AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ. 

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!
ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 22, 2021 | 7:29 AM

Share

ಮೂರು ವಾರಗಳಲ್ಲಿ ಶಂಕರ್​ ಅಶ್ವಥ್​​ ಎರಡು ಬಾರಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಪ್ರತಿ ಬಾರಿ ಕ್ಯಾಪ್ಟನ್​ ಆದವರು ಅವರನ್ನು ಸೇವ್​ ಮಾಡಿದ್ದರು. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಜೈಲಿನಿಂದ ಹೊರ ಬಂದ ಮೇಲೆ ಅವರು ಮನೆ ಮಂದಿಯ ವಿರುದ್ಧ ರಾಂಗ್​ ಆಗುತ್ತಿದ್ದಾರೆ. ಈಗ ಮನೆ ಮಂದಿ ಒಟ್ಟಾಗಿ ಅಶ್ವತ್ಥ್​ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಬಿಗ್​ ಬಾಸ್​ ಜೈಲಿನಿಂದ ಹೊರ ಬಂದಿದ್ದ ಶಂಕರ್​, ಪ್ರಶಾಂತ್​ ಸಂಬರಗಿ ವಿರುದ್ಧ ಹರಿ ಹಾಯ್ದಿದ್ದರು. ನಾನು ಜೈಲಿನಿಂದ ಹೊರ ಬಂದಿದ್ದೇನೆ. ನಾನು ಏಳು ಕೆರೆ ನೀರು ಕುಡಿದು ಬಂದಿದ್ದೇನೆ. ಬಚ್ಚಲ ಮನೆ ನೀರು ಕುಡಿದು ಬಂದಿಲ್ಲ. ನಿನ್ನೆ-ಮೊನ್ನೆ ಬಂದ ಬಚ್ಚಾ ನನ್ನನ್ನು ಜಡ್ಜ್​ ಮಾಡುತ್ತೆ. ಅದು ಯಾವ ಆಧಾರದ ಮೇಲೆ ಎಂದು ಪ್ರಶ್ನೆ ಮಾಡಿದ್ದರು ಅವರು.

ಈಗ ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಪ್ರತಿ ಬಾರಿ ಶಂಕರ್​ ಅಶ್ವತ್ಥ್​ಗೆ ಕ್ಯಾಪ್ಟನ್​ಗಳು ಸವಲತ್ತು ನೀಡಿದರು ಅನಿಸುತ್ತಿದೆಯೇ ಎಂದು ಕೇಳಲಾಯಿತು. ಶಂಕರ್​​ಗೆ ಸವಲತ್ತು ಜಾಸ್ತಿನೇ ಸಿಗುತ್ತಿದೆ ಎಂದು ನನಗನ್ನಿಸುತ್ತಿದೆ ಎಂದರು ರಘು ಗೌಡ. ಶಂಕರ್​ ಅವರನ್ನು ಸೇವ್​ ಮಾಡಿದಾಗ ರಾಜೀವ್​ ತುಂಬಾನೇ ಎಮೋಷನ್​ ಆದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದರು. ಇದನ್ನು, ಮನೆಯ ಬಹುತೇಕರು ಒಪ್ಪಿಕೊಂಡರು. ಅಷ್ಟೇ ಅಲ್ಲ, ಶಂಕರ್​ಗೆ ಸವಲತ್ತು ಸಿಗುತ್ತಿದೆ ಎಂಬುದು ಮನೆಯ ಬಹುತೇಕರ ಆರೋಪವೇ ಆಗಿದೆ.

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಬಿಗ್​ ಬಾಸ್​ ಮನೆಗೆ ಎಲ್ಲರೂ ಆಡೋಕೆ ಅಂತಾನೆ ಬಂದಿರುವುದು. ಹೀಗಿರುವಾಗ ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ