AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಪ್ಲೇ ಆಗಲೇ ಇಲ್ಲ ಗುಡ್​ ಮಾರ್ನಿಂಗ್​ ಸಾಂಗ್; ಇದಕ್ಕೆ ಕಾರಣ ಮಾತ್ರ ವಿಚಿತ್ರ!

ಬಿಗ್​ ಬಾಸ್​ ಮನೆಯಲ್ಲಿ 11ನೇ ದಿನ ಯಾವುದೇ ಹಾಡು ಪ್ಲೇ ಆಗೇ ಇಲ್ಲ. ಇದನ್ನು ನೋಡಿ ಮನೆ ಮಂದಿ ತುಂಬಾನೇ ಅಚ್ಚರಿ ಮತ್ತು ಭಯಗೊಂಡಿದ್ದಾರೆ!

ಬಿಗ್​ ಬಾಸ್​ ಮನೆಯಲ್ಲಿ ಪ್ಲೇ ಆಗಲೇ ಇಲ್ಲ ಗುಡ್​ ಮಾರ್ನಿಂಗ್​ ಸಾಂಗ್; ಇದಕ್ಕೆ ಕಾರಣ ಮಾತ್ರ ವಿಚಿತ್ರ!
ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 11, 2021 | 9:47 PM

Share

ಕನ್ನಡ ಹಾಡಿನ ಮೂಲಕ ಬಿಗ್​ ಬಾಸ್​ ಮನೆಯಲ್ಲಿ ಮುಂಜಾನೆ ಆರಂಭವಾಗುತ್ತದೆ. ಆದರೆ, ಬಿಗ್​ ಬಾಸ್​ ಮನೆಯಲ್ಲಿ 11ನೇ ದಿನ ಯಾವುದೇ ಹಾಡು ಪ್ಲೇ ಆಗೇ ಇಲ್ಲ. ಇದನ್ನು ನೋಡಿ ಮನೆ ಮಂದಿ ತುಂಬಾನೇ ಅಚ್ಚರಿ ಮತ್ತು ಭಯಗೊಂಡಿದ್ದಾರೆ! ಇಷ್ಟಕ್ಕೆಲ್ಲ ಕಾರಣ ಏನು ಎನ್ನುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಬಿಗ್​ ಬಾಸ್​ ಎರಡನೇ ವಾರದಲ್ಲಿ ನೀಡಲಾಗಿದ್ದ ಕಠಿಣ ಟಾಸ್ಕ್​ ಅನ್ನು ಯಶಸ್ವಿಗೊಳಿಸಲು ಮನೆಯ ಸದಸ್ಯರು ವಿಫಲರಾಗಿದ್ದರು. ಹಾಯಾಗಿ, ನಗು ನಗುತ್ತ ಆಡಬೇಕಿದ್ದ ಟಾಸ್ಕ್​ನಲ್ಲಿ ಒಬ್ಬರಿಗೊಬ್ಬರು ಕಿತ್ತಾಟ ಮಾಡಿಕೊಂಡು, ಪರಸ್ಪರ ದ್ವೇಷ ಬೆಳೆಸಿಕೊಂಡಿದ್ದರು. ಇದಕ್ಕೆ ಸಿಟ್ಟಾದ ಬಿಗ್​ ಬಾಸ್​ ಟಾಸ್ಕ್ ಕ್ಯಾನ್ಸಲ್​ ಮಾಡಿದ್ದಾರೆ. ಇದಕ್ಕೆ ಮನೆ ಮಂದಿಗೆ ಸೂಕ್ತ ಶಿಕ್ಷೆ ನೀಡುತ್ತಿದ್ದಾರೆ ಬಿಗ್​ ಬಾಸ್​.

ಬಿಗ್​ ಬಾಸ್ ಮನೆಯಲ್ಲಿ ವೈರಸ್​ ಹಾಗೂ ಮನುಷ್ಯರು ಎನ್ನುವ ಆಧಾರದ ಮೇಲೆ ಟಾಸ್ಕ್​ ನೀಡಲಾಗಿತ್ತು. ಮನೆಯ ಒಂದಷ್ಟು ಸದಸ್ಯರು ವೈರಸ್​ ಆದರೆ, ಮತ್ತೊಂದಷ್ಟು ಸದಸ್ಯರು ಮನುಷ್ಯರು. ವೈರಸ್​ ತಂಡಕ್ಕೆ ಪ್ರಶಾಂತ್​ ಸಂಬರಗಿ ಕ್ಯಾಪ್ಟನ್​. ಮನುಷ್ಯರ ತಂಡಕ್ಕೆ ಲ್ಯಾಗ್​ ಮಂಜು ನಾಯಕರಾಗಿದ್ದರು. ವೈರಸ್​ ದಾಳಿಗೆ ತುತ್ತಾಗದಂತೆ ಮನುಷ್ಯರು ಎಚ್ಚರವಿರಬೇಕು. ವೈರಸ್​ ತಂಡ ಮಾಡುವ ದಾಳಿಯಿಂದ ತಪ್ಪಿಸಿಕೊಳ್ಳಬೇಕು. ಇದು ಸಾಧ್ಯವಾಗದೆ ಇದ್ದರೆ ಮನುಷ್ಯ ತಂಡದ ಒಬ್ಬ ಸದಸ್ಯ ಕ್ವಾರಂಟೈನ್​ ಆಗಬೇಕು. ಕ್ವಾರಂಟೈನ್​ ಅವಧಿ ಅರ್ಧ ಗಂಟೆ. ಈ ವೇಳೆ ಮನುಷ್ಯ ತಂಡದವರು ಹಗ್ಗ ಹಿಡಿದು ನಿಲ್ಲಬೇಕು. ಆಗ ವೈರಸ್​ ತಂಡದವರು ತೊಂದರೆ ನೀಡಬೇಕು. ಆದರೆ, ಬಾಡಿ ಟಚ್​ ಮಾಡುವಂತಿಲ್ಲ. ಒಂದೊಮ್ಮೆ, ಕ್ವಾರಂಟೈನ್​ನಲ್ಲಿರುವವರು ಹಗ್ಗವನ್ನು ಕೈಬಿಟ್ಟರೆ ಅವರು ಸೋತಂತೆ. ಅವರು ಈ ಆಟದಿಂದ ಹೊರಗಿರಬೇಕು. ಕೊನೆಯಲ್ಲಿ ಯಾವ ತಂಡದಲ್ಲಿ ಹೆಚ್ಚು ಜನರು ಉಳಿಯುತ್ತಾರೋ ಅವರೇ ಗೆದ್ದಂತೆ.

ಈ ಟಾಸ್ಕ್​​ನಲ್ಲಿ ಒಬ್ಬರಿಗೊಬ್ಬರು ಕಿತ್ತಾಡಿಕೊಂಡರು. ಕ್ರೀಡಾ ಸ್ಫೂರ್ತಿ ಮರೆತು ಪರಸ್ಪರ ದ್ವೇಷ ಬೆಳೆಸಿಕೊಂಡರು. ಇದಕ್ಕೆ ಬಿಗ್​ ಬಾಸ್​ ಸಿಟ್ಟಾಗಿ ಟಾಸ್ಕ್​ ರದ್ದುಗೊಳಿಸುವ ಘೋಷಣೆ ಮಾಡಿದ್ದರು. ಇದಾದ ಮರುದಿನವೇ ಬಿಗ್​ ಬಾಸ್​ ಮುಂಜಾನೆ ಸಾಂಗ್​ ಹಾಕಿಲ್ಲ. ಇದನ್ನು ನೋಡಿದ ಸ್ಪರ್ಧಿಗಳು ಬಿಗ್​ ಬಾಸ್​ ತುಂಬಾನೇ ಗರಂ ಆಗಿದ್ದಾರೆ ಎಂದಿದ್ದಾರೆ!

ಇದನ್ನೂ ಓದಿ: Bigg Boss Kannada : ಬಿಗ್​ ಬಾಸ್​ ಮನೆಯಲ್ಲಿ ದರ್ಶನ್​ ಹಾಡು ಯಾಕೆ ಪ್ಲೇ ಆಗಲ್ಲ? ಸುದೀಪ್​ಗೆ ಪ್ರಶ್ನೆ ಎಸೆದ ‘ಡಿ ಬಾಸ್’​ ಫ್ಯಾನ್ಸ್​!

Published On - 9:46 pm, Thu, 11 March 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!