AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಬಿಗ್​ ಬಾಸ್​ ಸೀಸನ್​ 8 ಸೆಲೆಬ್ರಿಟಿಗಳಿಗೆ ಮೀಸಲು; ಪ್ರತಿದಿನ ರಾತ್ರಿ 9:30ಕ್ಕೆ ಶೋ

ಬಿಗ್​ ಬಾಸ್​ 9 ಸಣ್ಣ ಗ್ಯಾಪ್​ ನಂತರ ಬರುವ ಸಾಧ್ಯತೆ ಇದೆ. ಬಿಗ್​ ಬಾಸ್​ 9 ನವೆಂಬರ್​​ನ ಲ್ಲಿ ಬರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು ಪರಮೇಶ್ವರ್​ ಗುಂಡ್ಕಲ್​.

Bigg Boss Kannada 8: ಬಿಗ್​ ಬಾಸ್​ ಸೀಸನ್​ 8 ಸೆಲೆಬ್ರಿಟಿಗಳಿಗೆ ಮೀಸಲು; ಪ್ರತಿದಿನ ರಾತ್ರಿ 9:30ಕ್ಕೆ ಶೋ
ಬಿಗ್ ಬಾಸ್ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on:Feb 25, 2021 | 5:20 PM

Share

ಇದೇ ಭಾನುವಾರದಿಂದ ಕನ್ನಡ ಬಿಗ್​ ಬಾಸ್​ 8 ಆರಂಭವಾಗುತ್ತಿದೆ. ಬಿಗ್​ ಬಾಸ್​ ಆರಂಭವಾಗುವುದಕ್ಕೂ ಮೊದಲು ಈ ಕುರಿತು ನಟ ಸುದೀಪ್​ ಹಾಗೂ ಕಲರ್ಸ್​ ಕನ್ನಡ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಬಿಗ್​ ಬಾಸ್​ 8 ಬಗ್ಗೆ ಒಂದಷ್ಟು ಮಾಹಿತಿ ನೀಡಿದ್ದಾರೆ. ಮೊದಲು ಮಾತು ಆರಂಭಿಸಿದ ಪರಮೇಶ್ವರ್​ ಗುಂಡ್ಕಲ್​, ಇದು 8ನೇ ಸೀಸನ್​. ಬೇರೇ ಬೇರೆ ವ್ಯಕ್ತಿಗಳ ನಡುವಳಿಕೆಗಳನ್ನು ತೋರಿಸೋ ಶೋ. ಈ ಶೋ ಮುಖ್ಯವಾಗಿ ಆ್ಯಕ್ಷನ್​-ರಿಯಾಕ್ಷನ್​ಗಳನ್ನು ಒಳಗೊಂಡಿರುತ್ತದೆ. ಭಾನುವಾರ ಸಂಜೆ 6 ಗಂಟೆಗೆ ಬಿಗ್​ ಬಾಸ್​ ಶುರು ಆಗಲಿದೆ. ನಿತ್ಯ 9:30ಕ್ಕೆ ಬಿಗ್​ ಬಾಸ್​ ಪ್ರಸಾರವಾಗಲಿದೆ ಎಂದರು.

ಈ ಬಾರಿ ಎಷ್ಟು ಸ್ಪರ್ಧಿಗಳು ಇರುತ್ತಾರೆ ಎನ್ನುವ ಪ್ರಶ್ನೆಗೆ ಪರಮೇಶ್ವರ್ ಗುಂಡ್ಕಲ್​ ಉತ್ತರಿಸಿದ್ದಾರೆ. ಈ ಬಾರಿ 17 ಸ್ಪರ್ಧಿಗಳನ್ನು ಮನೆಗೆ ಕಳುಹಿಸಬೇಕು ಎನ್ನುವ ಉದ್ದೇಶ ಇದೆ. ಇವರನ್ನು ಈಗಾಗಲೇ ಕ್ವಾರಂಟೈನ್​ನಲ್ಲಿ ಇಡಲಾಗಿದೆ. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನೆಗೆಟಿವ್​ ಬಂದಿದೆ. ಯಾರಾದರೂ ಒಬ್ಬರಿಗೆ ಪಾಸಿಟಿವ್​ ಬಂದರೂ ಅವರನ್ನು ಮನೆ ಒಳಗೆ ಕಳುಹಿಸೋಕೆ ಆಗಲ್ಲ. ಹೀಗಾಗಿ ಈಗಲೇ ಸ್ಪರ್ಧಿಗಳ ಲೆಕ್ಕ ನೀಡೋಕೆ ಆಗಲ್ಲ ಎಂದಿದ್ದಾರೆ ಅವರು. ​

ಈ ಬಾರಿಯದ್ದು ಸೆಲೆಬ್ರಿಟಿ ಸೀಸನ್​. ಹೀಗಾಗಿ, ಜನಸಾಮಾನ್ಯರು ಮನೆ ಒಳಗೆ ಹೋಗಲ್ಲ. ಸ್ಪರ್ಧಿಗಳಿಗೆ ಬಯೋಬಬಲ್​ ಕ್ರಿಯೇಟ್​ ಮಾಡೋಕೆ ತುಂಬಾನೇ ಒದ್ದಾಡುತ್ತಿದ್ದೇವೆ. ಕೊರೊನಾ ಇರುವುದರಿಂದ ತುಂಬಾನೇ ಎಚ್ಚರಿಕೆ ವಹಿಸಿ ಈ ಬಾರಿಯ ಸ್ಪರ್ಧಿಗಳನ್ನು ಕಳುಹಿಸುತ್ತಿದ್ದೇನೆ. ಬಿಗ್​ ಬಾಸ್​ ಮನೆ ತುಂಬಾನೇ ಭಿನ್ನವಾಗಿದೆ. ಗಾರ್ಡನ್​ ಏರಿಯಾ ಬದಲಾಯಿಸಲಾಗಿದೆ. ಈ ಬಾರಿ ಬಿಗ್​ ಬಾಸ್​ ವೂಟ್​ನಲ್ಲಿ ಲೈವ್​​ ಮೂಲಕ 24 ಗಂಟೆಗಳ ಕಾಲ ಪ್ರಸಾರವಾಗಲಿದೆ ಎಂದು ಮಾಹಿತಿ ನೀಡಿದರು.

ಬಿಗ್​ ಬಾಸ್​ ಸೀಸನ್​ 9ರ ಬಗ್ಗೆ ಮಾಹಿತಿ ನೀಡಿದ ಪರಮೇಶ್ವರ್​, ಬಿಗ್​ ಬಾಸ್​ 8, 100 ದಿನಗಳ ನಂತರ ಪೂರ್ಣಗೊಳ್ಳುತ್ತಿದೆ. ಐಪಿಎಲ್​ ಮಾದರಿಯಲ್ಲೇ ಈ ಬಾರಿಯ ಬಿಗ್​ ಬಾಸ್​ ವೇಳಾಪಟ್ಟಿ ಕೂಡ ಸ್ವಲ್ಪ ಆಚೀಚೆ ಆಗಿದೆ. ಹೀಗಾಗಿ, ಬಿಗ್​ ಬಾಸ್​ 9 ಸಣ್ಣ ಗ್ಯಾಪ್​ ನಂತರ ಬರುವ ಸಾಧ್ಯತೆ ಇದೆ. ಬಿಗ್​ ಬಾಸ್​ 9 ನವೆಂಬರ್​​ನ ಲ್ಲಿ ಬರುವ ಸಾಧ್ಯತೆ ಇದೆ ಎಂದಿದ್ದಾರೆ.

ಸುದೀಪ್​ ಏನಂದ್ರು?

ಪ್ರೋಮೋ ಮಾಡೋದು ತುಂಬಾನೇ ಮಜಾ ಇತ್ತು. ಈ ಬಾರಿಯ ಪ್ರೋಮೋಗಳು ತುಂಬಾನೇ ಇಷ್ಟವಾಗಿವೆ. ಈ ಬಾರಿ ಬಂದಿದ್ದು ಜನಸಾಮಾನ್ಯರ ಪ್ರೋಮೋ . ಬಿಗ್​ ಬಾಸ್​​ ಅನ್ನು ನಾನು ಯಾವಾಗಲೂ ಎಂಜಾಯ್​ ಮಾಡುತ್ತೇನೆ ಎಂದು ಸುದೀಪ್​ ಮಾತು ಆರಂಭಿಸಿದರು.

ಇವರು ಸ್ಪರ್ಧಿಗಳನ್ನು ತಂದು ಮನೆ ಒಳಗೆ ಇಡುತ್ತಾರೆ. ಆದರೆ, ನಂತರ ಅವರನ್ನು ನಾನು ಹ್ಯಾಂಡಲ್​ ಮಾಡಬೇಕು. ಮನೆ ಒಳಗೆ ಹೋದವರು ಹೀಗೆ ಆಡ್ತಾರೆ, ಹಾಗೆ ಆಡ್ತಾರೆ ಎಂದು ಹೇಳೋದು ಕಷ್ಟ. ಏನೋ ಮಾಡಲು ಹೋಗಿ ಏನೋ ಮಾಡಿದವರನ್ನ ನೋಡಿದ್ದೇನೆ. ಶೂಟಿಂಗ್​ಗೆ ಹೋಗುವಾಗ ಏನು ನಡೆಯುತ್ತೆ ಎನ್ನುವುದು ಖಾತ್ರಿ ಇರುತ್ತದೆ. ಆದರೆ, ಇಲ್ಲಿ ಹಾಗೆ ಆಗುವುದಿಲ್ಲ. ಸ್ಪರ್ಧಿಗಳು ಏನು ಮಾತನಾಡುತ್ತಾರೋ ಅದೇ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗುತ್ತದೆ ಎಂದಿದ್ದಾರೆ.

ಬಿಗ್​ ಬಾಸ್​ ಮನೆ ಒಳಗೆ ನೀವು ಹೋಗೋದು ಯಾವಾಗ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸುದೀಪ್​, ನಾನು ಕೇಳಿದಷ್ಟು ಸಂಭಾವನೆಯನ್ನು ಕೊಡುತ್ತಾರೆ ಎಂದರೆ ಮನೆಯ ಒಳಗೆ ಹೋಗೋಕೆ ಸಿದ್ಧನಿದ್ದೇನೆ. ಸೆಲೆಬ್ರಿಟಿಗಳೇ ಮನೆಯ ಒಳಗೆ ಹೋದರೆ ಆಮೇಲೆ ಇಲ್ಲಿ ನಿರೂಪಣೆ ಮಾಡೋದು ಯಾರು ಎನ್ನುವ ಪ್ರಶ್ನೆ ಬರುತ್ತದೆ ಎಂದು ನಕ್ಕರು ಸುದೀಪ್​.

ಇದನ್ನೂ ಓದಿ: Bigg Boss Kannada 8: ಕನ್ನಡ ಬಿಗ್​ ಬಾಸ್​-8ಕ್ಕೆ ಆಯ್ಕೆಯಾದ ಸ್ಪರ್ಧಿಗಳು ಸ್ಟಾರ್​ ಹೋಟೆಲ್​ಗಳಲ್ಲಿ ಕ್ವಾರಂಟೈನ್?

Published On - 4:44 pm, Thu, 25 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ