AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ. 

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!
ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 22, 2021 | 7:29 AM

Share

ಮೂರು ವಾರಗಳಲ್ಲಿ ಶಂಕರ್​ ಅಶ್ವಥ್​​ ಎರಡು ಬಾರಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಪ್ರತಿ ಬಾರಿ ಕ್ಯಾಪ್ಟನ್​ ಆದವರು ಅವರನ್ನು ಸೇವ್​ ಮಾಡಿದ್ದರು. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಜೈಲಿನಿಂದ ಹೊರ ಬಂದ ಮೇಲೆ ಅವರು ಮನೆ ಮಂದಿಯ ವಿರುದ್ಧ ರಾಂಗ್​ ಆಗುತ್ತಿದ್ದಾರೆ. ಈಗ ಮನೆ ಮಂದಿ ಒಟ್ಟಾಗಿ ಅಶ್ವತ್ಥ್​ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಬಿಗ್​ ಬಾಸ್​ ಜೈಲಿನಿಂದ ಹೊರ ಬಂದಿದ್ದ ಶಂಕರ್​, ಪ್ರಶಾಂತ್​ ಸಂಬರಗಿ ವಿರುದ್ಧ ಹರಿ ಹಾಯ್ದಿದ್ದರು. ನಾನು ಜೈಲಿನಿಂದ ಹೊರ ಬಂದಿದ್ದೇನೆ. ನಾನು ಏಳು ಕೆರೆ ನೀರು ಕುಡಿದು ಬಂದಿದ್ದೇನೆ. ಬಚ್ಚಲ ಮನೆ ನೀರು ಕುಡಿದು ಬಂದಿಲ್ಲ. ನಿನ್ನೆ-ಮೊನ್ನೆ ಬಂದ ಬಚ್ಚಾ ನನ್ನನ್ನು ಜಡ್ಜ್​ ಮಾಡುತ್ತೆ. ಅದು ಯಾವ ಆಧಾರದ ಮೇಲೆ ಎಂದು ಪ್ರಶ್ನೆ ಮಾಡಿದ್ದರು ಅವರು.

ಈಗ ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಪ್ರತಿ ಬಾರಿ ಶಂಕರ್​ ಅಶ್ವತ್ಥ್​ಗೆ ಕ್ಯಾಪ್ಟನ್​ಗಳು ಸವಲತ್ತು ನೀಡಿದರು ಅನಿಸುತ್ತಿದೆಯೇ ಎಂದು ಕೇಳಲಾಯಿತು. ಶಂಕರ್​​ಗೆ ಸವಲತ್ತು ಜಾಸ್ತಿನೇ ಸಿಗುತ್ತಿದೆ ಎಂದು ನನಗನ್ನಿಸುತ್ತಿದೆ ಎಂದರು ರಘು ಗೌಡ. ಶಂಕರ್​ ಅವರನ್ನು ಸೇವ್​ ಮಾಡಿದಾಗ ರಾಜೀವ್​ ತುಂಬಾನೇ ಎಮೋಷನ್​ ಆದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದರು. ಇದನ್ನು, ಮನೆಯ ಬಹುತೇಕರು ಒಪ್ಪಿಕೊಂಡರು. ಅಷ್ಟೇ ಅಲ್ಲ, ಶಂಕರ್​ಗೆ ಸವಲತ್ತು ಸಿಗುತ್ತಿದೆ ಎಂಬುದು ಮನೆಯ ಬಹುತೇಕರ ಆರೋಪವೇ ಆಗಿದೆ.

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಬಿಗ್​ ಬಾಸ್​ ಮನೆಗೆ ಎಲ್ಲರೂ ಆಡೋಕೆ ಅಂತಾನೆ ಬಂದಿರುವುದು. ಹೀಗಿರುವಾಗ ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್