AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಪ್ರೆಗ್ನೆನ್ಸಿ ನಾಟಕ

ದಿವ್ಯಾ ಪ್ರೆಗ್ನೆನ್ಸಿ ನಾಟಕವಾಡಿದ್ದಾರೆ! ಹಾಗಂತ ಈ ನಾಟಕದ ಹಿಂದೆ ಯಾವುದೇ ಕೆಟ್ಟ ಉದ್ದೇಶವಿರಲಿಲ್ಲ. ಈ ನಾಟಕದ ಹಿಂದೆ ಇದ್ದಿದ್ದು ಸಂಪೂರ್ಣವಾಗಿ ಒಳ್ಳೆಯ ಉದ್ದೇಶ.

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಪ್ರೆಗ್ನೆನ್ಸಿ ನಾಟಕ
ದಿವ್ಯಾ ಉರುಡುಗ
ರಾಜೇಶ್ ದುಗ್ಗುಮನೆ
| Edited By: |

Updated on: Mar 10, 2021 | 7:03 PM

Share

ಬಿಗ್​ ಬಾಸ್ ಮನೆ​ ಎಂದರೆ ಅಲ್ಲಿ ಡ್ರಾಮಾಗಳು ಇರಲೇಬೇಕು. ನಾಟಕಗಳು ಇಲ್ಲದಿದ್ದರೆ ಯಾರು ನೋಡುತ್ತಾರೆ? ಎನ್ನುವ ಚರ್ಚೆ ಕೂಡ ಇತ್ತೀಚೆಗೆ ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ನಡೆದಿತ್ತು. ಅಂತೆಯೇ, ಈಗ ದೊಡ್ಮನೆಯಲ್ಲಿ ಒಂದಾದಮೇಲೆ ಒಂದರಂತೆ ನಾಟಕಗಳು ನಡೆಯುತ್ತಿವೆ. ಈಗ ಇದಕ್ಕೆ ಹೊಸ ಸೇರ್ಪಡೆ ದಿವ್ಯಾ ಉರುಡು ಪ್ರೆಗ್ನೆನ್ಸಿ ನಾಟಕ! ಅಷ್ಟಕ್ಕೂ ದಿವ್ಯಾ ಹೀಗೆ ಮಾಡಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಿಗ್​ ಬಾಸ್​ ಎಪಿಸೋಡ್​ನಲ್ಲಿ ತೋರಿಸದ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ದಿವ್ಯಾ ಪ್ರೆಗ್ನೆನ್ಸಿ ನಾಟಕವಾಡಿದ್ದಾರೆ! ಹಾಗಂತ ಈ ನಾಟಕದ ಹಿಂದೆ ಯಾವುದೇ ಕೆಟ್ಟ ಉದ್ದೇಶವಿರಲಿಲ್ಲ. ಈ ನಾಟಕದ ಹಿಂದೆ ಇದ್ದಿದ್ದು ಸಂಪೂರ್ಣವಾಗಿ ಒಳ್ಳೆಯ ಉದ್ದೇಶ.

ಸೋಮವಾರ (ಮಾ.8) ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಗಿತ್ತು. ಇದರ ಅಂಗವಾಗಿ ವಿಶೇಷ ನಾಟಕ ಮಾಡಲು ಬಿಗ್​ ಬಾಸ್​​ ಆದೇಶಹೊರಡಿಸಿದ್ದರು. ಇದಕ್ಕಾಗಿ ಸಾಕಷ್ಟು ಐಡಿಯಾಗಳನ್ನು ಸ್ಪರ್ಧಿಗಳು ನೀಡಿದ್ದರು. ಲ್ಯಾಗ್​ ಮಂಜು, ಹೆಣ್ಣು ಮಗು ಜನಿಸಿದ ನಂತರ ಆಕೆ ಸಮಾಜದಲ್ಲಿ ಎದುರಿಸುವ ಕಷ್ಟ ಮತ್ತು ನಂತರ ಅದನ್ನು ಮೆಟ್ಟಿ ನಿಂತು ಆಕೆ ಹೇಗೆ ಅದನ್ನು ಎದುರಿಸಿ ಯಶಸ್ಸು ಕಾಣುತ್ತಾಳೆ ಎಂಬುದನ್ನು ತೋರಿಸಬಹುದು ಎಂದು ಹೇಳಿದ್ದರು. ಇದೇ ವಿಚಾರ ಇಟ್ಟುಕೊಂಡು ದಿವ್ಯಾ ಆ್ಯಂಡ್​ ಟೀಂ ನಾಟಕವಾಡಿದೆ.

ನಾಟಕದಲ್ಲಿ ರಾಜೀವ್​ ಹಾಗೂ ದಿವ್ಯಾ ಗಂಡ ಹೆಂಡತಿ ಆಗಿರುತ್ತಾರೆ. ದಿವ್ಯಾ ಗರ್ಭ ಧರಿಸುತ್ತಾಳೆ. ಹೆಣ್ಣುಮಗು ಎನ್ನುವ ಕಾರಣಕ್ಕೆ ಮಗುವನ್ನು ತೆಗೆಸಿಬಿಡೋಣ ಎನ್ನುತ್ತಾನೆ ಪತಿ. ಆದರೆ, ಆಕೆ ಇದಕ್ಕೆ ಒಪ್ಪದೆ ಆ ಮಹಿಳೆ ಗಂಡನಿಂದ ಬೇರೆ ಆಗುತ್ತಾಳೆ. ಆಕೆಗೆ ಹೆಣ್ಣುಮಗು ಕೂಡ ಜನಿಸುತ್ತದೆ. ಸಮಾಜದಲ್ಲಿ ಹೆಣ್ಣುಮಗು ಎಷ್ಟು ಕಷ್ಟ ಅನುಭವಿಸುತ್ತಾಳೆ ಮತ್ತು ಅದನ್ನೆಲ್ಲ ಮೆಟ್ಟಿ ಹೇಗೆ ನಿಲ್ಲುತ್ತಾಳೆ ಎಂಬುದೇ ಈ ನಾಟಕದ ಸಾರಾಂಶ. ಇದನ್ನು ನೋಡಿ ನಿಧಿ ಸುಬ್ಬಯ್ಯ ಕಣ್ಣಲ್ಲಿ ನೀರು ಹಾಕಿದ್ದಾರೆ.

ಕಲರ್ಸ್​ ಕನ್ನಡ ಹಂಚಿಕೊಂಡ ವಿಡಿಯೋ..

ಇದನ್ನೂ ಓದಿ: Bigg Boss Kannada: ದೊಡ್ಡವರು ಅಂತ ಸುಮ್ನೆ ಬಿಟ್ಟೀದೀನಿ ಮಗನೆ; ಪ್ರಶಾಂತ್​ಗೆ ಬ್ರೋ ಗೌಡ ಆವಾಜ್​!

BBK8: ವೈರಸ್​ ದಾಳಿಗೆ ಅಲ್ಲೋಲ-ಕಲ್ಲೋಲವಾದ ಬಿಗ್​ ಬಾಸ್​ ಮನೆ!

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು