AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಯಾರ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು
ಬ್ರೋ ಗೌಡ-ಮಂಜು
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 8:29 AM

Share

ಕನ್ನಡ ಬಿಗ್​ ಬಾಸ್ ​ಆರಂಭವಾಗಿ 8 ದಿನ ಕಳೆದಿದೆ. ನಿತ್ಯ ಹೊಸ ಹೊಸ ಡ್ರಾಮಾಗಳಿಗೆ ಬಿಗ್ ಬಾಸ್​ ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಅಲಿಯಾಸ್​​ ಬ್ರೋ ಗೌಡ ನಾಯಕತ್ವದ​ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈಗ ಕೊಟ್ಟಿರುವ ಕೆಲಸದಲ್ಲಿ ರೊಟೇಶನ್​ ಮಾಡುತ್ತಿಲ್ಲ ಎನ್ನುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರದಲ್ಲಿ ಬ್ರೋ ಗೌಡಗೆ ಲ್ಯಾಗ್​ ಮಂಜು ಎಚ್ಚರಿಕೆ ನೀಡಿದ್ದಾರೆ.

ದಿವ್ಯಾ ಜತೆ ಲ್ಯಾಗ್​ ಮಂಜು ಸಲಿಗೆ ಹೊಂದಿದ್ದಾರೆ. ಇದೇ ವಿಚಾರಕ್ಕೆ ಬ್ರೋ ಗೌಡ ಮಂಜು ಅವರಿಗೆ ಹೆಚ್ಚು ಕೆಲಸ ನೀಡಿದ್ದರಂತೆ. ಇದನ್ನು ಮಂಜು ಅವರು ಸುದೀಪ್​ ಜತೆ ಹಂಚಿಕೊಂಡಿದ್ದರು. ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಮನೆ ಸದಸ್ಯರಿಗೆ ನೀಡಿರುವ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದಕ್ಕೆ, ಮನೆ ಮಂದಿ ಸಿಟ್ಟಾಗಿದ್ದಾರೆ.

8ನೇ ದಿನ ಮನೆಯಲ್ಲಿ ಬ್ರೋ ಗೌಡ ಹಾಗೂ ಮಂಜು ಮಾತನಾಡುತ್ತಿದ್ದರು. ಈ ವೇಳೆ ಶಿಫ್ಟ್​ ರೊಟೇಶನ್​ ಮಾಡುವ ವಿಚಾರ ಚರ್ಚೆಗೆ ಬಂದಿದೆ. ಆಗ ಮಂಜು, ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ ಎಂದಿದ್ದಾರೆ. ಈ ವಿಚಾರವನ್ನು ಬ್ರೋ ಗೌಡ ಲೈಟ್​ ಆಗಿ ತೆಗೆದುಕೊಂಡು ನಕ್ಕಿದ್ದಾರೆ. ಆದರೆ, ಬಿಗ್​ ಬಾಸ್​ ಕ್ಯಾಮೆರಾ ಬಳಿ ತೆರಳಿದ ಬ್ರೋ ಗೌಡ ಈ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ನಾನು ಕ್ಯಾಪ್ಟನ್​ ಆಗಿ ನನ್ನ ಕೈಲಾದಷ್ಟು ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ಉಳಿದುವರು ಕ್ಯಾಪ್ಟನ್​ ಆಗಿ ಅವರು ಹೇಗೆ ನಿಭಾಯಿಸುತ್ತಾರೆ ಎನ್ನುವುದನ್ನು ನಾನು ನೋಡೋಕೆ ಕಾತುರನ್ನಾಗಿದ್ದೇನೆ ಎಂದು ಬ್ರೋ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Bigg Boss Kannada | ದಿವ್ಯಾ ಸುರೇಶ್​ ಬಗ್ಗೆ ಇದ್ದ ಭಾವನೆಗಳನ್ನು ಸುಟ್ಟು ಹಾಕಿದ್ರಂತೆ ಬ್ರೋ ಗೌಡ!

Published On - 10:11 pm, Mon, 8 March 21

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​