Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8 First Day Highlights: ನನ್ನನ್ನು ಅಣ್ಣ ಎಂದು ಮಾತ್ರ ಕರೆಯಬೇಡಿ; ಮಂಜು ಪಾವಗಡ ಈ ಮನವಿ ಇಟ್ಟಿದ್ದು ಯಾರಿಗೆ?

Bigg Boss Kannada 8 First Day highlights: ಜನಪ್ರಿಯ ಮನೋರಂಜನಾ ಕಾರ್ಯಕ್ರಮ ಮಜಾ ಭಾರತ ಮೂಲಕ ಮಂಜು ಪಾವಗಡ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ತಮ್ಮ ಡೈಲಾಗ್​ ಡೆಲಿವರಿ ಮೂಲಕ ಮಂಜು ಹೆಚ್ಚು ಮನೆಮಾತಾಗಿದ್ದಾರೆ.

BBK8 First Day Highlights: ನನ್ನನ್ನು ಅಣ್ಣ ಎಂದು ಮಾತ್ರ ಕರೆಯಬೇಡಿ; ಮಂಜು ಪಾವಗಡ ಈ ಮನವಿ ಇಟ್ಟಿದ್ದು ಯಾರಿಗೆ?
ಮಂಜು ಪಾವಗಡ-ಧನುಶ್ರೀ
Follow us
ರಾಜೇಶ್ ದುಗ್ಗುಮನೆ
|

Updated on:Mar 01, 2021 | 4:46 PM

ಕನ್ನಡ ಬಿಗ್​ ಬಾಸ್​ ಎಂಟನೇ ಸಂಚಿಕೆ ಆರಂಭವಾಗಿದೆ. 17 ಸ್ಪರ್ಧಿಗಳು ಮೊದಲ ದಿನವನ್ನು ಮನೆಯಲ್ಲಿ ಕಳೆದಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪ್ರೇಮ ಕಥೆಗಳು ಹುಟ್ಟುವುದು ಹೊಸದೇನಲ್ಲ. ಈ ಮೊದಲು ಬಿಗ್​ ಬಾಸ್​ ಮನೆಗೆ ತೆರಳಿದ್ದ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದಾರೆ. ಈಗ ಆರಂಭವಾಗಿರುವ ಹೊಸ ಸೀಸನ್​ ಸ್ಪರ್ಧಿಗಳ ಮಧ್ಯೆ ಪ್ರೇಮ ಗೀತೆಗಳು ಹುಟ್ಟಿಕೊಳ್ಳುವ ಎಲ್ಲಾ ಸೂಚನೆ ಸಿಗುತ್ತಿದೆ.

ನಿನ್ನೆ 17 ಅಭ್ಯರ್ಥಿಗಳನ್ನು ಸುದೀಪ್​ ಬರಮಾಡಿಕೊಂಡಿದ್ದರು. ಮಂಜು ಪಾವಗಡ ಮನೆ ಒಳಗೆ ತುಂಬಾನೇ ಗ್ರ್ಯಾಂಡ್​ ಆಗಿ ಎಂಟ್ರಿ ಕೊಟ್ಟಿದ್ದರು. ಮನೆ ಒಳಗೆ ಹೋಗುತ್ತಿದ್ದಂತೆ ನನಗೆ ಅಣ್ಣ ಎಂದು ಮಾತ್ರ ಕರೀಬೇಡಿ ಎನ್ನುವ ಎಚ್ಚರಿಕೆ ರವಾನಿಸಿದ್ದರು ಮಂಜು!

ಜನಪ್ರಿಯ ಮನೋರಂಜನಾ ಕಾರ್ಯಕ್ರಮ ಮಜಾ ಭಾರತ ಮೂಲಕ ಮಂಜು ಪಾವಗಡ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ತಮ್ಮ ಡೈಲಾಗ್​ ಡೆಲಿವರಿ ಮೂಲಕ ಮಂಜು ಹೆಚ್ಚು ಮನೆಮಾತಾಗಿದ್ದಾರೆ. ಜನರ ಹೃದಯ ಗೆಲ್ಲುವ ಪ್ರಯತ್ನದಲ್ಲಿರುವ ಮಂಜು ಬಿಗ್​ ಬಾಸ್ ಮನೆಯಲ್ಲಿ ಆ್ಯಕ್ಟಿವ್​ ಆಗಿದ್ದಾರೆ.

ನಿನ್ನೆ ಬಿಗ್​ ಬಾಸ್​​ ಮನೆ ಒಳಗೆ ಮಂಜು ಎಂಟ್ರಿ ಕೊಡುತ್ತಿದ್ದಂತೆ ಟಿಕ್​ ಟಾಕ್​ ಸ್ಟಾರ್​ ಧನುಶ್ರೀ ಅಣ್ಣಾ ಎಂದು ಕರೆದಿದ್ದಾರೆ. ಇದಕ್ಕೆ ಉತ್ತರಿಸಿದ್ದ ಮಂಜು, ನನ್ನನ್ನು ಅಣ್ಣ ಎಂದು ಮಾತ್ರ ಕರೆಯಬೇಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಧನುಶ್ರೀ ನಗುತ್ತಲೇ ಒಕೆ ಎಂದಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರೇಮ ಕಹಾನಿ! ಕಲರ್ಸ್​ ಕನ್ನಡ ಇಂದು ಬಿಡುಗಡೆ ಮಾಡಿದ್ದ ಪ್ರೋಮೋದಲ್ಲಿ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ನಡುವೆ ಪ್ರೇಮ ಗೀತೆ ಆರಂಭವಾಗುವ ಸೂಚನೆ ಸಿಕ್ಕಿದೆ. ದಿವ್ಯಾ ಸುರೇಶ್​ ಬಟ್ಟೆ ಜೋಡಿಸಿ ಇಡುವಾಗ ಮಂಜು ಎಂಟ್ರಿ ಕೊಡುತ್ತಾರೆ. ಈ ವೇಳೆ, ನಿಮಗೋಸ್ಕರ ಏನು ಬೇಕಾದ್ರೂ ಮಾಡುತ್ತೇನೆ ಎಂದಿದ್ದಾರೆ ಮಂಜು. ಅಷ್ಟೇ ಅಲ್ಲ, ದಿವ್ಯಾ ಕೂಡ, ನಿಮ್ಮ ಕೈ ನೋವಾದ್ರೆ ನನಗೆ ನೋವಾಗುತ್ತದೆ ಎಂದಿದ್ದಾರೆ. ಇದರಿಂದ ಇಬ್ಬರ ನಡುವೆ ಪ್ರೇಮ ಕಹಾನಿ ಹುಟ್ಟಿಕೊಳ್ಳುತ್ತಿದೆ ಎನ್ನುವ ಮಾತು ಹರಿದಾಡಿದೆ.

ಇದನ್ನೂ ಓದಿ: Bigg Boss Kannada 8: ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನ ಏನೇನಾಯ್ತು? 17 ಸ್ಪರ್ಧಿಗಳ ವಿವರ ಇಲ್ಲಿದೆ

Published On - 4:44 pm, Mon, 1 March 21

ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?