗಿದ್ದರು. ಈ ಧಾರಾವಾಹಿ ಪೂರ್ಣಗೊಂಡ ನಂತರ ಕಿರುತೆರೆಯಿಂದ ಅವರು ದೂರವೇ ಉಳಿದಿದ್ದರು. ಈಗ, ಅವರು ಮತ್ತೆ ಕಿರುತೆರೆಗೆ ಬರೋಕೆ ಸಜ್ಜಾಗಿದ್ದಾರೆ. ರಜಿನಿ ಈಗ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ! ಅಷ್ಟಕ್ಕೂ ಯಾವುದು ಆ ಧಾರಾವಾಹಿ ಎನ್ನುವ ಪ್ರಶ್ನೆ ನಿಮ್ಮದೇ ಅದಕ್ಕೆ ಇಲ್ಲಿದೆ ಉತ್ತರ. ಅಂದಹಾಗೆ, ರಜಿನಿ ಈ ಬಾರಿ ನಟಿಸುತ್ತಿರುವುದು ಧಾರಾವಾಹಿಯಲ್ಲಲ್ಲ. ಮೂಲಗಳ ಪ್ರಕಾರ ಕನ್ನಡ ಬಿಗ್​ ಬಾಸ್​ ಸೀಸನ್​​ 8ರಲ್ಲಿ ರಜಿನಿ ಸ್ಪರ್ಧಿಯಾಗಿ ಮನೆಯೊಳಗೆ ತೆರಳುತ್ತಿದ್ದಾರಂತೆ.

ಭಾನುವಾರ ಸಂಜೆ 6 ಗಂಟೆಗೆ ಬಿಗ್​ ಬಾಸ್​ ಪ್ರಾರಂಭ ಆಗುತ್ತಿದೆ. ನಿತ್ಯ 9:30ಕ್ಕೆ ಬಿಗ್​ ಬಾಸ್​ ಶೋ ಪ್ರಸಾರವಾಗಲಿದೆ. ಈ ಬಾರಿಯದ್ದು ಸೆಲೆಬ್ರಿಟಿ ಸೀಸನ್​. ಹೀಗಾಗಿ, ಜನಸಾಮಾನ್ಯರು ಮನೆ ಒಳಗೆ ಹೋಗುತ್ತಿಲ್ಲ. ಹೀಗಾಗಿ ಅಮೃತ ಅವರನ್ನು ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆ ಎನ್ನುವ ಮಾತಿದೆ.

ರಜಿನಿ ಅವರಿಗೆ ಬಿಗ್ ಬಾಸ್​ ಮನೆ ಒಳಗೆ ಬರಲು ಕಲರ್ಸ್​ ಕನ್ನಡದವರು ಆಫರ್​ ನೀಡಿದ್ದರು. ಇದನ್ನು ರಜಿನಿ ಒಪ್ಪಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ರಜಿನಿ ಹೋಟೆಲ್​ ಒಂದರಲ್ಲಿ ಕ್ವಾರಂಟೈನ್​ ಆಗಿದ್ದು, ನಾಳೆ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: Bigg Boss Kannada 8: ಕನ್ನಡ ಬಿಗ್​ ಬಾಸ್​​ 8ಗಾಗಿ ಕೆಲಸ ಮಾಡುವ ತಂತ್ರಜ್ಞರ ಸಂಖ್ಯೆ ಕೇಳಿದ್ರೆ ಅಚ್ಚರಿ ಪಡ್ತೀರಾ!

Bigg Boss Kannada 8: ಬಿಗ್​ ಬಾಸ್​ ಸೀಸನ್​ 8 ಸೆಲೆಬ್ರಿಟಿಗಳಿಗೆ ಮೀಸಲು; ಪ್ರತಿದಿನ ರಾತ್ರಿ 9:30ಕ್ಕೆ ಶೋ

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ