AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಮಂತ್​ ನಿಮ್ಮ ಕಂಡ್ರೆ ತುಂಬಾ ಇಷ್ಟ… ಬಿಗ್​ ಬಾಸ್​ ಮನೆಯಲ್ಲಿ ಮೊದಲ ಬಾರಿ ಮೌನ ಮುರಿದ ವೈಷ್ಣವಿ ಗೌಡ

ಒಂದು ಕಡೆ ಮಸಿ ಇಡಲಾಗುತ್ತದೆ. ಪ್ರತೀ ಸ್ಪರ್ಧಿಯೂ ಗೇಮ್​ ರದ್ದಾಗಲು ಕಾರಣ ಯಾರು ಎಂದು ಗುರುತಿಸಿ ಅವರಿಗೆ ಮಸಿ ಬಳಿಯಬೇಕು. ವೈಷ್ಣವಿ ಗೌಡ ಪಾಳಿ ಬಂದಾಗ ಅವರು ಶಮಂತ್​ಗೆ ಮಸಿ ಬಳಿಯುವ ನಿರ್ಧಾರಕ್ಕೆ ಬಂದರು.

ಶಮಂತ್​ ನಿಮ್ಮ ಕಂಡ್ರೆ ತುಂಬಾ ಇಷ್ಟ... ಬಿಗ್​ ಬಾಸ್​ ಮನೆಯಲ್ಲಿ ಮೊದಲ ಬಾರಿ ಮೌನ ಮುರಿದ ವೈಷ್ಣವಿ ಗೌಡ
ಬ್ರೋ ಗೌಡ- ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: Mar 12, 2021 | 7:50 AM

Share

ಬಿಗ್​ ಬಾಸ್​ ಎರಡನೇ ವಾರದಲ್ಲಿ ನೀಡಲಾಗಿದ್ದ ಕಠಿಣ ಟಾಸ್ಕ್ ​ಅನ್ನು ಯಶಸ್ವಿಗೊಳಿಸಲು ಮನೆಯ ಸದಸ್ಯರು ವಿಫಲರಾಗಿದ್ದರು. ಇದಕ್ಕೆ ಮನೆ ಮಂದಿಗೆ ಬಿಗ್​ ಬಾಸ್​ ಶಿಕ್ಷೆ ಕೂಡ ನೀಡಿದೆ. ಕನ್ನಡ ಹಾಡಿನ ಮೂಲಕ ಬಿಗ್​ ಬಾಸ್​ ಮನೆಯಲ್ಲಿ ಮುಂಜಾನೆ ಆರಂಭವಾಗುತ್ತದೆ. ಆದರೆ, ಬಿಗ್​ ಬಾಸ್​ ಮನೆಯಲ್ಲಿ 11ನೇ ದಿನ ಯಾವುದೇ ಹಾಡು ಪ್ಲೇ ಆಗಿಲ್ಲ. ಇದನ್ನು ನೋಡಿ ಮನೆ ಮಂದಿ ತುಂಬಾನೇ ಅಚ್ಚರಿ ಮತ್ತು ಭಯಗೊಂಡಿದ್ದಾರೆ! ಇದಾದ ನಂತರ ಆಟದ ಸೋಲಿಗೆ ಕಾರಣವಾಗಿದ್ದವರಿಗೆ ಮಸಿ ಬಳಿಯುವ ಕಾರ್ಯಕ್ರಮ ನಡೆದಿತ್ತು. ಆಗ ವೈಷ್ಣವಿ ಗೌಡ ಮೊದಲ ಬಾರಿಗೆ ಮೌನ ಮುರಿದಿದ್ದಾರೆ! ವೈಷ್ಣವಿ ಗೌಡ ಬಿಗ್​ ಬಾಸ್​ ಮನೆ ಒಳಗೆ ಬಂದಾಗಿನಿಂದಲೂ ಒಂದು ಚಾರ್ಮ್​ ಇಟ್ಟುಕೊಂಡಿದ್ದಾರೆ. ಯಾರ ಜತೆ ಎಷ್ಟು ಮಾತನಾಡಬೇಕು ಎಂಬುದನ್ನು ಸರಿಯಾಗಿ ಅರಿತುಕೊಂಡಿದ್ದ ಅವರು, ಅಷ್ಟೇ ಮಾತನಾಡುತ್ತಾ ಬಂದಿದ್ದರು. ಇದೇ ಕಾರಣಕ್ಕೆ ಎಲ್ಲರಿಗೂ ಅವರು ಇಷ್ಟವಾಗಿದ್ದರು. ವೈರಸ್​ ಟಾಸ್ಕ್​ನಲ್ಲಿ ವೈಷ್ಣವಿ ಮೊದಲ ಬಾರಿಗೆ ತಮ್ಮ ತಾಳ್ಮೆ ಕಳೆದುಕೊಂಡು ಕೂಗಾಡಿದ್ದರು.

ಬಿಗ್​ ಬಾಸ್​ ಎರಡನೇ ವಾರದಲ್ಲಿ ನೀಡಲಾಗಿದ್ದ ಕಠಿಣ ಟಾಸ್ಕ್​ ಅನ್ನು ಯಶಸ್ವಿಗೊಳಿಸಲು ಮನೆಯ ಸದಸ್ಯರು ವಿಫಲರಾಗಿದ್ದರು. ಹಾಯಾಗಿ, ನಗು ನಗುತ್ತ ಆಡಬೇಕಿದ್ದ ಟಾಸ್ಕ್​ನಲ್ಲಿ ಒಬ್ಬರಿಗೊಬ್ಬರು ಕಿತ್ತಾಟ ಮಾಡಿಕೊಂಡು, ಪರಸ್ಪರ ದ್ವೇಷ ಬೆಳೆಸಿಕೊಂಡಿದ್ದರು. ಇದಕ್ಕೆ ಸಿಟ್ಟಾದ ಬಿಗ್​ ಬಾಸ್,​ ಟಾಸ್ಕ್ ಕ್ಯಾನ್ಸಲ್​ ಮಾಡಿದ್ದರು. ಇದಕ್ಕೆ ಮನೆ ಮಂದಿಗೆ ಮಸಿ ಬಳಿಯುವ ಶಿಕ್ಷೆ ನೀಡಿತ್ತು.

ಒಂದು ಕಡೆ ಮಸಿ ಇಡಲಾಗುತ್ತದೆ. ಪ್ರತೀ ಸ್ಪರ್ಧಿಯೂ ಗೇಮ್​ ರದ್ದಾಗಲು ಕಾರಣ ಯಾರು ಎಂದು ಗುರುತಿಸಿ ಅವರಿಗೆ ಮಸಿ ಬಳಿಯಬೇಕು. ವೈಷ್ಣವಿ ಗೌಡ ಪಾಳಿ ಬಂದಾಗ ಅವರು ಶಮಂತ್​ಗೆ ಮಸಿ ಬಳಿಯುವ ನಿರ್ಧಾರಕ್ಕೆ ಬಂದರು. ಇದಕ್ಕೆ ವಿರಣೆ ನೀಡಿದ್ದ ವೈಷ್ಣವಿ, ಆಟದಲ್ಲಿ ಹುಡುಗರು ತುಂಬಾನೇ ಸ್ಟ್ರಾಂಗ್​ ಇರುತ್ತಾರೆ. ಈ ಸಂದರ್ಭದಲ್ಲಿ ಹುಡುಗರು ಹುಡುಗಿಯರ ಬಗ್ಗೆ ಕಾಳಜಿ ತೋರಬೇಕಿತ್ತು. ಆದರೆ, ಇದರಲ್ಲಿ ಶಮಂತ್​ ವಿಫಲವಾಗಿದ್ದಾರೆ. ಇದನ್ನು ಬಿಟ್ಟು ಅವರ ಮೇಲೆ ಬೇರೆ ಯಾವುದೇ ದ್ವೇಷವಿಲ್ಲ ಎಂದು ಹೇಳಿ ಮಸಿ ಹಚ್ಚಲು ಬಂದರು.

ಆಗ, ಶಮಂತ್​ ನಿಮ್ಮ ಕಂಡ್ರೆ ತುಂಬಾ ಇಷ್ಟ.. ಎಂದು ಹೇಳಿದರು ವೈಷ್ಣವಿ. ಇದನ್ನು ಕೇಳಿ ಎಲ್ಲರೂ ಓ… ಎಂದು ಕೂಗಿದರು. ಆಗ, ಶಮಂತ್​ ನಿಮ್ಮ ಕಂಡ್ರೆ ತುಂಬಾ ಇಷ್ಟ ಇದೆ ಎಂದು ಹೇಳುವುದಿಲ್ಲ ಎಂದು ಹೇಳಿದರು. ಎಲ್ಲರೂ ಮತ್ತೊಮ್ಮೆ ನಕ್ಕರು.

ಇದನ್ನೂ ಓದಿ: Bigg Boss Kannada: ಅಯ್ಯೋ ಪಾಪ.. ನಿರ್ಮಲಾ ಕೈಗೆ ಇಷ್ಟೊಂದು ಏಟಾಗಿದೆಯಾ?

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ