AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಯಾರ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು
ಬ್ರೋ ಗೌಡ-ಮಂಜು
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2021 | 8:29 AM

Share

ಕನ್ನಡ ಬಿಗ್​ ಬಾಸ್ ​ಆರಂಭವಾಗಿ 8 ದಿನ ಕಳೆದಿದೆ. ನಿತ್ಯ ಹೊಸ ಹೊಸ ಡ್ರಾಮಾಗಳಿಗೆ ಬಿಗ್ ಬಾಸ್​ ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಅಲಿಯಾಸ್​​ ಬ್ರೋ ಗೌಡ ನಾಯಕತ್ವದ​ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈಗ ಕೊಟ್ಟಿರುವ ಕೆಲಸದಲ್ಲಿ ರೊಟೇಶನ್​ ಮಾಡುತ್ತಿಲ್ಲ ಎನ್ನುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರದಲ್ಲಿ ಬ್ರೋ ಗೌಡಗೆ ಲ್ಯಾಗ್​ ಮಂಜು ಎಚ್ಚರಿಕೆ ನೀಡಿದ್ದಾರೆ.

ದಿವ್ಯಾ ಜತೆ ಲ್ಯಾಗ್​ ಮಂಜು ಸಲಿಗೆ ಹೊಂದಿದ್ದಾರೆ. ಇದೇ ವಿಚಾರಕ್ಕೆ ಬ್ರೋ ಗೌಡ ಮಂಜು ಅವರಿಗೆ ಹೆಚ್ಚು ಕೆಲಸ ನೀಡಿದ್ದರಂತೆ. ಇದನ್ನು ಮಂಜು ಅವರು ಸುದೀಪ್​ ಜತೆ ಹಂಚಿಕೊಂಡಿದ್ದರು. ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಮನೆ ಸದಸ್ಯರಿಗೆ ನೀಡಿರುವ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದಕ್ಕೆ, ಮನೆ ಮಂದಿ ಸಿಟ್ಟಾಗಿದ್ದಾರೆ.

8ನೇ ದಿನ ಮನೆಯಲ್ಲಿ ಬ್ರೋ ಗೌಡ ಹಾಗೂ ಮಂಜು ಮಾತನಾಡುತ್ತಿದ್ದರು. ಈ ವೇಳೆ ಶಿಫ್ಟ್​ ರೊಟೇಶನ್​ ಮಾಡುವ ವಿಚಾರ ಚರ್ಚೆಗೆ ಬಂದಿದೆ. ಆಗ ಮಂಜು, ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ ಎಂದಿದ್ದಾರೆ. ಈ ವಿಚಾರವನ್ನು ಬ್ರೋ ಗೌಡ ಲೈಟ್​ ಆಗಿ ತೆಗೆದುಕೊಂಡು ನಕ್ಕಿದ್ದಾರೆ. ಆದರೆ, ಬಿಗ್​ ಬಾಸ್​ ಕ್ಯಾಮೆರಾ ಬಳಿ ತೆರಳಿದ ಬ್ರೋ ಗೌಡ ಈ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ನಾನು ಕ್ಯಾಪ್ಟನ್​ ಆಗಿ ನನ್ನ ಕೈಲಾದಷ್ಟು ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ಉಳಿದುವರು ಕ್ಯಾಪ್ಟನ್​ ಆಗಿ ಅವರು ಹೇಗೆ ನಿಭಾಯಿಸುತ್ತಾರೆ ಎನ್ನುವುದನ್ನು ನಾನು ನೋಡೋಕೆ ಕಾತುರನ್ನಾಗಿದ್ದೇನೆ ಎಂದು ಬ್ರೋ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Bigg Boss Kannada | ದಿವ್ಯಾ ಸುರೇಶ್​ ಬಗ್ಗೆ ಇದ್ದ ಭಾವನೆಗಳನ್ನು ಸುಟ್ಟು ಹಾಕಿದ್ರಂತೆ ಬ್ರೋ ಗೌಡ!

Published On - 10:11 pm, Mon, 8 March 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ