Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಕನ್ನಡ ಬಿಗ್​ ಬಾಸ್​​ 8ಗಾಗಿ ಕೆಲಸ ಮಾಡುವ ತಂತ್ರಜ್ಞರ ಸಂಖ್ಯೆ ಕೇಳಿದ್ರೆ ಅಚ್ಚರಿ ಪಡ್ತೀರಾ!

100 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ಇರುತ್ತಾರೆ. 17 ಜನ ಮನೆ ಸೇರಿದರೂ ಹಂತ ಹಂತವಾಗಿ ಸ್ಪರ್ಧಿಗಳು ಮನೆಯಿಂದ ಹೊರ ಬರುತ್ತಾ ಹೋಗುತ್ತಾರೆ. ಕೊನೆಗೆ ಗೆಲ್ಲೋದು ಒಬ್ಬರು ಮಾತ್ರ.

Bigg Boss Kannada 8: ಕನ್ನಡ ಬಿಗ್​ ಬಾಸ್​​ 8ಗಾಗಿ ಕೆಲಸ ಮಾಡುವ ತಂತ್ರಜ್ಞರ ಸಂಖ್ಯೆ ಕೇಳಿದ್ರೆ ಅಚ್ಚರಿ ಪಡ್ತೀರಾ!
ಸುದೀಪ್​
Follow us
ರಾಜೇಶ್ ದುಗ್ಗುಮನೆ
|

Updated on:Feb 26, 2021 | 4:31 PM

ಕನ್ನಡ ಬಿಗ್​ ಬಾಸ್​ ಸೀಸನ್​ 8 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೇ ಭಾನುವಾರ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಬಿಗ್​ ಬಾಸ್​ಗೆ ಚಾಲನೆ ಸಿಗಲಿದೆ. ಬಿಗ್​ ಬಾಸ್​ ಮನೆಗೆ ತೆರಳುವವರು ಈಗಾಗಲೇ ಹೋಟೆಲ್​ನಲ್ಲಿ ಕ್ವಾರಂಟೈನ್​ ಆಗಿದ್ದಾರೆ. ಭಾನುವಾರ ಈ ಸ್ಪರ್ಧಿಗಳು ನೇರವಾಗಿ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ. ಹಾಗಾದರೆ, ಬಿಗ್​ ಬಾಸ್​ ಶೋ ನಡೆಸೋಕೆ ಎಷ್ಟು ತಂತ್ರಜ್ಞರ ಅವಶ್ಯಕತೆ ಇದೆ ಎನ್ನುವ ಪ್ರಶ್ನೆಗೆ ಅಚ್ಚರಿಯ ಉತ್ತರ ಸಿಕ್ಕಿದೆ. 100 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ಇರುತ್ತಾರೆ. 17 ಜನ ಮನೆ ಸೇರಿದರೂ ಹಂತ ಹಂತವಾಗಿ ಸ್ಪರ್ಧಿಗಳು ಮನೆಯಿಂದ ಹೊರ ಬರುತ್ತಾ ಹೋಗುತ್ತಾರೆ. ಕೊನೆಗೆ ಗೆಲ್ಲೋದು ಒಬ್ಬರು ಮಾತ್ರ. 100 ದಿನಗಳ ಕಾಲ ಸಾಕಷ್ಟು ಜನ ತಂತ್ರಜ್ಞರು ಕೆಲಸ ಮಾಡುತ್ತಾರೆ. ಹಾಗಾದರೆ, ಬಿಗ್​ ಬಾಸ್​ ಉತ್ತಮ ರೀತಿಯಲ್ಲಿ ಮೂಡಿ ಬರಲು ಎಷ್ಟು ಜನರು ಶ್ರಮಿಸುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಬಿಗ್​​ ಬಾಸ್​8ಗೆ ಸಂಬಂಧಿಸಿದಂತೆ ನಡೆದ ಸುದ್ದಿಗೋಷ್ಠಿಯಲ್ಲಿ ಕಲರ್ಸ್​ ಕನ್ನಡ ವಾಹಿನಿಯ ಮುಖ್ಯಸ್ಥ ಪರಮೇಶ್ವರ್​ ಗುಂಡ್ಕಲ್​ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷ 300 ಜನರು ಕೆಲಸ ಮಾಡುತ್ತಿದ್ದರು. ಆದರೆ, ಈ ವರ್ಷ ಸೋಮವಾರದಿಂದ ಶುಕ್ರವಾರದವರೆಗೆ ಮನೆಯಲ್ಲಿ ಏನೆಲ್ಲ ಆಗುತ್ತಿದೆ ಎನ್ನುವುದುನ್ನು ವೂಟ್​ನಲ್ಲಿ 24 ಗಂಟೆ ಪ್ರಸಾರ ಮಾಡಲಾಗುತ್ತಿದೆ. ಹೀಗಾಗಿ, ಎರಡು ಪಿಸಿಆರ್​ ರೂಂಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಕಾರಣಕ್ಕೆ 100 ಜನರನ್ನು ಹೆಚ್ಚುವರಿಯಾಗಿ ಕೆಲಸ ಮಾಡಲಿದ್ದಾರೆ. ಈ ಬಾರಿ ಒಟ್ಟು 400 ಸಿಬ್ಬಂದಿ ಕೆಲಸ ಮಾಡಲಿದ್ದಾರೆ. 80ಕ್ಕೂ ಅಧಿಕ ಕ್ಯಾಮೆರಾಗಳು ಇರಲಿವೆ ಎಂದರು ಪರಮೇಶ್ವರ್​.

17 ಸ್ಪರ್ಧಿಗಳು

ಈ ಬಾರಿ ಎಷ್ಟು ಸ್ಪರ್ಧಿಗಳು ಇರುತ್ತಾರೆ ಎನ್ನುವ ಪ್ರಶ್ನೆಗೆ ಪರಮೇಶ್ವರ್ ಗುಂಡ್ಕಲ್​ ಉತ್ತರಿಸಿದ್ದಾರೆ. ಈ ಬಾರಿ 17 ಸ್ಪರ್ಧಿಗಳನ್ನು ಮನೆಗೆ ಕಳುಹಿಸಬೇಕು ಎನ್ನುವ ಉದ್ದೇಶ ಇದೆ. ಇವರನ್ನು ಈಗಾಗಲೇ ಕ್ವಾರಂಟೈನ್​ನಲ್ಲಿ ಇಡಲಾಗಿದೆ. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನೆಗೆಟಿವ್​ ಬಂದಿದೆ. ಯಾರಾದರೂ ಒಬ್ಬರಿಗೆ ಪಾಸಿಟಿವ್​ ಬಂದರೂ ಅವರನ್ನು ಮನೆ ಒಳಗೆ ಕಳುಹಿಸೋಕೆ ಆಗಲ್ಲ. ಹೀಗಾಗಿ ಈಗಲೇ ಸ್ಪರ್ಧಿಗಳ ಲೆಕ್ಕ ನೀಡೋಕೆ ಆಗಲ್ಲ ಎಂದಿದ್ದಾರೆ ಅವರು. ​

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​ ಸೀಸನ್​ 8 ಸೆಲೆಬ್ರಿಟಿಗಳಿಗೆ ಮೀಸಲು; ಪ್ರತಿದಿನ ರಾತ್ರಿ 9:30ಕ್ಕೆ ಶೋ

Published On - 4:31 pm, Fri, 26 February 21

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್