Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ!

ಬಿಗ್​ ಬಾಸ್​ ಮನೆಯೊಳಗೆ ಪ್ರೀತಿ ಪ್ರೇಮ ಸಹಜ. ಅದನ್ನು ಕೆಲವರು ಅಲ್ಲೇ ಬಿಟ್ಟು ಬರುತ್ತಾರೆ. ಮತ್ತೆ ಕೆಲವರು ಗಂಭೀರವಾಗಿ ಸ್ವೀಕರಿಸಿ ಮದುವೆಯೂ ಆಗ್ತಾರೆ.

ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ!
ಅರವಿಂದ್​-ದಿವ್ಯಾ
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Mar 21, 2021 | 4:08 PM

ದಿನದಿಂದ ದಿನಕ್ಕೆ ಬಿಗ್​ ಬಾಸ್ ಮನೆಯಲ್ಲಿ ಪ್ರೀತಿ-ಪ್ರೇಮದ ಪರಿಮಳ ಹೆಚ್ಚಾಗುತ್ತಿದೆ. ಮೊದಲು ದಿವ್ಯಾ ಸುರೇಶ್​ ಮತ್ತು ಮಂಜು ಪಾವಗಡ ನಡುವೆ ಹೆಚ್ಚು ಆಪ್ತತೆ ಕಾಣಿಸಿತು. ಈಗ ಅರವಿಂದ್​ ಕೆ.ಪಿ. ಮತ್ತು ದಿವ್ಯಾ ಉರುಡುಗ ನಡುವೆ ಸಂಬಂಧ ಗಟ್ಟಿ ಆಗುತ್ತಿದೆ. ವೀಕ್ಷಕರಿಗೆ ಅದು ಸ್ಪಷ್ಟವಾಗಿ ಕಾಣುತ್ತಿದೆ.

ಮನೆಯ ಸದಸ್ಯರು ಕೂಡ ಅರವಿಂದ್ ಹಾಗೂ ದಿವ್ಯಾ ಉರುಡುಗ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ದಿವ್ಯಾಗೆ ಅರವಿಂದ್​ ಮನಸೋತಿದ್ದಾರೆ ಎಂದು ಪ್ರಶಾಂತ್​ ಸಂಬರಗಿ ಅಭಿಪ್ರಾಯ ಪಟ್ಟಿದ್ದಾರೆ. ಅದಕ್ಕೆ ಗೀತಾ ಭಾರತಿ ಭಟ್​ ಕೂಡ ಧ್ವನಿ ಗೂಡಿಸಿದ್ದಾರೆ. ಎಷ್ಟರಮಟ್ಟಿಗೆಂದರೆ, ದಿವ್ಯಾ-ಅರವಿಂದ್​ ಮದುವೆ ಆಗೋದು ಖಚಿತ ಎಂಬ ರೀತಿಯಲ್ಲಿ ಗೀತಾ-ಪ್ರಶಾಂತ್ ಮಾತನಾಡಿದ್ದಾರೆ.

ಜೋಡಿ ಟಾಸ್ಕ್​ನಲ್ಲಿ ದಿವ್ಯಾ ಮತ್ತು ಅರವಿಂದ್ ಜೊತೆಯಾಗಿ ಆಟ ಆಡಿದರು. ಆದರೆ ಆ ಟಾಸ್ಕ್​ ಮುಗಿದು ಎರಡು ದಿನ ಕಳೆದರೂ ಕೂಡ ಅವರಿಬ್ಬರು ಜೊತೆಜೊತೆಯಾಗಿಯೇ ಕಾಲ ಕಳೆಯುತ್ತಿದ್ದಾರೆ. ಎಲ್ಲರ ಮನದಲ್ಲಿ ಅನುಮಾನ ಮೂಡಲು ಇದೇ ಕಾರಣ ಆಗಿದೆ. ‘ಇರಲಿ.. ಇಬ್ಬರಿಗೂ ಇದರಿಂದ ಒಳ್ಳೆಯದಾದರೆ ಸಾಕು’ ಎಂದು ಗೀತಾ ಹೇಳಿದ್ದಾರೆ.

‘ಮದುವೆ ಮಾಡಿಸಲು ಯಾರ್ಯಾರೋ ಏನೇನೋ ಪ್ರಯತ್ನ ಮಾಡುತ್ತಾರೆ. ಇದು ಕೂಡ ಒಂದು ಪ್ರಯತ್ನ. ಬಿಗ್ ಬಾಸ್​ ಪ್ರಯತ್ನ’ ಎಂದು ಪ್ರಶಾಂತ್​ ಹೇಳಿದ್ದಾರೆ. ‘ನಮಗೆಲ್ಲ ಒಂದು ಮದುವೆ ಊಟ ಸಿಕ್ಕಂತೆ ಆಗುತ್ತದೆ. ಹೇಗಿದ್ದರೂ ಶುಭಾ ಅಕ್ಕನ ಮದುವೆ ಊಟಕ್ಕೆ ನಾವೆಲ್ಲ ಹೋಗುತ್ತೇವೆ. ಅದರ ಜೊತೆಗೆ ಇದೂ ಒಂದು ಆಗುತ್ತದೆ’ ಎಂದು ಹೇಳಿದ್ದಾರೆ ಗೀತಾ.

ಬಿಗ್​ ಬಾಸ್​ ಕನ್ನಡ ಸೀಸನ್​ 5ರಲ್ಲಿ ಸ್ಪರ್ಧಿಗಳಾಗಿದ್ದ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ನಡುವೆ ಇದೇ ರೀತಿ ಪ್ರೀತಿ ಚಿಗುರಿತ್ತು. ಮನೆಯಿಂದ ಹೊರಬಂದ ಬಳಿಕ ಅವರಿಬ್ಬರು ಮದುವೆ ಆಗುವ ನಿರ್ಧಾರಕ್ಕೆ ಬಂದರು. ಅದೇ ಮಾರ್ಗದಲ್ಲಿ ದಿವ್ಯಾ ಮತ್ತು ಅರವಿಂದ್​ ಕೂಡ ಸಾಗುವ ಲಕ್ಷಣ ಗೋಚರಿಸುತ್ತಿದೆ. ಅಥವಾ ಇದೆಲ್ಲರೂ ಆಟದ ಸ್ಟ್ರ್ಯಾಟಜಿ ಆಗಿದ್ದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ ಮನೆಯಿಂದ ಹೊರಬಂದ ಗೀತಾ? ‘ಬ್ರಹ್ಮಗಂಟು’ ನಟಿಯ ಆಟ ಅಂತ್ಯ

BBK8: ತಂದೆ-ಮಗಳ ಪ್ರೀತಿ ಮೇಲೆಯೇ ಶಂಕರ್​ ಅಶ್ವತ್ಥ್​ಗೆ ಅನುಮಾನ! ಮಾನವೀಯತೆಗೆ ಬೆಲೆ ಇಲ್ವಾ?

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ