AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ವೈರಸ್​ನಿಂದ ಬಿಗ್​ ಮನೆಯಲ್ಲಿ ಹತ್ತಿದ ದ್ವೇಷದ ಬೆಂಕಿ; ಆರಿಸುವವರು ಯಾರು?

ಮನುಷ್ಯರ ತಂಡದಲ್ಲಿದ್ದ ಮಂಜು ಎಲ್ಲರಿಗೂ ಪರಚುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಇನ್ನು, ಶುಭಾ-ನಿಧಿ ನಡುವೆ ಇದ್ದ ಗೆಳೆತನ ಕೂಡ ಮುರಿದು ಬೀಳುವ ಲಕ್ಷಣ ಕಾಣುತ್ತಿದೆ.

BBK8: ವೈರಸ್​ನಿಂದ ಬಿಗ್​ ಮನೆಯಲ್ಲಿ ಹತ್ತಿದ ದ್ವೇಷದ ಬೆಂಕಿ; ಆರಿಸುವವರು ಯಾರು?
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: Mar 10, 2021 | 10:26 PM

Share

ಕನ್ನಡ ಬಿಗ್​ ಬಾಸ್​ ಎರಡನೇ ವಾರದಲ್ಲಿ ನೀಡಲಾದ ಮೊದಲ ಕಠಿಣ ಟಾಸ್ಕ್​ಗೆ ಸ್ಪರ್ಧಿಗಳ ನಡುವೆ ದ್ವೇಷದ ಬೆಂಕಿ ಹತ್ತಿಕೊಂಡಿದೆ. ಒಂದು ಲೆಕ್ಕದಲ್ಲಿ ಹೇಳಬೇಕೆಂದರೆ, ಮನೆಯಲ್ಲಿ ಎರಡು ತಂಡಗಳು ಸೃಷ್ಟಿಯಾಗಿವೆ. ಇದೊಂದು ಆಟ ಎನ್ನುವುದನ್ನು ಮರೆತು ಒಬ್ಬರಿಗೊಬ್ಬರು ಕೆಂಡ ಕಾರಿಕೊಳ್ಳುತ್ತಿದ್ದಾರೆ. ಟಾಸ್ಕ್​ನ ಪ್ರಕಾರ ಟಾಸ್ಕ್​​ನ ನಿಯಮದಂತೆ ವೈರಸ್​ ದಾಳಿಗೆ ತುತ್ತಾಗದಂತೆ ಮನುಷ್ಯರು ಎಚ್ಚರವಿರಬೇಕು. ವೈರಸ್​ ತಂಡ ಮಾಡುವ ದಾಳಿಯಿಂದ ತಪ್ಪಿಸಿಕೊಳ್ಳಬೇಕು. ಇದು ಸಾಧ್ಯವಾಗದೆ ಇದ್ದರೆ ಮನುಷ್ಯ ತಂಡದ ಒಬ್ಬ ಸದಸ್ಯ ಕ್ವಾರಂಟೈನ್​ ಆಗಬೇಕು. ಕ್ವಾರಂಟೈನ್​ ಅವಧಿ ಅರ್ಧ ಗಂಟೆ. ಈ ವೇಳೆ ಮನುಷ್ಯ ತಂಡದವರು ಹಗ್ಗ ಹಿಡಿದು ನಿಲ್ಲಬೇಕು. ಆಗ ವೈರಸ್​ ತಂಡದವರು ತೊಂದರೆ ನೀಡಬೇಕು. ಆದರೆ, ಬಾಡಿ ಟಚ್​ ಮಾಡುವಂತಿಲ್ಲ. ಒಂದೊಮ್ಮೆ, ಕ್ವಾರಂಟೈನ್​ನಲ್ಲಿರುವವರು ಹಗ್ಗವನ್ನು ಕೈಬಿಟ್ಟರೆ ಅವರು ಸೋತಂತೆ. ಅವರು ಈ ಆಟದಿಂದ ಹೊರಗಿರಬೇಕು. ಕೊನೆಯಲ್ಲಿ ಯಾವ ತಂಡದಲ್ಲಿ ಹೆಚ್ಚು ಜನರು ಉಳಿಯುತ್ತಾರೋ ಅವರೇ ಗೆದ್ದಂತೆ.

ವೈರಸ್​ ಆಟದಲ್ಲಿ ಎಲ್ಲರೂ ಹೆಚ್ಚು ಆಕ್ರಮಣಕಾರಿಯಾಗಿ ಭಾಗವಹಿಸಿದ್ದಾರೆ. ಆ ಮೂಲಕ ಮನೆಯೊಳಗೆ ಟೆನ್ಷನ್​ ಸೃಷ್ಟಿ ಆಗಿದೆ. ತಮ್ಮ ತಮ್ಮ ಉಳಿವಿಗಾಗಿ ಎಲ್ಲರೂ ತೀವ್ರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಈ ವೇಳೆ ಎಲ್ಲರ ಅಸಲಿ ಮುಖ ಹೊರಗೆ ಬರುತ್ತಿದೆ.

ಮನುಷ್ಯರ ತಂಡದಲ್ಲಿದ್ದ ಮಂಜು ಎಲ್ಲರಿಗೂ ಪರಚುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಇನ್ನು, ಶುಭಾ-ನಿಧಿ ನಡುವೆ ಇದ್ದ ಗೆಳೆತನ ಕೂಡ ಮುರಿದು ಬೀಳುವ ಲಕ್ಷಣ ಕಾಣುತ್ತಿದೆ. 10ನೇ ದಿನ ಮಾತನಾಡಿದ್ದ ಶುಭಾ, ನಾನು ನಿಧಿಗೆ ತುಂಬಾನೇ ಕನೆಕ್ಟ್​ ಆಗಿದ್ದೆ. ಆದರೆ, ಈಗ ಅವರು ಈ ರೀತಿ ಮಾಡುತ್ತಾರೆ ಎಂದುಕೊಂಡಿರಲಿಲ್ಲ. ಅವರ ಬಗ್ಗೆ ಇದ್ದ ಒಳ್ಳೆಯ ಭಾವನೆ ಹೋಗಿಬಿಟ್ಟಿದೆ ಎಂದು ಹೇಳಿದ್ದಾರೆ.

ಸದ್ಯ, ಬಿಗ್​ ಬಾಸ್​ಮನೆಯಲ್ಲಿ ಎರಡು ತಂಡದ ನಡುವೆ ದ್ವೇಷದ ಬೆಂಕಿ ಹತ್ತಿಕೊಂಡಿದೆ. ನಿಧಿ ಈ ಆಟವೇ ಸಾಕು ಎಂದು ಹೇಳುತ್ತಿದ್ದಾರೆ. ಸದ್ಯ, ಮನೆಯಲ್ಲಿ ಆರಿಸಿದ ಬೆಂಕಿಯನ್ನು ಆರಿಸುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: Bigg Boss Kannada: ಅಯ್ಯೋ ಪಾಪ.. ನಿರ್ಮಲಾ ಕೈಗೆ ಇಷ್ಟೊಂದು ಏಟಾಗಿದೆಯಾ?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!