AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಕಲರ್ಸ್​ ಕನ್ನಡ ವಾಹಿನಿ ಇಂದು ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರೋಮೋ ಒಂದನ್ನು ಪೋಸ್ಟ್​ ಮಾಡಿದೆ. ಈ ಪ್ರೋಮೋದಲ್ಲಿ ಶಮಂತ್​ ಅವರ ಚಿನ್ನದಂಥಾ ಕೂದಲನ್ನು ಮಂಜು ಪಾವಗಡ ಕತ್ತರಿಸಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?
ಶಮಂತ್​ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:Mar 23, 2021 | 12:34 PM

Share

ಶಮಂತ್​ ಬ್ರೋ ಗೌಡ ಬಿಗ್​ ಬಾಸ್​ ಸೀಸನ್​ 8ರ ವೇದಿಕೆ ಏರಿದಾಗ ಅವರ ಕೂದಲನ್ನು ನೋಡಿ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದರು. ಇದು ವಿಗ್​ ಅಥವಾ ನಿಜವಾದ ಕೂದಲಾ ಎಂದು ಪ್ರಶ್ನೆ ಮಾಡಿದ್ದರು. ಬಿಗ್​ ಬಾಸ್​ ಮನೆ ಸೇರಿದ ನಂತರವೂ ಶಮಂತ್​ ತಮ್ಮ ಕೂದಲು ಹಾಗೂ ಗಡ್ಡದ ಮೂಲಕವೇ ಎಲ್ಲರ ಗಮನ ಸೆಳೆದಿದ್ದರು. ಆದರೆ, ಈಗ ಅವರ ಕೂದಲಿಗೆ ಕತ್ತರಿ ಬಿದ್ದಿದೆ! ಇದು ಶಮಂತ್​ಗೆ ನೀಡಿದ ಹೊಸ ಪನಿಶ್​ಮೆಂಟಾ ಎಂದು ಪ್ರೇಕ್ಷಕರು ಕೇಳಿಕೊಳ್ಳುತ್ತಿದ್ದಾರೆ. ಕಲರ್ಸ್​ ಕನ್ನಡ ವಾಹಿನಿ ಇಂದು ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರೋಮೋ ಒಂದನ್ನು ಪೋಸ್ಟ್​ ಮಾಡಿದೆ. ಈ ಪ್ರೋಮೋದಲ್ಲಿ ಶಮಂತ್​ ಅವರ ಚಿನ್ನದಂಥಾ ಕೂದಲನ್ನು ಮಂಜು ಪಾವಗಡ ಕತ್ತರಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ನೀನು ಪೂರ್ತಿ ಕೂದಲನ್ನೇ ತೆಗೆದು ಹಾಕುತ್ತೀಯಾ ಎಂದು ಶುಭಾ ಪೂಂಜಾ ಎಚ್ಚರಿಕೆ ನೀಡುವ ಕೆಲಸ ಮಾಡಿದ್ದಾರೆ. ಇದಕ್ಕೆ ಉತ್ತರಿಸಿರುವ ಮಂಜು, ಕೂದಲು ಕಟ್​ ಮಾಡಿಸಿಕೊಳ್ಳುವವನೇ ಸುಮ್ಮನಿದ್ದಾನೆ, ನಿಮ್ಮದೇನು? ನಿಜ ಹೇಳಬೇಕೆಂದರೆ ನನಗೂ ಇದು ಹೊಸತು ಎಂದು ಹೇಳಿದ್ದಾರೆ. ಕೊನೆಯಲ್ಲಿ ಮಾತನಾಡಿರುವ ಅರವಿಂದ್​, ಮಂಜು ಒಂದೇ ಗಂಟೆಗೆ ಮಶ್ರೂಂ ಆಗಿ ಬಿಟ್ಟರು ಎಂದು ನಕ್ಕಿದ್ದಾರೆ……

ಇನ್ನು, ಶಮಂತ್​ಗೆ ಬಿಗ್​ ಬಾಸ್​ ಶಿಕ್ಷೆ ನೀಡಿದೆಯಾ ಎನ್ನುವ ಅನುಮಾನ ಕೂಡ ಮೂಡಿದೆ. ಕಳೆದ ವಾರ ಶಮಂತ್​ ನೇರವಾಗಿ ನಾಮಿನೇಟ್​ ಆಗಬೇಕು ಇಲ್ಲವೇ ಮನೆ ಮಂದಿಯೆಲ್ಲ ಬೆಡ್​ರೂಂ ಬಿಟ್ಟುಕೊಡಬೇಕು ಎಂದು ಹೇಳಿದ್ದರು. ಆದರೆ, ಶಮಂತ್​ ಅವರನ್ನು ಸೇವ್​ ಮಾಡಲು ಹೋಗಿ ಮನೆ ಮಂದಿಯೆಲ್ಲ ಕಷ್ಟ ಅನುಭವಿಸಿದ್ದರು. ಈಗ ಈವಾರವೂ ಅದೇ ರೀತಿ ಶಮಂತ್​ಗೆ ಏನಾದರೂ ಪನಿಶ್​ಮೆಂಟ್​ ನೀಡಲಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ…..

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಗೀತಾಗೆ ಲವ್​ ಆಗಿದ್ದು ಯಾರ ಮೇಲೆ? ಮನೆ ಬಿಟ್ಟು ಹೋಗುವಾಗ ಕಿಚ್ಚನ ಎದುರು ರಟ್ಟಾಯ್ತು ಗುಟ್ಟು

Published On - 7:03 pm, Mon, 22 March 21

ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!