AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ಎಲ್ಲೆಲ್ಲೋ ಮುಟ್ತಿದ್ದಾರೆ.. ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಟ್ಟ ನಿಧಿ ಸುಬ್ಬಯ್ಯ

ವೈರಸ್​ ತಂಡದವರು ಮನುಷ್ಯರ ತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ, ಮನುಷ್ಯರ ತಂಡದವರು ವೈರಸ್​ ಮೇಲೆ ತಪ್ಪನ್ನು ಹೊರಿಸುತ್ತಿದ್ದಾರೆ.

ಅವರು ಎಲ್ಲೆಲ್ಲೋ ಮುಟ್ತಿದ್ದಾರೆ.. ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಟ್ಟ ನಿಧಿ ಸುಬ್ಬಯ್ಯ
ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Mar 11, 2021 | 7:45 AM

Share

ಬಿಗ್​ ಬಾಸ್​ ಮನೆಯಲ್ಲಿ ನೀಡಿದ ವೈರಸ್ ಟಾಸ್ಕ್​ ಎಲ್ಲೆಲ್ಲೋ ಬೇರೆ ಬೇರೆ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಸ್ಪರ್ಧಿಗಳ ನಡುವೆ ದೊಡ್ಡ ಮಟ್ಟದ ದ್ವೇಷದ ಬೆಂಕಿ ಕೂಡ ಹತ್ತಿಕೊಳ್ಳುತ್ತಿದೆ. ಹೀಗಿರುವಾಗಲೇ ಒಬ್ಬರಿಗೊಬ್ಬರು ಗಂಭೀರ ಆರೋಪವನ್ನು ಮಾಡಿಕೊಳ್ಳುತ್ತಿದ್ದಾರೆ. ವೈರಸ್​ ತಂಡಕ್ಕೆ ಪ್ರಶಾಂತ್​ ಸಂಬರಗಿ ಕ್ಯಾಪ್ಟನ್​. ಮನುಷ್ಯರ ತಂಡಕ್ಕೆ ಲ್ಯಾಗ್​ ಮಂಜು ನಾಯಕರಾಗಿದ್ದಾರೆ. ವೈರಸ್​ ತಂಡದವರು ಮನುಷ್ಯರ ತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ, ಮನುಷ್ಯರ ತಂಡದವರು ವೈರಸ್​ ಮೇಲೆ ತಪ್ಪನ್ನು ಹೊರಿಸುತ್ತಿದ್ದಾರೆ. ಈ ನಡುವೆ ಮಂಜು ಮತ್ತು ಶಮಂತ್​ ವಿರುದ್ಧ ನಿಧಿ ಸುಬ್ಬಯ್ಯ  ಗಂಭೀರ ಆರೋಪ ಒಂದನ್ನು ಮಾಡಿದ್ದಾರೆ.

ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ ಪರಚುತ್ತಿದ್ದಾರೆ. ಬೇಕೆಂತಲೇ ಅವರು ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ. ನಮ್ಮ ತಂಡದವರು ಯಾರೊಬ್ಬರೂ ಹುಡುಗಿಯನ್ನು ಮುಟ್ಟಿಲ್ಲ. ಆದರೆ, ಅವರು ತಂಡದವರು ಹಾಗಲ್ಲ. ಪ್ಲ್ಯಾನ್​ ಮಾಡಿ ಅವರು ಬಂದು ನಮ್ಮನ್ನು ಹಿಡಿದುಕೊಳ್ಳುತ್ತಿದ್ದಾರೆ. ತುಂಬಾನೇ ರಫ್​ ಆಗಿ ನಡೆಸಿಕೊಳ್ಳುತ್ತಿದ್ದಾರೆ. ಮಂಜು ಬಂದು ನನ್ನನ್ನು ಎಲ್ಲೆಲ್ಲೋ ಮುಟ್ಟಿ ಎಸೆದಿದ್ದಾರೆ. ನಮಗೆ ಹೇಸಿಗೆ ಎನಿಸುತ್ತಿದೆ. ಈ ಆಟ ಸಾಕು ಇಲ್ಲಿಗೆ ನಿಲ್ಲಿಸಿ ಎಂದು ಕಣ್ಣೀರು ಹಾಕಿದ್ದಾರೆ.

ಆದರೆ, ಮಂಜು ಮಾತ್ರ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಪ್ರಶಾಂತ್​ ಜತೆ ಮಾತನಾಡುವಾಗ, ನಾನು ಯಾವುದನ್ನೂ ಉದ್ದೇಶಪೂರ್ವಕವಾಗಿ ಮಾಡಿಲ್ಲ. ನಮಗೆ ಖುಷಿಖುಷಿಯಾಗಿ ಆಡಬೇಕು ಎನ್ನುವ ಆಸೆ ಇತ್ತು. ಆದರೆ, ನೀವೇ ವೈಲೆಂಟ್​ ಆಗಿ ಆಡುವ ಮೂಲಕ ಆಟದ ದಿಕ್ಕನ್ನೇ ಬದಲಿಸಿದ್ದೀರಿ ಎಂದಿದ್ದಾರೆ.

ಇದನ್ನೂ ಓದಿ: BBK8: ವೈರಸ್​ನಿಂದ ಬಿಗ್​ ಮನೆಯಲ್ಲಿ ಹತ್ತಿದ ದ್ವೇಷದ ಬೆಂಕಿ; ಆರಿಸುವವರು ಯಾರು?

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ