ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ. 

ನಿನ್ನೆ-ಮೊನ್ನೆ ಬಂದ ಬಚ್ಚಾ ಎಂದಿದ್ದ ಶಂಕರ್​ ಅಶ್ವತ್ಥ್​ ವಿರುದ್ಧ ಮನೆ ಮಂದಿಯೆಲ್ಲಾ ಒಟ್ಟಾಗಿ ತಿರುಗಿ ಬಿದ್ರು!
ಶಂಕರ್​ ಅಶ್ವತ್ಥ್​
Follow us
| Updated By: ಮದನ್​ ಕುಮಾರ್​

Updated on: Mar 22, 2021 | 7:29 AM

ಮೂರು ವಾರಗಳಲ್ಲಿ ಶಂಕರ್​ ಅಶ್ವಥ್​​ ಎರಡು ಬಾರಿ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಪ್ರತಿ ಬಾರಿ ಕ್ಯಾಪ್ಟನ್​ ಆದವರು ಅವರನ್ನು ಸೇವ್​ ಮಾಡಿದ್ದರು. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಜೈಲಿನಿಂದ ಹೊರ ಬಂದ ಮೇಲೆ ಅವರು ಮನೆ ಮಂದಿಯ ವಿರುದ್ಧ ರಾಂಗ್​ ಆಗುತ್ತಿದ್ದಾರೆ. ಈಗ ಮನೆ ಮಂದಿ ಒಟ್ಟಾಗಿ ಅಶ್ವತ್ಥ್​ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಬಿಗ್​ ಬಾಸ್​ ಜೈಲಿನಿಂದ ಹೊರ ಬಂದಿದ್ದ ಶಂಕರ್​, ಪ್ರಶಾಂತ್​ ಸಂಬರಗಿ ವಿರುದ್ಧ ಹರಿ ಹಾಯ್ದಿದ್ದರು. ನಾನು ಜೈಲಿನಿಂದ ಹೊರ ಬಂದಿದ್ದೇನೆ. ನಾನು ಏಳು ಕೆರೆ ನೀರು ಕುಡಿದು ಬಂದಿದ್ದೇನೆ. ಬಚ್ಚಲ ಮನೆ ನೀರು ಕುಡಿದು ಬಂದಿಲ್ಲ. ನಿನ್ನೆ-ಮೊನ್ನೆ ಬಂದ ಬಚ್ಚಾ ನನ್ನನ್ನು ಜಡ್ಜ್​ ಮಾಡುತ್ತೆ. ಅದು ಯಾವ ಆಧಾರದ ಮೇಲೆ ಎಂದು ಪ್ರಶ್ನೆ ಮಾಡಿದ್ದರು ಅವರು.

ಈಗ ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಪ್ರತಿ ಬಾರಿ ಶಂಕರ್​ ಅಶ್ವತ್ಥ್​ಗೆ ಕ್ಯಾಪ್ಟನ್​ಗಳು ಸವಲತ್ತು ನೀಡಿದರು ಅನಿಸುತ್ತಿದೆಯೇ ಎಂದು ಕೇಳಲಾಯಿತು. ಶಂಕರ್​​ಗೆ ಸವಲತ್ತು ಜಾಸ್ತಿನೇ ಸಿಗುತ್ತಿದೆ ಎಂದು ನನಗನ್ನಿಸುತ್ತಿದೆ ಎಂದರು ರಘು ಗೌಡ. ಶಂಕರ್​ ಅವರನ್ನು ಸೇವ್​ ಮಾಡಿದಾಗ ರಾಜೀವ್​ ತುಂಬಾನೇ ಎಮೋಷನ್​ ಆದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದರು. ಇದನ್ನು, ಮನೆಯ ಬಹುತೇಕರು ಒಪ್ಪಿಕೊಂಡರು. ಅಷ್ಟೇ ಅಲ್ಲ, ಶಂಕರ್​ಗೆ ಸವಲತ್ತು ಸಿಗುತ್ತಿದೆ ಎಂಬುದು ಮನೆಯ ಬಹುತೇಕರ ಆರೋಪವೇ ಆಗಿದೆ.

ಎಲ್ಲವೂ ಸರಿ ಇದ್ದಂತೆ ಕಂಡರೂ ಶಂಕರ್​ ಅಶ್ವತ್ಥ್​ ಬಗ್ಗೆ ಮನೆಯ ಬಹುತೇಕರಿಗೆ ಅಸಮಾಧಾನ ಇದೆ. ಬಿಗ್​ ಬಾಸ್​ ಮನೆಗೆ ಎಲ್ಲರೂ ಆಡೋಕೆ ಅಂತಾನೆ ಬಂದಿರುವುದು. ಹೀಗಿರುವಾಗ ಅವರಿಗೆ ವಯಸ್ಸಿನ ಕಾರಣ ನೀಡಿ ಅವರನ್ನು ಸೇಫ್​ ಮಾಡೋದು ಎಷ್ಟು ಸರಿ ಎನ್ನುವುದು ಅನೇಕರ ಪ್ರಶ್ನೆಯಾಗಿದೆ.

ಇದನ್ನೂ ಓದಿ: Bigg Boss Kannada 8 Elimination: ಬಿಗ್​ ಬಾಸ್​ ಮನೆಯಿಂದ ಗೀತಾ ಭಾರತಿ ಭಟ್​ ಔಟ್​; ಎಲಿಮಿನೇಷನ್​ಗೆ ಇಲ್ಲಿದೆ ಬಲವಾದ ಕಾರಣ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ