Bigg Boss Kannada 8: ಬಿಗ್​ ಬಾಸ್ ವೀಕೆಂಡ್​ ಶೋಗೆ ಸುದೀಪ್​ ಪಡೆಯೋ ಸಂಭಾವನೆ ಎಷ್ಟು ಗೊತ್ತಾ?

Bigg Boss Kannada 8: ಸಾಕಷ್ಟು ವೀಕ್ಷಕರು ಸುದೀಪ್​ಗಾಗಿಯೇ ಬಿಗ್​ ಬಾಸ್​ ನೋಡುವವರಿದ್ದಾರೆ. ಹೀಗಾಗಿ, ಮುಂದಿನ ಸೀಸನ್​ಗಳನ್ನೂ ಅವರೇ ನಡೆಸುಕೊಡಬಹುದು ಎನ್ನಲಾಗುತ್ತಿದೆ.

Bigg Boss Kannada 8: ಬಿಗ್​ ಬಾಸ್ ವೀಕೆಂಡ್​ ಶೋಗೆ ಸುದೀಪ್​ ಪಡೆಯೋ ಸಂಭಾವನೆ ಎಷ್ಟು ಗೊತ್ತಾ?
ಬಿಗ್​ ಬಾಸ್ ಆರಂಭದಲ್ಲಿ ಹಿರಿತೆರೆ ಹಾಗೂ ಕಿರಿತೆರೆಯಲ್ಲಿ ಗುರುತಿಸಿಕೊಂಡವರನ್ನು ಮಾತ್ರ ಕರೆಸಿಕೊಳ್ಳುತ್ತಿದ್ದರು. ನಂತರ ಸಾಮಾನ್ಯ ವ್ಯಕ್ತಿಗಳಿಗೂ ಬಿಗ್ ಬಾಸ್ ಮನೆಯಲ್ಲಿ ಪ್ರವೇಶ ಸಿಕ್ಕಿತ್ತು. ಆದರೆ, ಕಳೆದ ಬಾರಿಯಿಂದ ಜನಸಾಮಾನ್ಯರಿಗೆ ಬಿಗ್ ಬಾಸ್ ಮನೆ ಪ್ರವೇಶಿಸೋದಕ್ಕೆ ಅವಕಾಶವಿಲ್ಲ. ಹೀಗಾಗಿ, ಈ ಬಾರಿಯೂ ಬಿಗ್ ಬಾಸ್​​ಮನೆಯಲ್ಲಿ ಸೆಲೆಬ್ರಿಟಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
Follow us
| Updated By: Lakshmi Hegde

Updated on:Feb 02, 2021 | 2:17 PM

ಇದೇ ತಿಂಗಳಿಂದ ಕನ್ನಡ ಬಿಗ್​ ಬಾಸ್​ ಸೀಸನ್​ 8 ರಿಯಾಲಿಟಿ ಶೋ ತೆರೆಗೆ ಬರೋಕೆ ಸಿದ್ಧವಾಗಿದೆ. ಬಿಗ್​ ಬಾಸ್​ ಮನೆ ಒಳಗೆ ಯಾರೆಲ್ಲ ಹೋಗಲಿದ್ದಾರೆ ಎನ್ನುವ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಕೂಡ ನಡೆಯುತ್ತಿದೆ. ಇದರ ಜತೆ ಜತೆಗೆ ಸುದೀಪ್​ ಸಂಭಾವನೆ ಬಗ್ಗೆಯೂ ಸಾಕಷ್ಟು ಪ್ರಶ್ನೆಗಳು ಹರಿದಾಡುತ್ತಿವೆ. ಹಾಗಾದರೆ, ಸುದೀಪ್​ ಒಂದು ಸೀಸನ್​ಗೆ ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬುದಕ್ಕೆ ಇಲ್ಲಿದೆ ವಿವರ.

ಸೀಸನ್​ 1ರಿಂದ ಕನ್ನಡ ಬಿಗ್​ ಬಾಸ್​​ಅನ್ನು ಸುದೀಪ್​ ಅವರೇ ನಡೆಸಿಕೊಡುತ್ತಿದ್ದಾರೆ. ಈ ಬಾರಿಯು ಬಿಗ್​ ಬಾಸ್​ ಮನೆಗೆ ಸುದೀಪ್ ಸಾರಥ್ಯವೇ ಇರಲಿದೆ. ವಾರಾಂತ್ಯದಲ್ಲಿ ಎರಡು ದಿನಗಳ ಕಾಲ ಸುದೀಪ್​ ಬಿಗ್​ ಬಾಸ್​ ಸ್ಪರ್ಧಿಗಳ ಜತೆ ಮಾತುಕತೆ ನಡೆಸುತ್ತಾರೆ. ಸುದೀಪ್​ ತಮ್ಮ ಮಾತಿನ ಮೂಲಕವೇ ಎಲ್ಲರಿಗೂ ಇಷ್ಟವಾಗುತ್ತಾರೆ. ಅವರ ನಿರೂಪಣೆಯೆ ಬಿಗ್​ ಬಾಸ್​ಗೆ ಒಂದು ಶೋಭೆ ಎಂದರೆ ತಪ್ಪಾಗಲಾರದು. ಹೀಗಾಗಿ, ಬಿಗ್​ಬಾಸ್​ಗೆ ಸುದೀಪ್​ ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ.

ಬಿಗ್​ ಬಾಸ್​ ಮೂರು ಸೀಸನ್​ಗಳನ್ನು ಯಾವುದೇ ಒಪ್ಪಂದ ಇಲ್ಲದೆ ಸುದೀಪ್​ ನಡೆಸಿಕೊಟ್ಟಿದ್ದರು. ನಂತರದ ಐದು ಸೀಸನ್​ಗೆ ಸುದೀಪ್​ ಒಪ್ಪಂದ ಮಾಡಿಕೊಂಡಿದ್ದರು. ಸೀಸನ್​ 8ಕ್ಕೆ ಈ ಒಪ್ಪಂದ ಪೂರ್ಣಗೊಳ್ಳಲಿದೆ. ಈ ಐದು ಸೀಸನ್​ಗೆ ಸುದೀಪ್​ 20 ಕೋಟಿ ರೂಪಾಯಿ ಪಡೆದಿದ್ದಾರೆ. ಅಂದರೆ, ಒಂದು ಸೀಸನ್​ಗೆ 4 ಕೋಟಿ ರೂಪಾಯಿ ಆಗಲಿದೆ.

ಇನ್ನು, 8 ಸೀಸನ್​ ಪೂರ್ಣಗೊಂಡ ನಂತರವೂ ಸುದೀಪ್​ ಅವರೇ ಬಿಗ್​ ಬಾಸ್​ ನಡೆಸಿಕೊಡುವ ಸಾಧ್ಯತೆ ಇದೆ. ಸಾಕಷ್ಟು ವೀಕ್ಷಕರು ಸುದೀಪ್​ಗಾಗಿಯೇ ಬಿಗ್​ ಬಾಸ್​ ನೋಡುವವರಿದ್ದಾರೆ. ಹೀಗಾಗಿ, ಮುಂದಿನ ಸೀಸನ್​ಗಳನ್ನೂ ಅವರೇ ನಡೆಸಿಕೊಡಬಹುದು ಎನ್ನಲಾಗುತ್ತಿದೆ.

12 ವಾರಗಳ ಬಿಗ್ ಬಾಸ್ ಸೀಸನ್​ಗೆ ಸಲ್ಲೂ ಪಡೆಯಲಿರೋದು ಬರೋಬ್ಬರಿ ರೂ. 450 ಕೋಟಿ!!!

Published On - 2:15 pm, Tue, 2 February 21

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು