AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ. 

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!
ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 22, 2021 | 7:29 AM

Share

ಮೂರು ವಾರಗಳಲ್ಲಿ ಶಂಕರ್​ ಅಶ್ವಥ್​​ ಎರಡು ಬಾರಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಪ್ರತಿ ಬಾರಿ ಕ್ಯಾಪ್ಟನ್​ ಆದವರು ಅವರನ್ನು ಸೇವ್​ ಮಾಡಿದ್ದರು. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಜೈಲಿನಿಂದ ಹೊರ ಬಂದ ಮೇಲೆ ಅವರು ಮನೆ ಮಂದಿಯ ವಿರುದ್ಧ ರಾಂಗ್​ ಆಗುತ್ತಿದ್ದಾರೆ. ಈಗ ಮನೆ ಮಂದಿ ಒಟ್ಟಾಗಿ ಅಶ್ವತ್ಥ್​ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಬಿಗ್​ ಬಾಸ್​ ಜೈಲಿನಿಂದ ಹೊರ ಬಂದಿದ್ದ ಶಂಕರ್​, ಪ್ರಶಾಂತ್​ ಸಂಬರಗಿ ವಿರುದ್ಧ ಹರಿ ಹಾಯ್ದಿದ್ದರು. ನಾನು ಜೈಲಿನಿಂದ ಹೊರ ಬಂದಿದ್ದೇನೆ. ನಾನು ಏಳು ಕೆರೆ ನೀರು ಕುಡಿದು ಬಂದಿದ್ದೇನೆ. ಬಚ್ಚಲ ಮನೆ ನೀರು ಕುಡಿದು ಬಂದಿಲ್ಲ. ನಿನ್ನೆ-ಮೊನ್ನೆ ಬಂದ ಬಚ್ಚಾ ನನ್ನನ್ನು ಜಡ್ಜ್​ ಮಾಡುತ್ತೆ. ಅದು ಯಾವ ಆಧಾರದ ಮೇಲೆ ಎಂದು ಪ್ರಶ್ನೆ ಮಾಡಿದ್ದರು ಅವರು.

ಈಗ ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಪ್ರತಿ ಬಾರಿ ಶಂಕರ್​ ಅಶ್ವತ್ಥ್​ಗೆ ಕ್ಯಾಪ್ಟನ್​ಗಳು ಸವಲತ್ತು ನೀಡಿದರು ಅನಿಸುತ್ತಿದೆಯೇ ಎಂದು ಕೇಳಲಾಯಿತು. ಶಂಕರ್​​ಗೆ ಸವಲತ್ತು ಜಾಸ್ತಿನೇ ಸಿಗುತ್ತಿದೆ ಎಂದು ನನಗನ್ನಿಸುತ್ತಿದೆ ಎಂದರು ರಘು ಗೌಡ. ಶಂಕರ್​ ಅವರನ್ನು ಸೇವ್​ ಮಾಡಿದಾಗ ರಾಜೀವ್​ ತುಂಬಾನೇ ಎಮೋಷನ್​ ಆದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದರು. ಇದನ್ನು, ಮನೆಯ ಬಹುತೇಕರು ಒಪ್ಪಿಕೊಂಡರು. ಅಷ್ಟೇ ಅಲ್ಲ, ಶಂಕರ್​ಗೆ ಸವಲತ್ತು ಸಿಗುತ್ತಿದೆ ಎಂಬುದು ಮನೆಯ ಬಹುತೇಕರ ಆರೋಪವೇ ಆಗಿದೆ.

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಬಿಗ್​ ಬಾಸ್​ ಮನೆಗೆ ಎಲ್ಲರೂ ಆಡೋಕೆ ಅಂತಾನೆ ಬಂದಿರುವುದು. ಹೀಗಿರುವಾಗ ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ