AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ವೈರಸ್​ನಿಂದ ಬಿಗ್​ ಮನೆಯಲ್ಲಿ ಹತ್ತಿದ ದ್ವೇಷದ ಬೆಂಕಿ; ಆರಿಸುವವರು ಯಾರು?

ಮನುಷ್ಯರ ತಂಡದಲ್ಲಿದ್ದ ಮಂಜು ಎಲ್ಲರಿಗೂ ಪರಚುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಇನ್ನು, ಶುಭಾ-ನಿಧಿ ನಡುವೆ ಇದ್ದ ಗೆಳೆತನ ಕೂಡ ಮುರಿದು ಬೀಳುವ ಲಕ್ಷಣ ಕಾಣುತ್ತಿದೆ.

BBK8: ವೈರಸ್​ನಿಂದ ಬಿಗ್​ ಮನೆಯಲ್ಲಿ ಹತ್ತಿದ ದ್ವೇಷದ ಬೆಂಕಿ; ಆರಿಸುವವರು ಯಾರು?
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: Mar 10, 2021 | 10:26 PM

Share

ಕನ್ನಡ ಬಿಗ್​ ಬಾಸ್​ ಎರಡನೇ ವಾರದಲ್ಲಿ ನೀಡಲಾದ ಮೊದಲ ಕಠಿಣ ಟಾಸ್ಕ್​ಗೆ ಸ್ಪರ್ಧಿಗಳ ನಡುವೆ ದ್ವೇಷದ ಬೆಂಕಿ ಹತ್ತಿಕೊಂಡಿದೆ. ಒಂದು ಲೆಕ್ಕದಲ್ಲಿ ಹೇಳಬೇಕೆಂದರೆ, ಮನೆಯಲ್ಲಿ ಎರಡು ತಂಡಗಳು ಸೃಷ್ಟಿಯಾಗಿವೆ. ಇದೊಂದು ಆಟ ಎನ್ನುವುದನ್ನು ಮರೆತು ಒಬ್ಬರಿಗೊಬ್ಬರು ಕೆಂಡ ಕಾರಿಕೊಳ್ಳುತ್ತಿದ್ದಾರೆ. ಟಾಸ್ಕ್​ನ ಪ್ರಕಾರ ಟಾಸ್ಕ್​​ನ ನಿಯಮದಂತೆ ವೈರಸ್​ ದಾಳಿಗೆ ತುತ್ತಾಗದಂತೆ ಮನುಷ್ಯರು ಎಚ್ಚರವಿರಬೇಕು. ವೈರಸ್​ ತಂಡ ಮಾಡುವ ದಾಳಿಯಿಂದ ತಪ್ಪಿಸಿಕೊಳ್ಳಬೇಕು. ಇದು ಸಾಧ್ಯವಾಗದೆ ಇದ್ದರೆ ಮನುಷ್ಯ ತಂಡದ ಒಬ್ಬ ಸದಸ್ಯ ಕ್ವಾರಂಟೈನ್​ ಆಗಬೇಕು. ಕ್ವಾರಂಟೈನ್​ ಅವಧಿ ಅರ್ಧ ಗಂಟೆ. ಈ ವೇಳೆ ಮನುಷ್ಯ ತಂಡದವರು ಹಗ್ಗ ಹಿಡಿದು ನಿಲ್ಲಬೇಕು. ಆಗ ವೈರಸ್​ ತಂಡದವರು ತೊಂದರೆ ನೀಡಬೇಕು. ಆದರೆ, ಬಾಡಿ ಟಚ್​ ಮಾಡುವಂತಿಲ್ಲ. ಒಂದೊಮ್ಮೆ, ಕ್ವಾರಂಟೈನ್​ನಲ್ಲಿರುವವರು ಹಗ್ಗವನ್ನು ಕೈಬಿಟ್ಟರೆ ಅವರು ಸೋತಂತೆ. ಅವರು ಈ ಆಟದಿಂದ ಹೊರಗಿರಬೇಕು. ಕೊನೆಯಲ್ಲಿ ಯಾವ ತಂಡದಲ್ಲಿ ಹೆಚ್ಚು ಜನರು ಉಳಿಯುತ್ತಾರೋ ಅವರೇ ಗೆದ್ದಂತೆ.

ವೈರಸ್​ ಆಟದಲ್ಲಿ ಎಲ್ಲರೂ ಹೆಚ್ಚು ಆಕ್ರಮಣಕಾರಿಯಾಗಿ ಭಾಗವಹಿಸಿದ್ದಾರೆ. ಆ ಮೂಲಕ ಮನೆಯೊಳಗೆ ಟೆನ್ಷನ್​ ಸೃಷ್ಟಿ ಆಗಿದೆ. ತಮ್ಮ ತಮ್ಮ ಉಳಿವಿಗಾಗಿ ಎಲ್ಲರೂ ತೀವ್ರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಈ ವೇಳೆ ಎಲ್ಲರ ಅಸಲಿ ಮುಖ ಹೊರಗೆ ಬರುತ್ತಿದೆ.

ಮನುಷ್ಯರ ತಂಡದಲ್ಲಿದ್ದ ಮಂಜು ಎಲ್ಲರಿಗೂ ಪರಚುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಇನ್ನು, ಶುಭಾ-ನಿಧಿ ನಡುವೆ ಇದ್ದ ಗೆಳೆತನ ಕೂಡ ಮುರಿದು ಬೀಳುವ ಲಕ್ಷಣ ಕಾಣುತ್ತಿದೆ. 10ನೇ ದಿನ ಮಾತನಾಡಿದ್ದ ಶುಭಾ, ನಾನು ನಿಧಿಗೆ ತುಂಬಾನೇ ಕನೆಕ್ಟ್​ ಆಗಿದ್ದೆ. ಆದರೆ, ಈಗ ಅವರು ಈ ರೀತಿ ಮಾಡುತ್ತಾರೆ ಎಂದುಕೊಂಡಿರಲಿಲ್ಲ. ಅವರ ಬಗ್ಗೆ ಇದ್ದ ಒಳ್ಳೆಯ ಭಾವನೆ ಹೋಗಿಬಿಟ್ಟಿದೆ ಎಂದು ಹೇಳಿದ್ದಾರೆ.

ಸದ್ಯ, ಬಿಗ್​ ಬಾಸ್​ಮನೆಯಲ್ಲಿ ಎರಡು ತಂಡದ ನಡುವೆ ದ್ವೇಷದ ಬೆಂಕಿ ಹತ್ತಿಕೊಂಡಿದೆ. ನಿಧಿ ಈ ಆಟವೇ ಸಾಕು ಎಂದು ಹೇಳುತ್ತಿದ್ದಾರೆ. ಸದ್ಯ, ಮನೆಯಲ್ಲಿ ಆರಿಸಿದ ಬೆಂಕಿಯನ್ನು ಆರಿಸುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: Bigg Boss Kannada: ಅಯ್ಯೋ ಪಾಪ.. ನಿರ್ಮಲಾ ಕೈಗೆ ಇಷ್ಟೊಂದು ಏಟಾಗಿದೆಯಾ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ