AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ಎಲ್ಲೆಲ್ಲೋ ಮುಟ್ತಿದ್ದಾರೆ.. ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಟ್ಟ ನಿಧಿ ಸುಬ್ಬಯ್ಯ

ವೈರಸ್​ ತಂಡದವರು ಮನುಷ್ಯರ ತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ, ಮನುಷ್ಯರ ತಂಡದವರು ವೈರಸ್​ ಮೇಲೆ ತಪ್ಪನ್ನು ಹೊರಿಸುತ್ತಿದ್ದಾರೆ.

ಅವರು ಎಲ್ಲೆಲ್ಲೋ ಮುಟ್ತಿದ್ದಾರೆ.. ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಟ್ಟ ನಿಧಿ ಸುಬ್ಬಯ್ಯ
ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: Mar 11, 2021 | 7:45 AM

Share

ಬಿಗ್​ ಬಾಸ್​ ಮನೆಯಲ್ಲಿ ನೀಡಿದ ವೈರಸ್ ಟಾಸ್ಕ್​ ಎಲ್ಲೆಲ್ಲೋ ಬೇರೆ ಬೇರೆ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಸ್ಪರ್ಧಿಗಳ ನಡುವೆ ದೊಡ್ಡ ಮಟ್ಟದ ದ್ವೇಷದ ಬೆಂಕಿ ಕೂಡ ಹತ್ತಿಕೊಳ್ಳುತ್ತಿದೆ. ಹೀಗಿರುವಾಗಲೇ ಒಬ್ಬರಿಗೊಬ್ಬರು ಗಂಭೀರ ಆರೋಪವನ್ನು ಮಾಡಿಕೊಳ್ಳುತ್ತಿದ್ದಾರೆ. ವೈರಸ್​ ತಂಡಕ್ಕೆ ಪ್ರಶಾಂತ್​ ಸಂಬರಗಿ ಕ್ಯಾಪ್ಟನ್​. ಮನುಷ್ಯರ ತಂಡಕ್ಕೆ ಲ್ಯಾಗ್​ ಮಂಜು ನಾಯಕರಾಗಿದ್ದಾರೆ. ವೈರಸ್​ ತಂಡದವರು ಮನುಷ್ಯರ ತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ, ಮನುಷ್ಯರ ತಂಡದವರು ವೈರಸ್​ ಮೇಲೆ ತಪ್ಪನ್ನು ಹೊರಿಸುತ್ತಿದ್ದಾರೆ. ಈ ನಡುವೆ ಮಂಜು ಮತ್ತು ಶಮಂತ್​ ವಿರುದ್ಧ ನಿಧಿ ಸುಬ್ಬಯ್ಯ  ಗಂಭೀರ ಆರೋಪ ಒಂದನ್ನು ಮಾಡಿದ್ದಾರೆ.

ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ ಪರಚುತ್ತಿದ್ದಾರೆ. ಬೇಕೆಂತಲೇ ಅವರು ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ. ನಮ್ಮ ತಂಡದವರು ಯಾರೊಬ್ಬರೂ ಹುಡುಗಿಯನ್ನು ಮುಟ್ಟಿಲ್ಲ. ಆದರೆ, ಅವರು ತಂಡದವರು ಹಾಗಲ್ಲ. ಪ್ಲ್ಯಾನ್​ ಮಾಡಿ ಅವರು ಬಂದು ನಮ್ಮನ್ನು ಹಿಡಿದುಕೊಳ್ಳುತ್ತಿದ್ದಾರೆ. ತುಂಬಾನೇ ರಫ್​ ಆಗಿ ನಡೆಸಿಕೊಳ್ಳುತ್ತಿದ್ದಾರೆ. ಮಂಜು ಬಂದು ನನ್ನನ್ನು ಎಲ್ಲೆಲ್ಲೋ ಮುಟ್ಟಿ ಎಸೆದಿದ್ದಾರೆ. ನಮಗೆ ಹೇಸಿಗೆ ಎನಿಸುತ್ತಿದೆ. ಈ ಆಟ ಸಾಕು ಇಲ್ಲಿಗೆ ನಿಲ್ಲಿಸಿ ಎಂದು ಕಣ್ಣೀರು ಹಾಕಿದ್ದಾರೆ.

ಆದರೆ, ಮಂಜು ಮಾತ್ರ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಪ್ರಶಾಂತ್​ ಜತೆ ಮಾತನಾಡುವಾಗ, ನಾನು ಯಾವುದನ್ನೂ ಉದ್ದೇಶಪೂರ್ವಕವಾಗಿ ಮಾಡಿಲ್ಲ. ನಮಗೆ ಖುಷಿಖುಷಿಯಾಗಿ ಆಡಬೇಕು ಎನ್ನುವ ಆಸೆ ಇತ್ತು. ಆದರೆ, ನೀವೇ ವೈಲೆಂಟ್​ ಆಗಿ ಆಡುವ ಮೂಲಕ ಆಟದ ದಿಕ್ಕನ್ನೇ ಬದಲಿಸಿದ್ದೀರಿ ಎಂದಿದ್ದಾರೆ.

ಇದನ್ನೂ ಓದಿ: BBK8: ವೈರಸ್​ನಿಂದ ಬಿಗ್​ ಮನೆಯಲ್ಲಿ ಹತ್ತಿದ ದ್ವೇಷದ ಬೆಂಕಿ; ಆರಿಸುವವರು ಯಾರು?

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ