AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ. 

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!
ಶಂಕರ್​ ಅಶ್ವತ್ಥ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 22, 2021 | 7:29 AM

Share

ಮೂರು ವಾರಗಳಲ್ಲಿ ಶಂಕರ್​ ಅಶ್ವಥ್​​ ಎರಡು ಬಾರಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಪ್ರತಿ ಬಾರಿ ಕ್ಯಾಪ್ಟನ್​ ಆದವರು ಅವರನ್ನು ಸೇವ್​ ಮಾಡಿದ್ದರು. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಜೈಲಿನಿಂದ ಹೊರ ಬಂದ ಮೇಲೆ ಅವರು ಮನೆ ಮಂದಿಯ ವಿರುದ್ಧ ರಾಂಗ್​ ಆಗುತ್ತಿದ್ದಾರೆ. ಈಗ ಮನೆ ಮಂದಿ ಒಟ್ಟಾಗಿ ಅಶ್ವತ್ಥ್​ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಬಿಗ್​ ಬಾಸ್​ ಜೈಲಿನಿಂದ ಹೊರ ಬಂದಿದ್ದ ಶಂಕರ್​, ಪ್ರಶಾಂತ್​ ಸಂಬರಗಿ ವಿರುದ್ಧ ಹರಿ ಹಾಯ್ದಿದ್ದರು. ನಾನು ಜೈಲಿನಿಂದ ಹೊರ ಬಂದಿದ್ದೇನೆ. ನಾನು ಏಳು ಕೆರೆ ನೀರು ಕುಡಿದು ಬಂದಿದ್ದೇನೆ. ಬಚ್ಚಲ ಮನೆ ನೀರು ಕುಡಿದು ಬಂದಿಲ್ಲ. ನಿನ್ನೆ-ಮೊನ್ನೆ ಬಂದ ಬಚ್ಚಾ ನನ್ನನ್ನು ಜಡ್ಜ್​ ಮಾಡುತ್ತೆ. ಅದು ಯಾವ ಆಧಾರದ ಮೇಲೆ ಎಂದು ಪ್ರಶ್ನೆ ಮಾಡಿದ್ದರು ಅವರು.

ಈಗ ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಪ್ರತಿ ಬಾರಿ ಶಂಕರ್​ ಅಶ್ವತ್ಥ್​ಗೆ ಕ್ಯಾಪ್ಟನ್​ಗಳು ಸವಲತ್ತು ನೀಡಿದರು ಅನಿಸುತ್ತಿದೆಯೇ ಎಂದು ಕೇಳಲಾಯಿತು. ಶಂಕರ್​​ಗೆ ಸವಲತ್ತು ಜಾಸ್ತಿನೇ ಸಿಗುತ್ತಿದೆ ಎಂದು ನನಗನ್ನಿಸುತ್ತಿದೆ ಎಂದರು ರಘು ಗೌಡ. ಶಂಕರ್​ ಅವರನ್ನು ಸೇವ್​ ಮಾಡಿದಾಗ ರಾಜೀವ್​ ತುಂಬಾನೇ ಎಮೋಷನ್​ ಆದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದರು. ಇದನ್ನು, ಮನೆಯ ಬಹುತೇಕರು ಒಪ್ಪಿಕೊಂಡರು. ಅಷ್ಟೇ ಅಲ್ಲ, ಶಂಕರ್​ಗೆ ಸವಲತ್ತು ಸಿಗುತ್ತಿದೆ ಎಂಬುದು ಮನೆಯ ಬಹುತೇಕರ ಆರೋಪವೇ ಆಗಿದೆ.

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಬಿಗ್​ ಬಾಸ್​ ಮನೆಗೆ ಎಲ್ಲರೂ ಆಡೋಕೆ ಅಂತಾನೆ ಬಂದಿರುವುದು. ಹೀಗಿರುವಾಗ ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?