AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ!

ಬಿಗ್​ ಬಾಸ್​ ಮನೆಯೊಳಗೆ ಪ್ರೀತಿ ಪ್ರೇಮ ಸಹಜ. ಅದನ್ನು ಕೆಲವರು ಅಲ್ಲೇ ಬಿಟ್ಟು ಬರುತ್ತಾರೆ. ಮತ್ತೆ ಕೆಲವರು ಗಂಭೀರವಾಗಿ ಸ್ವೀಕರಿಸಿ ಮದುವೆಯೂ ಆಗ್ತಾರೆ.

ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ!
ಅರವಿಂದ್​-ದಿವ್ಯಾ
ಮದನ್​ ಕುಮಾರ್​
| Edited By: |

Updated on: Mar 21, 2021 | 4:08 PM

Share

ದಿನದಿಂದ ದಿನಕ್ಕೆ ಬಿಗ್​ ಬಾಸ್ ಮನೆಯಲ್ಲಿ ಪ್ರೀತಿ-ಪ್ರೇಮದ ಪರಿಮಳ ಹೆಚ್ಚಾಗುತ್ತಿದೆ. ಮೊದಲು ದಿವ್ಯಾ ಸುರೇಶ್​ ಮತ್ತು ಮಂಜು ಪಾವಗಡ ನಡುವೆ ಹೆಚ್ಚು ಆಪ್ತತೆ ಕಾಣಿಸಿತು. ಈಗ ಅರವಿಂದ್​ ಕೆ.ಪಿ. ಮತ್ತು ದಿವ್ಯಾ ಉರುಡುಗ ನಡುವೆ ಸಂಬಂಧ ಗಟ್ಟಿ ಆಗುತ್ತಿದೆ. ವೀಕ್ಷಕರಿಗೆ ಅದು ಸ್ಪಷ್ಟವಾಗಿ ಕಾಣುತ್ತಿದೆ.

ಮನೆಯ ಸದಸ್ಯರು ಕೂಡ ಅರವಿಂದ್ ಹಾಗೂ ದಿವ್ಯಾ ಉರುಡುಗ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ದಿವ್ಯಾಗೆ ಅರವಿಂದ್​ ಮನಸೋತಿದ್ದಾರೆ ಎಂದು ಪ್ರಶಾಂತ್​ ಸಂಬರಗಿ ಅಭಿಪ್ರಾಯ ಪಟ್ಟಿದ್ದಾರೆ. ಅದಕ್ಕೆ ಗೀತಾ ಭಾರತಿ ಭಟ್​ ಕೂಡ ಧ್ವನಿ ಗೂಡಿಸಿದ್ದಾರೆ. ಎಷ್ಟರಮಟ್ಟಿಗೆಂದರೆ, ದಿವ್ಯಾ-ಅರವಿಂದ್​ ಮದುವೆ ಆಗೋದು ಖಚಿತ ಎಂಬ ರೀತಿಯಲ್ಲಿ ಗೀತಾ-ಪ್ರಶಾಂತ್ ಮಾತನಾಡಿದ್ದಾರೆ.

ಜೋಡಿ ಟಾಸ್ಕ್​ನಲ್ಲಿ ದಿವ್ಯಾ ಮತ್ತು ಅರವಿಂದ್ ಜೊತೆಯಾಗಿ ಆಟ ಆಡಿದರು. ಆದರೆ ಆ ಟಾಸ್ಕ್​ ಮುಗಿದು ಎರಡು ದಿನ ಕಳೆದರೂ ಕೂಡ ಅವರಿಬ್ಬರು ಜೊತೆಜೊತೆಯಾಗಿಯೇ ಕಾಲ ಕಳೆಯುತ್ತಿದ್ದಾರೆ. ಎಲ್ಲರ ಮನದಲ್ಲಿ ಅನುಮಾನ ಮೂಡಲು ಇದೇ ಕಾರಣ ಆಗಿದೆ. ‘ಇರಲಿ.. ಇಬ್ಬರಿಗೂ ಇದರಿಂದ ಒಳ್ಳೆಯದಾದರೆ ಸಾಕು’ ಎಂದು ಗೀತಾ ಹೇಳಿದ್ದಾರೆ.

‘ಮದುವೆ ಮಾಡಿಸಲು ಯಾರ್ಯಾರೋ ಏನೇನೋ ಪ್ರಯತ್ನ ಮಾಡುತ್ತಾರೆ. ಇದು ಕೂಡ ಒಂದು ಪ್ರಯತ್ನ. ಬಿಗ್ ಬಾಸ್​ ಪ್ರಯತ್ನ’ ಎಂದು ಪ್ರಶಾಂತ್​ ಹೇಳಿದ್ದಾರೆ. ‘ನಮಗೆಲ್ಲ ಒಂದು ಮದುವೆ ಊಟ ಸಿಕ್ಕಂತೆ ಆಗುತ್ತದೆ. ಹೇಗಿದ್ದರೂ ಶುಭಾ ಅಕ್ಕನ ಮದುವೆ ಊಟಕ್ಕೆ ನಾವೆಲ್ಲ ಹೋಗುತ್ತೇವೆ. ಅದರ ಜೊತೆಗೆ ಇದೂ ಒಂದು ಆಗುತ್ತದೆ’ ಎಂದು ಹೇಳಿದ್ದಾರೆ ಗೀತಾ.

ಬಿಗ್​ ಬಾಸ್​ ಕನ್ನಡ ಸೀಸನ್​ 5ರಲ್ಲಿ ಸ್ಪರ್ಧಿಗಳಾಗಿದ್ದ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ನಡುವೆ ಇದೇ ರೀತಿ ಪ್ರೀತಿ ಚಿಗುರಿತ್ತು. ಮನೆಯಿಂದ ಹೊರಬಂದ ಬಳಿಕ ಅವರಿಬ್ಬರು ಮದುವೆ ಆಗುವ ನಿರ್ಧಾರಕ್ಕೆ ಬಂದರು. ಅದೇ ಮಾರ್ಗದಲ್ಲಿ ದಿವ್ಯಾ ಮತ್ತು ಅರವಿಂದ್​ ಕೂಡ ಸಾಗುವ ಲಕ್ಷಣ ಗೋಚರಿಸುತ್ತಿದೆ. ಅಥವಾ ಇದೆಲ್ಲರೂ ಆಟದ ಸ್ಟ್ರ್ಯಾಟಜಿ ಆಗಿದ್ದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ

BBK8: ತಂದೆ-ಮಗಳ ಪ್ರೀತಿ ಮೇಲೆಯೇ ಶಂಕರ್​ ಅಶ್ವತ್ಥ್​ಗೆ ಅನುಮಾನ! ಮಾನವೀಯತೆಗೆ ಬೆಲೆ ಇಲ್ವಾ?

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!