Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು

ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಯಾರ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ.

BBK8: ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ; ಶಮಂತ್​ಗೆ ಎಚ್ಚರಿಕೆ ನೀಡಿದ ಲ್ಯಾಗ್​ ಮಂಜು
ಬ್ರೋ ಗೌಡ-ಮಂಜು
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Mar 09, 2021 | 8:29 AM

ಕನ್ನಡ ಬಿಗ್​ ಬಾಸ್ ​ಆರಂಭವಾಗಿ 8 ದಿನ ಕಳೆದಿದೆ. ನಿತ್ಯ ಹೊಸ ಹೊಸ ಡ್ರಾಮಾಗಳಿಗೆ ಬಿಗ್ ಬಾಸ್​ ಸಾಕ್ಷಿಯಾಗುತ್ತಿದೆ. ಈ ಮಧ್ಯೆ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಅಲಿಯಾಸ್​​ ಬ್ರೋ ಗೌಡ ನಾಯಕತ್ವದ​ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈಗ ಕೊಟ್ಟಿರುವ ಕೆಲಸದಲ್ಲಿ ರೊಟೇಶನ್​ ಮಾಡುತ್ತಿಲ್ಲ ಎನ್ನುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ವಿಚಾರದಲ್ಲಿ ಬ್ರೋ ಗೌಡಗೆ ಲ್ಯಾಗ್​ ಮಂಜು ಎಚ್ಚರಿಕೆ ನೀಡಿದ್ದಾರೆ.

ದಿವ್ಯಾ ಜತೆ ಲ್ಯಾಗ್​ ಮಂಜು ಸಲಿಗೆ ಹೊಂದಿದ್ದಾರೆ. ಇದೇ ವಿಚಾರಕ್ಕೆ ಬ್ರೋ ಗೌಡ ಮಂಜು ಅವರಿಗೆ ಹೆಚ್ಚು ಕೆಲಸ ನೀಡಿದ್ದರಂತೆ. ಇದನ್ನು ಮಂಜು ಅವರು ಸುದೀಪ್​ ಜತೆ ಹಂಚಿಕೊಂಡಿದ್ದರು. ಈ ವಾರವೂ ಬ್ರೋ ಗೌಡ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. ಆದರೆ, ಅವರು ಮನೆ ಸದಸ್ಯರಿಗೆ ನೀಡಿರುವ ಕೆಲಸವನ್ನೂ ಬದಲಾವಣೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಇದಕ್ಕೆ, ಮನೆ ಮಂದಿ ಸಿಟ್ಟಾಗಿದ್ದಾರೆ.

8ನೇ ದಿನ ಮನೆಯಲ್ಲಿ ಬ್ರೋ ಗೌಡ ಹಾಗೂ ಮಂಜು ಮಾತನಾಡುತ್ತಿದ್ದರು. ಈ ವೇಳೆ ಶಿಫ್ಟ್​ ರೊಟೇಶನ್​ ಮಾಡುವ ವಿಚಾರ ಚರ್ಚೆಗೆ ಬಂದಿದೆ. ಆಗ ಮಂಜು, ನಾನು ಕ್ಯಾಪ್ಟನ್​ ಆದ್ರೆ ನಿಂಗ್​ ಐತೆ ಹಬ್ಬ ಎಂದಿದ್ದಾರೆ. ಈ ವಿಚಾರವನ್ನು ಬ್ರೋ ಗೌಡ ಲೈಟ್​ ಆಗಿ ತೆಗೆದುಕೊಂಡು ನಕ್ಕಿದ್ದಾರೆ. ಆದರೆ, ಬಿಗ್​ ಬಾಸ್​ ಕ್ಯಾಮೆರಾ ಬಳಿ ತೆರಳಿದ ಬ್ರೋ ಗೌಡ ಈ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ನಾನು ಕ್ಯಾಪ್ಟನ್​ ಆಗಿ ನನ್ನ ಕೈಲಾದಷ್ಟು ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ಉಳಿದುವರು ಕ್ಯಾಪ್ಟನ್​ ಆಗಿ ಅವರು ಹೇಗೆ ನಿಭಾಯಿಸುತ್ತಾರೆ ಎನ್ನುವುದನ್ನು ನಾನು ನೋಡೋಕೆ ಕಾತುರನ್ನಾಗಿದ್ದೇನೆ ಎಂದು ಬ್ರೋ ಗೌಡ ಹೇಳಿದ್ದಾರೆ.

ಇದನ್ನೂ ಓದಿ: Bigg Boss Kannada | ದಿವ್ಯಾ ಸುರೇಶ್​ ಬಗ್ಗೆ ಇದ್ದ ಭಾವನೆಗಳನ್ನು ಸುಟ್ಟು ಹಾಕಿದ್ರಂತೆ ಬ್ರೋ ಗೌಡ!

Published On - 10:11 pm, Mon, 8 March 21

ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ