AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ!

ಬಿಗ್​ ಬಾಸ್​ ಮನೆಯೊಳಗೆ ಪ್ರೀತಿ ಪ್ರೇಮ ಸಹಜ. ಅದನ್ನು ಕೆಲವರು ಅಲ್ಲೇ ಬಿಟ್ಟು ಬರುತ್ತಾರೆ. ಮತ್ತೆ ಕೆಲವರು ಗಂಭೀರವಾಗಿ ಸ್ವೀಕರಿಸಿ ಮದುವೆಯೂ ಆಗ್ತಾರೆ.

ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ!
ಅರವಿಂದ್​-ದಿವ್ಯಾ
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Mar 21, 2021 | 4:08 PM

Share

ದಿನದಿಂದ ದಿನಕ್ಕೆ ಬಿಗ್​ ಬಾಸ್ ಮನೆಯಲ್ಲಿ ಪ್ರೀತಿ-ಪ್ರೇಮದ ಪರಿಮಳ ಹೆಚ್ಚಾಗುತ್ತಿದೆ. ಮೊದಲು ದಿವ್ಯಾ ಸುರೇಶ್​ ಮತ್ತು ಮಂಜು ಪಾವಗಡ ನಡುವೆ ಹೆಚ್ಚು ಆಪ್ತತೆ ಕಾಣಿಸಿತು. ಈಗ ಅರವಿಂದ್​ ಕೆ.ಪಿ. ಮತ್ತು ದಿವ್ಯಾ ಉರುಡುಗ ನಡುವೆ ಸಂಬಂಧ ಗಟ್ಟಿ ಆಗುತ್ತಿದೆ. ವೀಕ್ಷಕರಿಗೆ ಅದು ಸ್ಪಷ್ಟವಾಗಿ ಕಾಣುತ್ತಿದೆ.

ಮನೆಯ ಸದಸ್ಯರು ಕೂಡ ಅರವಿಂದ್ ಹಾಗೂ ದಿವ್ಯಾ ಉರುಡುಗ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ದಿವ್ಯಾಗೆ ಅರವಿಂದ್​ ಮನಸೋತಿದ್ದಾರೆ ಎಂದು ಪ್ರಶಾಂತ್​ ಸಂಬರಗಿ ಅಭಿಪ್ರಾಯ ಪಟ್ಟಿದ್ದಾರೆ. ಅದಕ್ಕೆ ಗೀತಾ ಭಾರತಿ ಭಟ್​ ಕೂಡ ಧ್ವನಿ ಗೂಡಿಸಿದ್ದಾರೆ. ಎಷ್ಟರಮಟ್ಟಿಗೆಂದರೆ, ದಿವ್ಯಾ-ಅರವಿಂದ್​ ಮದುವೆ ಆಗೋದು ಖಚಿತ ಎಂಬ ರೀತಿಯಲ್ಲಿ ಗೀತಾ-ಪ್ರಶಾಂತ್ ಮಾತನಾಡಿದ್ದಾರೆ.

ಜೋಡಿ ಟಾಸ್ಕ್​ನಲ್ಲಿ ದಿವ್ಯಾ ಮತ್ತು ಅರವಿಂದ್ ಜೊತೆಯಾಗಿ ಆಟ ಆಡಿದರು. ಆದರೆ ಆ ಟಾಸ್ಕ್​ ಮುಗಿದು ಎರಡು ದಿನ ಕಳೆದರೂ ಕೂಡ ಅವರಿಬ್ಬರು ಜೊತೆಜೊತೆಯಾಗಿಯೇ ಕಾಲ ಕಳೆಯುತ್ತಿದ್ದಾರೆ. ಎಲ್ಲರ ಮನದಲ್ಲಿ ಅನುಮಾನ ಮೂಡಲು ಇದೇ ಕಾರಣ ಆಗಿದೆ. ‘ಇರಲಿ.. ಇಬ್ಬರಿಗೂ ಇದರಿಂದ ಒಳ್ಳೆಯದಾದರೆ ಸಾಕು’ ಎಂದು ಗೀತಾ ಹೇಳಿದ್ದಾರೆ.

‘ಮದುವೆ ಮಾಡಿಸಲು ಯಾರ್ಯಾರೋ ಏನೇನೋ ಪ್ರಯತ್ನ ಮಾಡುತ್ತಾರೆ. ಇದು ಕೂಡ ಒಂದು ಪ್ರಯತ್ನ. ಬಿಗ್ ಬಾಸ್​ ಪ್ರಯತ್ನ’ ಎಂದು ಪ್ರಶಾಂತ್​ ಹೇಳಿದ್ದಾರೆ. ‘ನಮಗೆಲ್ಲ ಒಂದು ಮದುವೆ ಊಟ ಸಿಕ್ಕಂತೆ ಆಗುತ್ತದೆ. ಹೇಗಿದ್ದರೂ ಶುಭಾ ಅಕ್ಕನ ಮದುವೆ ಊಟಕ್ಕೆ ನಾವೆಲ್ಲ ಹೋಗುತ್ತೇವೆ. ಅದರ ಜೊತೆಗೆ ಇದೂ ಒಂದು ಆಗುತ್ತದೆ’ ಎಂದು ಹೇಳಿದ್ದಾರೆ ಗೀತಾ.

ಬಿಗ್​ ಬಾಸ್​ ಕನ್ನಡ ಸೀಸನ್​ 5ರಲ್ಲಿ ಸ್ಪರ್ಧಿಗಳಾಗಿದ್ದ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ನಡುವೆ ಇದೇ ರೀತಿ ಪ್ರೀತಿ ಚಿಗುರಿತ್ತು. ಮನೆಯಿಂದ ಹೊರಬಂದ ಬಳಿಕ ಅವರಿಬ್ಬರು ಮದುವೆ ಆಗುವ ನಿರ್ಧಾರಕ್ಕೆ ಬಂದರು. ಅದೇ ಮಾರ್ಗದಲ್ಲಿ ದಿವ್ಯಾ ಮತ್ತು ಅರವಿಂದ್​ ಕೂಡ ಸಾಗುವ ಲಕ್ಷಣ ಗೋಚರಿಸುತ್ತಿದೆ. ಅಥವಾ ಇದೆಲ್ಲರೂ ಆಟದ ಸ್ಟ್ರ್ಯಾಟಜಿ ಆಗಿದ್ದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ

BBK8: ತಂದೆ-ಮಗಳ ಪ್ರೀತಿ ಮೇಲೆಯೇ ಶಂಕರ್​ ಅಶ್ವತ್ಥ್​ಗೆ ಅನುಮಾನ! ಮಾನವೀಯತೆಗೆ ಬೆಲೆ ಇಲ್ವಾ?

4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ